<p><strong>ಚಿಕ್ಕಬಳ್ಳಾಪುರ: </strong> ನಗರಪ್ರದೇಶದಲ್ಲಿ ನೀರಿನ ಸಮಸ್ಯೆ ತೀವ್ರ ಸ್ವರೂಪದಲ್ಲಿ ಕಾಡುತ್ತಿದ್ದು, ನೀರಿನ ಸಮಸ್ಯೆ ಪರಿಹರಿಸುವಂತೆ 27ನೇ ವಾರ್ಡಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ. ದಿನದಿಂದ ದಿನಕ್ಕೆ ಕುಡಿಯುವ ಸಿಹಿ ನೀರು ಮತ್ತು ಕೊಳವೆಬಾವಿ ನೀರಿನ ಕೊರತೆ ತಲೆದೋರುತ್ತಿದ್ದು, ಸಮಸ್ಯೆಗಳ ನ್ನು ಪರಿಹರಿಸುವಂತೆ ಆಗ್ರಹಿಸುತ್ತಿದ್ದಾರೆ. <br /> <br /> ನಗರಸಭೆಗೆ ಕೆಲವೇ ದಿನಗಳ ಹಿಂದೆಯಷ್ಟೇ ಅದ್ಯಕ್ಷರಾಗಿ ಆಯ್ಕೆಯಾಗಿರುವ ಅಧ್ಯಕ್ಷ ಎಂ.ವಿ.ಭಾಸ್ಕರ್ ಅವರ ಮೇಲೆ ಸಾರ್ವಜನಿಕರು ಒತ್ತಡ ಹೇರುತ್ತಿದ್ದಾರೆ.ನಗರದ ವಾರ್ಡ್ 27ರ ನಿವಾಸಿಗಳು ಸೋಮವಾರ ಭಾಸ್ಕರ್ ಅವರಿಗೆ ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿದರು.<br /> <br /> ಸಕಾಲಕ್ಕೆ ನೀರು ಪೂರೈಕೆ ಯಾಗದ ಕಾರಣ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಅಳಲು ತೋಡಿಕೊಂಡರು.ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಎಂ.ವಿ.ಭಾಸ್ಕರ್, `ನೀವು ಸಕಾಲಕ್ಕೆ ನೀರಿನ ತೆರಿಗೆ ಪಾವತಿಸಿ. ಸಮಸ್ಯೆ ತನ್ನಿಂದಾ ತಾನೇ ಪರಿಹಾರಗೊಳ್ಳುತ್ತದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong> ನಗರಪ್ರದೇಶದಲ್ಲಿ ನೀರಿನ ಸಮಸ್ಯೆ ತೀವ್ರ ಸ್ವರೂಪದಲ್ಲಿ ಕಾಡುತ್ತಿದ್ದು, ನೀರಿನ ಸಮಸ್ಯೆ ಪರಿಹರಿಸುವಂತೆ 27ನೇ ವಾರ್ಡಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ. ದಿನದಿಂದ ದಿನಕ್ಕೆ ಕುಡಿಯುವ ಸಿಹಿ ನೀರು ಮತ್ತು ಕೊಳವೆಬಾವಿ ನೀರಿನ ಕೊರತೆ ತಲೆದೋರುತ್ತಿದ್ದು, ಸಮಸ್ಯೆಗಳ ನ್ನು ಪರಿಹರಿಸುವಂತೆ ಆಗ್ರಹಿಸುತ್ತಿದ್ದಾರೆ. <br /> <br /> ನಗರಸಭೆಗೆ ಕೆಲವೇ ದಿನಗಳ ಹಿಂದೆಯಷ್ಟೇ ಅದ್ಯಕ್ಷರಾಗಿ ಆಯ್ಕೆಯಾಗಿರುವ ಅಧ್ಯಕ್ಷ ಎಂ.ವಿ.ಭಾಸ್ಕರ್ ಅವರ ಮೇಲೆ ಸಾರ್ವಜನಿಕರು ಒತ್ತಡ ಹೇರುತ್ತಿದ್ದಾರೆ.ನಗರದ ವಾರ್ಡ್ 27ರ ನಿವಾಸಿಗಳು ಸೋಮವಾರ ಭಾಸ್ಕರ್ ಅವರಿಗೆ ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿದರು.<br /> <br /> ಸಕಾಲಕ್ಕೆ ನೀರು ಪೂರೈಕೆ ಯಾಗದ ಕಾರಣ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಅಳಲು ತೋಡಿಕೊಂಡರು.ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಎಂ.ವಿ.ಭಾಸ್ಕರ್, `ನೀವು ಸಕಾಲಕ್ಕೆ ನೀರಿನ ತೆರಿಗೆ ಪಾವತಿಸಿ. ಸಮಸ್ಯೆ ತನ್ನಿಂದಾ ತಾನೇ ಪರಿಹಾರಗೊಳ್ಳುತ್ತದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>