<p><strong>ಶಿವಮೊಗ್ಗ: </strong>ಜಿಲ್ಲೆಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಪಡಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಕುರಿತ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತಾಲ್ಲೂಕು ಟಾಸ್ಕ್ಪೋರ್ಸ್ ಸಮಿತಿ ಬೇಡಿಕೆ ಅನ್ವಯ ತಾಲ್ಲೂಕುವಾರು ಅನುದಾನ ಬಿಡುಗಡೆ ಮಾಡಲಾಗಿದೆಯಲ್ಲದೆ, ಅಗತ್ಯ ಬಿದ್ದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.<br /> <br /> ಶಿವಮೊಗ್ಗ ತಾಲ್ಲೂಕಿನಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಈಗಾಗಲರೂೇ 30.21 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಕೈಗೊಳ್ಳಲಾಗಿದ್ದ 31 ಕಾಮಗಾರಿಗಳ ಪೈಕಿ 22 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿಕೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.<br /> <br /> ಭದ್ರಾವತಿ ತಾಲ್ಲೂಕಿಗೆ ರೂ 8.39 ಲಕ್ಷ ಅನುದಾನ ನೀಡಿದ್ದು, 12 ಕಾಮಗಾರಿಗಳು ಪೂರ್ಣಗೊಂಡಿವೆ. ತೀರ್ಥಹಳ್ಳಿ ತಾಲ್ಲೂಕಿಗೆ ಒಟ್ಟು ರೂ 68.33 ಲಕ್ಷ ಅನುದಾನ ನೀಡಿದ್ದು, 11 ಕಾಮಗಾರಿಗಳು ಪೂರ್ಣಗೊಂಡಿವೆ.<br /> <br /> ಸಾಗರ ತಾಲ್ಲೂಕಿಗೆ ಈಗಾಗಲರೂೇ 9.83 ಲಕ್ಷ ಅನುದಾನ ನೀಡಿದ್ದು, ತಕ್ಷಣವೇ ರೂ 15 ಲಕ್ಷ ನೀಡಲಾಗುವುದು ಎಂದ ಜಿಲ್ಲಾಧಿಕಾರಿ, ಸೊರಬ ತಾಲ್ಲೂಕಿಗೆ ಪ್ರಥಮ ಕಂತಾಗಿ ಬಿಡುಗಡೆಯಾಗಿದ್ದ ರೂ 8.33 ಲಕ್ಷ ಅನುದಾನದಲ್ಲಿ 6 ಕಾಮಗಾರಿ ಪೂರ್ಣಗೊಳಿಸಲಾಗಿದೆ. ತುರ್ತಾಗಿ ರೂ 10 ಲಕ್ಷ ಬಿಡುಗಡೆ ಮಾಡುವುದಾಗಿ ತಿಳಿಸಿದರು.<br /> <br /> ಶಿಕಾರಿಪುರ ತಾಲ್ಲೂಕಿಗೆ ರೂ 20 ಲಕ್ಷ ಅನುದಾನ ಒದಗಿಸಿದ್ದು, 18 ಕಾಮಗಾರಿ ಕೈಗೊಳ್ಳಲಾಗಿದೆ. ಹೊಸನಗರ ತಾಲ್ಲೂಕಿಗೆ ರೂ 60 ಲಕ್ಷ ಅನುದಾನ ನೀಡಿದ್ದು, ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ವ್ಯವಸ್ಥೆ ಕಲ್ಪಿಸಲು ಅನುದಾನ ಬಳಸಿಕೊಳ್ಳುವಂತೆ ಸೂಚಿಸಿದರು.<br /> <br /> ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತೆ ವಹಿಸಲು ರೂ 25 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯಲು ಮುಂದಾಗುವ ರೈತರಿಗೆ ಮೇವಿನ ಬೀಜ ಒದಗಿಸಲಾಗುವುದು ಎಂದು ತಿಳಿಸಿದರು.<br /> <br /> ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್ ಮಾತನಾಡಿ, ಮಂಜೂರಾತಿ ಅನುದಾನ ಬಿಡುಗಡೆ ಇತ್ಯಾದಿಗಳಿಗಾಗಿ ಕಾಯದೇ ಸಮಸ್ಯಾತ್ಮಕ ಗ್ರಾಮಗಳಿಗೆ ತುರ್ತಾಗಿ ನೀರು ಒದಗಿಸಬೇಕು. ಅನಿವಾರ್ಯವಿದ್ದಲ್ಲಿ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು. ಇಲ್ಲವಾದರೆ, ಪರ್ಯಾಯ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಎ. ಹನುಮನರಸಯ್ಯ ಮಾತನಾಡಿ, ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಶಾಸಕರು ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರ ಗಮನಕ್ಕೆ ತಂದು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದು ಸೂಚಿಸಿದರು.<br /> <br /> ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಹಿರಿಯ ಉಪ ವಿಭಾಗಾಧಿಕಾರಿ ಎಂ.