<p><strong>ಯಲಹಂಕ:</strong> ಬ್ಯಾಟರಾಯನಪುರ ಕ್ಷೇತ್ರದ ಜೆಡಿ(ಎಸ್) ಘಟಕದ ವತಿಯಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಪಕ್ಷದ ಮುಖಂಡ ಜಯಗೋಪಾಲಗೌಡ ಹೆಗ್ಗಡೆ ನಗರದ ಪಕ್ಷದ ಕಚೇರಿಯ ಸಮೀಪದಲ್ಲಿ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ಮಳೆ ಬಾರದೆ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಸಿಗದಂತಾಗಿದೆ. ಶ್ರೀಮಂತರು ಹಣತೆತ್ತು ನೀರು ಸರಬರಾಜು ಮಾಡಿಕೊಂಡರೆ, ಬಡಜನರು ನೀರಿಗಾಗಿ ಪರದಾಡುವಂತಾಗಿದೆ. ಇಂತಹ ಜನರಿಗೆ ಉಪಯೋಗವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕ್ಷೇತ್ರದ ಜೆಡಿ(ಎಸ್) ಅಧ್ಯಕ್ಷ ಜೆ.ಎಂ.ಚದ್ರಪ್ಪ, ಪ್ರಧಾನ ಕಾರ್ಯದರ್ಶಿ ಎನ್. ವೇಣುಗೋಪಾಲ್, ಹಿರಿಯ ಉಪಾಧ್ಯಕ್ಷ ಜೋಸೆಫ್, ನಗರಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ, ಮುಖಂಡರಾದ ಉಮೇಶ್, ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಬ್ಯಾಟರಾಯನಪುರ ಕ್ಷೇತ್ರದ ಜೆಡಿ(ಎಸ್) ಘಟಕದ ವತಿಯಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಪಕ್ಷದ ಮುಖಂಡ ಜಯಗೋಪಾಲಗೌಡ ಹೆಗ್ಗಡೆ ನಗರದ ಪಕ್ಷದ ಕಚೇರಿಯ ಸಮೀಪದಲ್ಲಿ ಚಾಲನೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ಮಳೆ ಬಾರದೆ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಸಿಗದಂತಾಗಿದೆ. ಶ್ರೀಮಂತರು ಹಣತೆತ್ತು ನೀರು ಸರಬರಾಜು ಮಾಡಿಕೊಂಡರೆ, ಬಡಜನರು ನೀರಿಗಾಗಿ ಪರದಾಡುವಂತಾಗಿದೆ. ಇಂತಹ ಜನರಿಗೆ ಉಪಯೋಗವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕ್ಷೇತ್ರದ ಜೆಡಿ(ಎಸ್) ಅಧ್ಯಕ್ಷ ಜೆ.ಎಂ.ಚದ್ರಪ್ಪ, ಪ್ರಧಾನ ಕಾರ್ಯದರ್ಶಿ ಎನ್. ವೇಣುಗೋಪಾಲ್, ಹಿರಿಯ ಉಪಾಧ್ಯಕ್ಷ ಜೋಸೆಫ್, ನಗರಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ, ಮುಖಂಡರಾದ ಉಮೇಶ್, ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>