<p> <strong>ದೊಡ್ಡಬಳ್ಳಾಪುರ:</strong> ಕುಡಿಯುವ ನೀರಿನ ಸಮಸ್ಯೆ ಮತ್ತು ನೈರ್ಮಲ್ಯದ ಬಗ್ಗೆ ಚರ್ಚಿಸಲು ನಗರಸಭೆಯ ವಿಶೇಷ ಸಭೆ ಕರೆಯಬೇಕು ಎಂದು ಕನ್ನಡ ಪಕ್ಷದ ನಗರಸಭಾ ಸದಸ್ಯರಾದ ಮಂಜುಳಾ ಮತ್ತು ಜಯಮ್ಮ ನಗರಸಭೆ ಅಧಕ್ಷರನ್ನು ಒತ್ತಾಯಿಸಿದ್ದಾರೆ.<br /> </p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬೋರ್ವೆಲ್ಗಳೇ ನೀರಿಗೆ ಆಧಾರವಾಗಿವೆ. ಕುಡಿಯುವ ನೀರಿಗಾಗಿ ಟ್ಯಾಂಕರ್ಗಳನ್ನು ಅವಲಂಬಿಸಬೇಕಾಗಿದ್ದು, ನೀರಿನ ವ್ಯವಸ್ಥೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. </p>.<p> ಭುವನೇಶ್ವರಿ ನಗರ, ಸಂಜಯ ನಗರಗಳಲ್ಲಿ ನೈರ್ಮಲ್ಯದ ಸಮಸ್ಯೆ ಹೆಚ್ಚಾಗಿದೆ. ಇಲ್ಲಿ ಪೌರ ಕಾರ್ಮಿಕರ ಕೊರತೆಯಿರುವುದರಿಂದ ಗುತ್ತಿಗೆ ಆಧಾರದ ಮೇಲೆ ಹೆಚ್ಚು ಕಾರ್ಮಿಕರ ಮೂಲಕ ಕಾಮಗಾರಿ ಕೈಗೊಳ್ಳಬೇಕಿದೆ. ಒಳ ಚರಂಡಿ ಕಾಮಗಾರಿಗಳಿಂದಾಗಿ ದೂಳು ಹೆಚ್ಚಾಗಿದೆ. ಈ ದಿಸೆಯಲ್ಲಿ ಮೂಲ ಸೌಕರ್ಯಗಳ ಕುರಿತು ಚರ್ಚಿಸಲು ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ದೊಡ್ಡಬಳ್ಳಾಪುರ:</strong> ಕುಡಿಯುವ ನೀರಿನ ಸಮಸ್ಯೆ ಮತ್ತು ನೈರ್ಮಲ್ಯದ ಬಗ್ಗೆ ಚರ್ಚಿಸಲು ನಗರಸಭೆಯ ವಿಶೇಷ ಸಭೆ ಕರೆಯಬೇಕು ಎಂದು ಕನ್ನಡ ಪಕ್ಷದ ನಗರಸಭಾ ಸದಸ್ಯರಾದ ಮಂಜುಳಾ ಮತ್ತು ಜಯಮ್ಮ ನಗರಸಭೆ ಅಧಕ್ಷರನ್ನು ಒತ್ತಾಯಿಸಿದ್ದಾರೆ.<br /> </p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬೋರ್ವೆಲ್ಗಳೇ ನೀರಿಗೆ ಆಧಾರವಾಗಿವೆ. ಕುಡಿಯುವ ನೀರಿಗಾಗಿ ಟ್ಯಾಂಕರ್ಗಳನ್ನು ಅವಲಂಬಿಸಬೇಕಾಗಿದ್ದು, ನೀರಿನ ವ್ಯವಸ್ಥೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. </p>.<p> ಭುವನೇಶ್ವರಿ ನಗರ, ಸಂಜಯ ನಗರಗಳಲ್ಲಿ ನೈರ್ಮಲ್ಯದ ಸಮಸ್ಯೆ ಹೆಚ್ಚಾಗಿದೆ. ಇಲ್ಲಿ ಪೌರ ಕಾರ್ಮಿಕರ ಕೊರತೆಯಿರುವುದರಿಂದ ಗುತ್ತಿಗೆ ಆಧಾರದ ಮೇಲೆ ಹೆಚ್ಚು ಕಾರ್ಮಿಕರ ಮೂಲಕ ಕಾಮಗಾರಿ ಕೈಗೊಳ್ಳಬೇಕಿದೆ. ಒಳ ಚರಂಡಿ ಕಾಮಗಾರಿಗಳಿಂದಾಗಿ ದೂಳು ಹೆಚ್ಚಾಗಿದೆ. ಈ ದಿಸೆಯಲ್ಲಿ ಮೂಲ ಸೌಕರ್ಯಗಳ ಕುರಿತು ಚರ್ಚಿಸಲು ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>