<p><strong>ವಿಜಾಪುರ: </strong>`ಬರಪೀಡಿತ ಪ್ರದೇಶಗಳ ಜನರ ನೀರಿನ ಬವಣೆ ನೀಗಿಸಲು ಸರ್ಕಾರ ತಕ್ಷಣವೇ ಎಲ್ಲ ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೆ ಪ್ರತ್ಯೇಕ ವಿದ್ಯುತ್ ಫೀಡರ್ ಅಳವಡಿಸಬೇಕು~ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು.<br /> <br /> ತಾಲ್ಲೂಕಿನ ಲೋಹಗಾಂವ, ಇಟ್ಟಂಗಿಹಾಳ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಬರ ಪರಿಸ್ಥಿತಿಯ ಖುದ್ದು ಅಧ್ಯಯನ ನಡೆಸಿದ ನಂತರ ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಿದೆ. ಕೆಲವೆಡೆ ಜಲ ಮೂಲದ ಸಮಸ್ಯೆಯಾದರೆ, ಬಹುತೇಕ ಕಡೆಗಳಲ್ಲಿ ವಿದ್ಯುತ್ ಕ್ಷಾಮದಿಂದ ನೀರು ದೊರೆಯುತ್ತಿಲ್ಲ. ಯಾವ ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೂ ಸರ್ಕಾರ ಪ್ರತ್ಯೇಕ ಫೀಡರ್ನಿಂದ ವಿದ್ಯುತ್ ಪೂರೈಸುತ್ತಿಲ್ಲ ಎಂದರು.<br /> <br /> ರಾಜ್ಯ ಸರ್ಕಾರ ಬರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕುಡಿಯುವ ನೀರು-ಮೇವು-ಜನರಿಗೆ ಉದ್ಯೋಗ ನೀಡಲು ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಬರ-ನೆರೆ ಕುರಿತು ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಈ ವರೆಗೆ ಮನವಿಯನ್ನೂ ಸಲ್ಲಿಸಿಲ್ಲ. ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲಿಕ್ಕೆ ಯಾವುದೇ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂದು ದೂರಿದರು. <br /> <br /> ಶಾಸಕರಾದ ಎಸ್.ಆರ್. ಪಾಟೀಲ, ಸಿ.ಎಸ್. ನಾಡಗೌಡ, ಮಾಜಿ ಶಾಸಕರಾದ ರಾಜು ಆಲಗೂರ, ಪ್ರಕಾಶ ರಾಠೋಡ, ಶರಣಪ್ಪ ಸುಣಗಾರ, ಪ್ರಮುಖರಾದ ಯಶವಂತರಾಯಗೌಡ ಪಾಟೀಲ, ಎಸ್.ಎಂ. ಪಾಟೀಲ ಗಣಿಹಾರ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>`ಬರಪೀಡಿತ ಪ್ರದೇಶಗಳ ಜನರ ನೀರಿನ ಬವಣೆ ನೀಗಿಸಲು ಸರ್ಕಾರ ತಕ್ಷಣವೇ ಎಲ್ಲ ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೆ ಪ್ರತ್ಯೇಕ ವಿದ್ಯುತ್ ಫೀಡರ್ ಅಳವಡಿಸಬೇಕು~ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು.<br /> <br /> ತಾಲ್ಲೂಕಿನ ಲೋಹಗಾಂವ, ಇಟ್ಟಂಗಿಹಾಳ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಬರ ಪರಿಸ್ಥಿತಿಯ ಖುದ್ದು ಅಧ್ಯಯನ ನಡೆಸಿದ ನಂತರ ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಿದೆ. ಕೆಲವೆಡೆ ಜಲ ಮೂಲದ ಸಮಸ್ಯೆಯಾದರೆ, ಬಹುತೇಕ ಕಡೆಗಳಲ್ಲಿ ವಿದ್ಯುತ್ ಕ್ಷಾಮದಿಂದ ನೀರು ದೊರೆಯುತ್ತಿಲ್ಲ. ಯಾವ ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೂ ಸರ್ಕಾರ ಪ್ರತ್ಯೇಕ ಫೀಡರ್ನಿಂದ ವಿದ್ಯುತ್ ಪೂರೈಸುತ್ತಿಲ್ಲ ಎಂದರು.<br /> <br /> ರಾಜ್ಯ ಸರ್ಕಾರ ಬರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕುಡಿಯುವ ನೀರು-ಮೇವು-ಜನರಿಗೆ ಉದ್ಯೋಗ ನೀಡಲು ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಬರ-ನೆರೆ ಕುರಿತು ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಈ ವರೆಗೆ ಮನವಿಯನ್ನೂ ಸಲ್ಲಿಸಿಲ್ಲ. ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲಿಕ್ಕೆ ಯಾವುದೇ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂದು ದೂರಿದರು. <br /> <br /> ಶಾಸಕರಾದ ಎಸ್.ಆರ್. ಪಾಟೀಲ, ಸಿ.ಎಸ್. ನಾಡಗೌಡ, ಮಾಜಿ ಶಾಸಕರಾದ ರಾಜು ಆಲಗೂರ, ಪ್ರಕಾಶ ರಾಠೋಡ, ಶರಣಪ್ಪ ಸುಣಗಾರ, ಪ್ರಮುಖರಾದ ಯಶವಂತರಾಯಗೌಡ ಪಾಟೀಲ, ಎಸ್.ಎಂ. ಪಾಟೀಲ ಗಣಿಹಾರ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>