<p><strong>ಚಿಕ್ಕೋಡಿ:</strong> ` ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರೆಲ್ಲರೂ ತಮ್ಮ ಹೊಲಗಳಲ್ಲಿ ಒಡ್ಡುಗಳನ್ನು ಹಾಕಿ ಓಡುವ ನೀರನ್ನು ನಿಲ್ಲಿಸಿ, ನಿಂತಿರುವ ನೀರನ್ನು ಇಂಗಿಸಿ ಭೂಮಿ ಫಲವತ್ತತೆ ಹೆಚ್ಚಿಸಲು ಮುಂದಾಗಬೇಕು' ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೃಷಿ ಯೋಜನಾಧಿಕಾರಿಗಳಾದ ನಿಂಗಪ್ಪ ಜಿ. ಹೇಳಿದರು.<br /> <br /> ತಾಲ್ಲೂಕಿನ ಧುಳಗನವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಜಲಾನಯನ ಅಭಿವೃದ್ಧಿ ಕುರಿತ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹೊಲಗಳಿಗೆ ಒಡ್ಡು ಹಾಕುವುದು, ಕೃಷಿ ಗುಂಡಿ, ಮಳೆ ನೀರು ಸಂಗ್ರಹಣೆ ಮಾಡುವದು ಮೊದಲಾದ ಜಲ ಸಂರಕ್ಷಣಾ ಯೋಜನೆಗಳಿಗೆ ಆರ್ಥಿಕ ನೆರವು ನೀಡಲಿದೆ. ಪ್ರಗತಿ ಬಂಧು ಸ್ವಸಹಾಯ ಗುಂಪಿನ ಸದಸ್ಯೆಯರು ಈ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದರು.<br /> <br /> ದುಂಡಪ್ಪಾ ಜೋಡಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸೇವಕ ಶಿವಾನಂದ ಕಮತೆ ಬಿತ್ತನೆ ಬೀಜಗಳ ಬಗ್ಗೆ ಮಾಹಿತಿ ನೀಡಿದರು. ರಾಮಣ್ಣಾ ಖೋತ, ಭರತ ಕಲಾಚಂದ್ರ ಮಾತನಾಡಿದರು. ಸುಜಾತಾ ಮಗದುಮ್ಮ ಸ್ವಾಗತಿಸಿದರು. ಶ್ರಿದೇವಿ ಕಾಂಬಳೆ ನಿರೂಪಿಸಿದರು. ಮಂಗಲ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ` ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರೆಲ್ಲರೂ ತಮ್ಮ ಹೊಲಗಳಲ್ಲಿ ಒಡ್ಡುಗಳನ್ನು ಹಾಕಿ ಓಡುವ ನೀರನ್ನು ನಿಲ್ಲಿಸಿ, ನಿಂತಿರುವ ನೀರನ್ನು ಇಂಗಿಸಿ ಭೂಮಿ ಫಲವತ್ತತೆ ಹೆಚ್ಚಿಸಲು ಮುಂದಾಗಬೇಕು' ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೃಷಿ ಯೋಜನಾಧಿಕಾರಿಗಳಾದ ನಿಂಗಪ್ಪ ಜಿ. ಹೇಳಿದರು.<br /> <br /> ತಾಲ್ಲೂಕಿನ ಧುಳಗನವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಜಲಾನಯನ ಅಭಿವೃದ್ಧಿ ಕುರಿತ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹೊಲಗಳಿಗೆ ಒಡ್ಡು ಹಾಕುವುದು, ಕೃಷಿ ಗುಂಡಿ, ಮಳೆ ನೀರು ಸಂಗ್ರಹಣೆ ಮಾಡುವದು ಮೊದಲಾದ ಜಲ ಸಂರಕ್ಷಣಾ ಯೋಜನೆಗಳಿಗೆ ಆರ್ಥಿಕ ನೆರವು ನೀಡಲಿದೆ. ಪ್ರಗತಿ ಬಂಧು ಸ್ವಸಹಾಯ ಗುಂಪಿನ ಸದಸ್ಯೆಯರು ಈ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದರು.<br /> <br /> ದುಂಡಪ್ಪಾ ಜೋಡಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸೇವಕ ಶಿವಾನಂದ ಕಮತೆ ಬಿತ್ತನೆ ಬೀಜಗಳ ಬಗ್ಗೆ ಮಾಹಿತಿ ನೀಡಿದರು. ರಾಮಣ್ಣಾ ಖೋತ, ಭರತ ಕಲಾಚಂದ್ರ ಮಾತನಾಡಿದರು. ಸುಜಾತಾ ಮಗದುಮ್ಮ ಸ್ವಾಗತಿಸಿದರು. ಶ್ರಿದೇವಿ ಕಾಂಬಳೆ ನಿರೂಪಿಸಿದರು. ಮಂಗಲ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>