<p>ಬಳ್ಳಾರಿ: ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಕಂಪ್ಯೂಟರ್ ಬಳಕೆ ಮೂಲಕ ಕುಡಿ ಯುವ ನೀರು ಪೂರೈಕೆ ಹಾಗೂ ನಿರ್ವಹಣೆ ಕುರಿತ ಮಾಹಿತಿ ಸಂಗ್ರಹಿಸ ಬೇಕಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಮಹೇಶ್ವರಯ್ಯ ತಿಳಿಸಿದರು.<br /> <br /> ಜಿ.ಪಂ. ಸಭಾಂಗಣದಲ್ಲಿ ಬುಧವಾರ ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸುವ ಕುರಿತು ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಜಿ.ಪಂ. ಎಂಜಿನಿಯರಿಂಗ್ ವಿಭಾಗಗಳ ಸಿಬ್ಬಂದಿಗಾಗಿ ಎರ್ಪಡಿಸಿದ್ದ ಸಮಗ್ರ ಮಾಹಿತಿ ನಿರ್ವಹಣೆ ವ್ಯವಸ್ಥೆ (ಐಎಂಐಎಸ್) ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಹಿಂದುಳಿದ ಭಾಗವಾದ ಬಳ್ಳಾರಿ ಜಿಲ್ಲೆಯಲ್ಲಿ ತಂತ್ರಜ್ಞಾನದ ಬಳಕೆಯ ಮೂಲಕ ನೀರು ಪೂರೈಕೆ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಬೇಕಿದೆ. ಎಲ್ಲ ಎಂಜಿಜಿನಿಯರ್ಗಳೂ ಉತ್ತಮ ತರಬೇತಿ ಪಡೆದು ಕಂಪ್ಯೂಟರ್ ಬಳಕೆ ಮಾಡಿದರೆ ಲಭ್ಯ ಸಂಪನ್ಮೂಲದಲ್ಲೇ ಸಮರ್ಪಕವಾಗಿ ನೀರು ಸರಬರಾಜು ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಎಂಜಿನಿಯರ್ಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.<br /> <br /> ಅಧೀಕ್ಷಕ ಎಂಜಿನಿಯರ್ ಎಜಾಜ್ ಹುಸೇನ್ ಅವರು ತರಬೇತಿಯ ಅಗತ್ಯದ ಕುರಿತು ವಿವರಿಸಿ, ಎಲ್ಲ ಎಂಜಿನಿಯರ್ಗಳು ತಮ್ಮ ವ್ಯಾಪ್ತಿಯ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿ, ಕುಡಿಯುವ ನೀರಿನ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.<br /> <br /> ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ಡಿ.ಬಸವನಗೌಡ, ಮುರುಳೀ ಧರ, ಡಿ. ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಕಂಪ್ಯೂಟರ್ ಬಳಕೆ ಮೂಲಕ ಕುಡಿ ಯುವ ನೀರು ಪೂರೈಕೆ ಹಾಗೂ ನಿರ್ವಹಣೆ ಕುರಿತ ಮಾಹಿತಿ ಸಂಗ್ರಹಿಸ ಬೇಕಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಮಹೇಶ್ವರಯ್ಯ ತಿಳಿಸಿದರು.<br /> <br /> ಜಿ.ಪಂ. ಸಭಾಂಗಣದಲ್ಲಿ ಬುಧವಾರ ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸುವ ಕುರಿತು ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಜಿ.ಪಂ. ಎಂಜಿನಿಯರಿಂಗ್ ವಿಭಾಗಗಳ ಸಿಬ್ಬಂದಿಗಾಗಿ ಎರ್ಪಡಿಸಿದ್ದ ಸಮಗ್ರ ಮಾಹಿತಿ ನಿರ್ವಹಣೆ ವ್ಯವಸ್ಥೆ (ಐಎಂಐಎಸ್) ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಹಿಂದುಳಿದ ಭಾಗವಾದ ಬಳ್ಳಾರಿ ಜಿಲ್ಲೆಯಲ್ಲಿ ತಂತ್ರಜ್ಞಾನದ ಬಳಕೆಯ ಮೂಲಕ ನೀರು ಪೂರೈಕೆ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಬೇಕಿದೆ. ಎಲ್ಲ ಎಂಜಿಜಿನಿಯರ್ಗಳೂ ಉತ್ತಮ ತರಬೇತಿ ಪಡೆದು ಕಂಪ್ಯೂಟರ್ ಬಳಕೆ ಮಾಡಿದರೆ ಲಭ್ಯ ಸಂಪನ್ಮೂಲದಲ್ಲೇ ಸಮರ್ಪಕವಾಗಿ ನೀರು ಸರಬರಾಜು ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಎಂಜಿನಿಯರ್ಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.<br /> <br /> ಅಧೀಕ್ಷಕ ಎಂಜಿನಿಯರ್ ಎಜಾಜ್ ಹುಸೇನ್ ಅವರು ತರಬೇತಿಯ ಅಗತ್ಯದ ಕುರಿತು ವಿವರಿಸಿ, ಎಲ್ಲ ಎಂಜಿನಿಯರ್ಗಳು ತಮ್ಮ ವ್ಯಾಪ್ತಿಯ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿ, ಕುಡಿಯುವ ನೀರಿನ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.<br /> <br /> ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ಡಿ.ಬಸವನಗೌಡ, ಮುರುಳೀ ಧರ, ಡಿ. ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>