<p><strong>ಕೃಷ್ಣರಾಜಪುರ :</strong> ವಿಜನಾಪುರ ತಾಜಮಹಲ್ ಬಡಾವಣೆಗೆ ಎರಡು ತಿಂಗಳಿಂದಲೂ ನೀರು ಪೂರೈಕೆಯಾಗದೇ, ನೀರಿಗಾಗಿ ಜನರು ತೀವ್ರ ಪರದಾಡುವಂತಾಗಿದೆ.<br /> <br /> ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವುದರಿಂದ ಟ್ಯಾಂಕರ್ ನೀರು ಪಡೆಯುವಷ್ಟು ಶಕ್ತರಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡರು. <br /> <br /> ಕುಡಿಯುವ ನೀರಿಗೆ ಅಳವಡಿಸಿದ ಕೊಳವೆಗಳು ತುಕ್ಕು ಹಿಡಿದಿವೆ. ಅವೈಜ್ಞಾನಿಕ ಕೊಳವೆ ಅಳವಡಿಕೆಯಿಂದ ನೀರು ಪೂರೈಕೆಯಾಗುತ್ತಿಲ್ಲ. ಜಲಮಂಡಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸಿಪಿಎಂ ಪೂರ್ವ ವಲಯ ಘಟಕದ ಕಾರ್ಯದರ್ಶಿ ಗೌರಮ್ಮ ಜಲಮಂಡಳಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಕಾಂತ, ಬಡಾವಣೆಗಳಿಗೆ ಹೊಸದಾಗಿ ಕೊಳವೆ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಅಲ್ಲಿಯವರೆಗೆ ಎರಡು ಟ್ಯಾಂಕರುಗಳ ಮೂಲಕ ಉಚಿತವಾಗಿ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ :</strong> ವಿಜನಾಪುರ ತಾಜಮಹಲ್ ಬಡಾವಣೆಗೆ ಎರಡು ತಿಂಗಳಿಂದಲೂ ನೀರು ಪೂರೈಕೆಯಾಗದೇ, ನೀರಿಗಾಗಿ ಜನರು ತೀವ್ರ ಪರದಾಡುವಂತಾಗಿದೆ.<br /> <br /> ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವುದರಿಂದ ಟ್ಯಾಂಕರ್ ನೀರು ಪಡೆಯುವಷ್ಟು ಶಕ್ತರಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡರು. <br /> <br /> ಕುಡಿಯುವ ನೀರಿಗೆ ಅಳವಡಿಸಿದ ಕೊಳವೆಗಳು ತುಕ್ಕು ಹಿಡಿದಿವೆ. ಅವೈಜ್ಞಾನಿಕ ಕೊಳವೆ ಅಳವಡಿಕೆಯಿಂದ ನೀರು ಪೂರೈಕೆಯಾಗುತ್ತಿಲ್ಲ. ಜಲಮಂಡಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸಿಪಿಎಂ ಪೂರ್ವ ವಲಯ ಘಟಕದ ಕಾರ್ಯದರ್ಶಿ ಗೌರಮ್ಮ ಜಲಮಂಡಳಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಕಾಂತ, ಬಡಾವಣೆಗಳಿಗೆ ಹೊಸದಾಗಿ ಕೊಳವೆ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಅಲ್ಲಿಯವರೆಗೆ ಎರಡು ಟ್ಯಾಂಕರುಗಳ ಮೂಲಕ ಉಚಿತವಾಗಿ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>