<p>ಕೊಳ್ಳೇಗಾಲ: ಗ್ರಾಮಾಂತರ ಮತ್ತು ಪಟ್ಟಣದ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್ ತಿಳಿಸಿದರು. ಪಟ್ಟಣಕ್ಕೆ ಪ್ರಥಮ ಭಾರಿಗೆ ಆಗಮಿಸಿದ ಸಚಿವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗಗನಚುಕ್ಕಿ, ಭರಚುಕ್ಕಿ ಜಲಪಾತದಲ್ಲಿ ನೀರು ಹೆಚ್ಚಾದ ನಂತರ ಈ ವರ್ಷ `ಜಲಪಾತ ಉತ್ಸವ'ವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ಪಟ್ಟಣದ ಡಾ.ರಾಜ್ಕುಮಾರ್ ಮತ್ತು ಅಂಬೇಡ್ಕರ್ ರಸ್ತೆ ಅಗಲೀಕರಣದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ವಹಿಸಲಿರುವುದಾಗಿ ಅವರು ತಿಳಿಸಿದರು. ಶಾಸಕ ಆರ್.ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನಂಜೇಗೌಡ, ವೀರಶೈವ ಮಹಾಸಭಾ ಕೊಳ್ಳೇಗಾಲ ಘಟಕ ಅಧ್ಯಕ್ಷ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಶಿವಕುಮಾರ್, ನಂಜುಂಡಸ್ವಾಮಿ, ಮುಡಿಗುಂಡ ಶಾಂತರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಗ್ರಾಮಾಂತರ ಮತ್ತು ಪಟ್ಟಣದ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್ ತಿಳಿಸಿದರು. ಪಟ್ಟಣಕ್ಕೆ ಪ್ರಥಮ ಭಾರಿಗೆ ಆಗಮಿಸಿದ ಸಚಿವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗಗನಚುಕ್ಕಿ, ಭರಚುಕ್ಕಿ ಜಲಪಾತದಲ್ಲಿ ನೀರು ಹೆಚ್ಚಾದ ನಂತರ ಈ ವರ್ಷ `ಜಲಪಾತ ಉತ್ಸವ'ವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ಪಟ್ಟಣದ ಡಾ.ರಾಜ್ಕುಮಾರ್ ಮತ್ತು ಅಂಬೇಡ್ಕರ್ ರಸ್ತೆ ಅಗಲೀಕರಣದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ವಹಿಸಲಿರುವುದಾಗಿ ಅವರು ತಿಳಿಸಿದರು. ಶಾಸಕ ಆರ್.ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನಂಜೇಗೌಡ, ವೀರಶೈವ ಮಹಾಸಭಾ ಕೊಳ್ಳೇಗಾಲ ಘಟಕ ಅಧ್ಯಕ್ಷ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಶಿವಕುಮಾರ್, ನಂಜುಂಡಸ್ವಾಮಿ, ಮುಡಿಗುಂಡ ಶಾಂತರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>