ಎನ್. ವೈಶಾಲಿ, ಉಪ ವಿಭಾಗಾಧಿಕಾರಿ ಪ್ರವೀಣ್ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಜಿಲ್ಲೆಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಪಡಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಕುರಿತ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತಾಲ್ಲೂಕು ಟಾಸ್ಕ್ಪೋರ್ಸ್ ಸಮಿತಿ ಬೇಡಿಕೆ ಅನ್ವಯ ತಾಲ್ಲೂಕುವಾರು ಅನುದಾನ ಬಿಡುಗಡೆ ಮಾಡಲಾಗಿದೆಯಲ್ಲದೆ, ಅಗತ್ಯ ಬಿದ್ದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.<br /> <br /> ಶಿವಮೊಗ್ಗ ತಾಲ್ಲೂಕಿನಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಈಗಾಗಲರೂೇ 30.21 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಕೈಗೊಳ್ಳಲಾಗಿದ್ದ 31 ಕಾಮಗಾರಿಗಳ ಪೈಕಿ 22 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿಕೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.<br /> <br /> ಭದ್ರಾವತಿ ತಾಲ್ಲೂಕಿಗೆ ರೂ 8.39 ಲಕ್ಷ ಅನುದಾನ ನೀಡಿದ್ದು, 12 ಕಾಮಗಾರಿಗಳು ಪೂರ್ಣಗೊಂಡಿವೆ. ತೀರ್ಥಹಳ್ಳಿ ತಾಲ್ಲೂಕಿಗೆ ಒಟ್ಟು ರೂ 68.33 ಲಕ್ಷ ಅನುದಾನ ನೀಡಿದ್ದು, 11 ಕಾಮಗಾರಿಗಳು ಪೂರ್ಣಗೊಂಡಿವೆ.<br /> <br /> ಸಾಗರ ತಾಲ್ಲೂಕಿಗೆ ಈಗಾಗಲರೂೇ 9.83 ಲಕ್ಷ ಅನುದಾನ ನೀಡಿದ್ದು, ತಕ್ಷಣವೇ ರೂ 15 ಲಕ್ಷ ನೀಡಲಾಗುವುದು ಎಂದ ಜಿಲ್ಲಾಧಿಕಾರಿ, ಸೊರಬ ತಾಲ್ಲೂಕಿಗೆ ಪ್ರಥಮ ಕಂತಾಗಿ ಬಿಡುಗಡೆಯಾಗಿದ್ದ ರೂ 8.33 ಲಕ್ಷ ಅನುದಾನದಲ್ಲಿ 6 ಕಾಮಗಾರಿ ಪೂರ್ಣಗೊಳಿಸಲಾಗಿದೆ. ತುರ್ತಾಗಿ ರೂ 10 ಲಕ್ಷ ಬಿಡುಗಡೆ ಮಾಡುವುದಾಗಿ ತಿಳಿಸಿದರು.<br /> <br /> ಶಿಕಾರಿಪುರ ತಾಲ್ಲೂಕಿಗೆ ರೂ 20 ಲಕ್ಷ ಅನುದಾನ ಒದಗಿಸಿದ್ದು, 18 ಕಾಮಗಾರಿ ಕೈಗೊಳ್ಳಲಾಗಿದೆ. ಹೊಸನಗರ ತಾಲ್ಲೂಕಿಗೆ ರೂ 60 ಲಕ್ಷ ಅನುದಾನ ನೀಡಿದ್ದು, ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ವ್ಯವಸ್ಥೆ ಕಲ್ಪಿಸಲು ಅನುದಾನ ಬಳಸಿಕೊಳ್ಳುವಂತೆ ಸೂಚಿಸಿದರು.<br /> <br /> ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತೆ ವಹಿಸಲು ರೂ 25 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯಲು ಮುಂದಾಗುವ ರೈತರಿಗೆ ಮೇವಿನ ಬೀಜ ಒದಗಿಸಲಾಗುವುದು ಎಂದು ತಿಳಿಸಿದರು.<br /> <br /> ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್ ಮಾತನಾಡಿ, ಮಂಜೂರಾತಿ ಅನುದಾನ ಬಿಡುಗಡೆ ಇತ್ಯಾದಿಗಳಿಗಾಗಿ ಕಾಯದೇ ಸಮಸ್ಯಾತ್ಮಕ ಗ್ರಾಮಗಳಿಗೆ ತುರ್ತಾಗಿ ನೀರು ಒದಗಿಸಬೇಕು. ಅನಿವಾರ್ಯವಿದ್ದಲ್ಲಿ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು. ಇಲ್ಲವಾದರೆ, ಪರ್ಯಾಯ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಎ. ಹನುಮನರಸಯ್ಯ ಮಾತನಾಡಿ, ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಶಾಸಕರು ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರ ಗಮನಕ್ಕೆ ತಂದು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದು ಸೂಚಿಸಿದರು.<br /> <br /> ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಹಿರಿಯ ಉಪ ವಿಭಾಗಾಧಿಕಾರಿ ಎಂ.ಎನ್. ವೈಶಾಲಿ, ಉಪ ವಿಭಾಗಾಧಿಕಾರಿ ಪ್ರವೀಣ್ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>