<p>ಸಾಲಿಗ್ರಾಮ: ಬೇಸಿಗೆಯಲ್ಲಿ ಜನ ಕುಡಿಯುವ ನೀರು ಮತ್ತು ಆಹಾರ ಸೇವನೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದು ಭೇರ್ಯ ಸರ್ಕಾರಿ ಆಸ್ಪತ್ರೆಯ ವೈದ್ಯ ಕಿರಣ್ಕುಮಾರ್ ಹೇಳಿದರು.<br /> <br /> ಹೊಸ ಅಗ್ರಹಾರ ಹೋಬಳಿಯ ಭೇರ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಸಮುದಾಯ ಆರೋಗ್ಯ ದಿನಾಚರಣೆ ಮತ್ತು ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಆರೋಗ್ಯದ ಬಗ್ಗೆ ಉದಾಸೀನ ತೋರಿಸಿದರೆ ಜೀವನ ಪರ್ಯಂತ ನರಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಆಹಾರ ಮತ್ತು ಕುಡಿಯುವ ನೀರಿನ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.<br /> <br /> ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಮಂಜುನಾಥ್ ಮಾತನಾಡಿ, ಬೇಸಿಗೆಯಲ್ಲಿ ಮನೆಯ ಮುಂದೆ ನೀರು ನಿಂತರೆ ಅದರಲ್ಲಿ ಸೊಳ್ಳೆಗಳು ವಾಸ ಮಾಡುತ್ತವೆ. ಇದರಿಂದ ಸುತ್ತಮುತ್ತಲ ಮನೆಗಳಿಗೊ ಅಪಾಯ. <br /> <br /> ಆದ್ದರಿಂದ ಪ್ರತಿಯಾಬ್ಬರು ತಮ್ಮ ಮನೆ ಮುಂದೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. 71 ಗರ್ಭಿಣಿಯರಿಗೆ ಸಾ.ರಾ. ಸ್ನೇಹ ಬಳಗದಿಂದ ಸೀರೆ ಮತ್ತು ರವಿಕೆ ಉಡುಗೊರೆ ನೀಡಲಾಯಿತು. <br /> <br /> ಭೇರ್ಯ ಗ್ರಾ.ಪಂ. ಅಧ್ಯಕ್ಷ ಬಟಿಗನಹಳ್ಳಿ ರಾಘವನ್, ಹೊಸ ಅಗ್ರಹಾರ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ, ತಾ.ಪಂ. ಸದಸ್ಯ ಸಾಧಿಕ್ಖಾನ್, ಗ್ರಾ.ಪಂ. ಸದಸ್ಯ ಸೋಮು, ಚಲುವಯ್ಯ, ತಾಯಮ್ಮ, ಮಹದೇವಮ್ಮ, ರಾಮು, ಕಾವೇರಮ್ಮ, ಫಾತೀಮಾ, ಹೇಮಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಲಿಗ್ರಾಮ: ಬೇಸಿಗೆಯಲ್ಲಿ ಜನ ಕುಡಿಯುವ ನೀರು ಮತ್ತು ಆಹಾರ ಸೇವನೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದು ಭೇರ್ಯ ಸರ್ಕಾರಿ ಆಸ್ಪತ್ರೆಯ ವೈದ್ಯ ಕಿರಣ್ಕುಮಾರ್ ಹೇಳಿದರು.<br /> <br /> ಹೊಸ ಅಗ್ರಹಾರ ಹೋಬಳಿಯ ಭೇರ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಸಮುದಾಯ ಆರೋಗ್ಯ ದಿನಾಚರಣೆ ಮತ್ತು ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಆರೋಗ್ಯದ ಬಗ್ಗೆ ಉದಾಸೀನ ತೋರಿಸಿದರೆ ಜೀವನ ಪರ್ಯಂತ ನರಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಆಹಾರ ಮತ್ತು ಕುಡಿಯುವ ನೀರಿನ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.<br /> <br /> ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಮಂಜುನಾಥ್ ಮಾತನಾಡಿ, ಬೇಸಿಗೆಯಲ್ಲಿ ಮನೆಯ ಮುಂದೆ ನೀರು ನಿಂತರೆ ಅದರಲ್ಲಿ ಸೊಳ್ಳೆಗಳು ವಾಸ ಮಾಡುತ್ತವೆ. ಇದರಿಂದ ಸುತ್ತಮುತ್ತಲ ಮನೆಗಳಿಗೊ ಅಪಾಯ. <br /> <br /> ಆದ್ದರಿಂದ ಪ್ರತಿಯಾಬ್ಬರು ತಮ್ಮ ಮನೆ ಮುಂದೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. 71 ಗರ್ಭಿಣಿಯರಿಗೆ ಸಾ.ರಾ. ಸ್ನೇಹ ಬಳಗದಿಂದ ಸೀರೆ ಮತ್ತು ರವಿಕೆ ಉಡುಗೊರೆ ನೀಡಲಾಯಿತು. <br /> <br /> ಭೇರ್ಯ ಗ್ರಾ.ಪಂ. ಅಧ್ಯಕ್ಷ ಬಟಿಗನಹಳ್ಳಿ ರಾಘವನ್, ಹೊಸ ಅಗ್ರಹಾರ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ, ತಾ.ಪಂ. ಸದಸ್ಯ ಸಾಧಿಕ್ಖಾನ್, ಗ್ರಾ.ಪಂ. ಸದಸ್ಯ ಸೋಮು, ಚಲುವಯ್ಯ, ತಾಯಮ್ಮ, ಮಹದೇವಮ್ಮ, ರಾಮು, ಕಾವೇರಮ್ಮ, ಫಾತೀಮಾ, ಹೇಮಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>