<p>ಚಿಂತಾಮಣಿ: ಕುಡಿಯುವ ನೀರಿಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಾಸಕರ ಬೇಡಿಕೆ ಬಗ್ಗೆ ಸರ್ಕಾರ ಶೀಘ್ರ ಸ್ಪಂದಿಸಬೇಕು. ಅನಾಹುತವಾದರೆ ಸರ್ಕಾರವೇ ನೇರ ಹೊಣೆ ಎಂದು ವಿಧಾನ ಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು.<br /> <br /> ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಕುಡಿಯುವ ನೀರಿಗಾಗಿ ಒತ್ತಾಯಿಸಿ ಶಾಸಕ ಡಾ.ಎಂ.ಸಿ.ಸುಧಾಕರ್ ಮತ್ತು ಬೆಂಬಲಿಗರು ನಡೆಸುತ್ತಿರುವ ಉಪವಾಸ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು.<br /> <br /> ಕುಡಿಯುವ ನೀರು ಕೊಡುವುದು ಸರ್ಕಾರದ ಕರ್ತವ್ಯ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರ ಮೇಲೆ ಗೋಲಿಬಾರ್ ಮಾಡಿ ಮೋಸ ಮಾಡಿದ ಭ್ರಷ್ಟ ಸರ್ಕಾರ. ನೀರಿಲ್ಲದೆ ಜನರು ಪರದಾಡುತ್ತಿರುವಾಗ ಯಡಿಯೂರಪ್ಪ ಕ್ರಿಕೆಟ್ ಆಟದಲ್ಲಿ ಮಜಾ ಉಡಾಯಿಸುತ್ತಿದ್ದಾರೆ ಎಂದು ಟೀಕಿಸಿದರು.<br /> <br /> ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತಿತರ ಮೂಲ ಸೌಲಭ್ಯ ಒದಗಿಸುವುದನ್ನು ಬಿಟ್ಟು ಮಠ ಮಂದಿರಗಳಿಗೆ ಹಣ ನೀಡುತ್ತಾರೆ. ಜನರ ಸಮಸ್ಯೆ ತೆಗೆದುಕೊಂಡು ಶಾಸಕರೊಬ್ಬರು ಅನಿರ್ಧಿಷ್ಟ ಧರಣಿ, ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಕನಿಷ್ಠ ಬಂದು ವಿಚಾರಿಸುವ ಸೌಜನ್ಯ ತೋರಿಸುತ್ತಿಲ್ಲ ಎಂದರು.<br /> <br /> ಬಡವರ, ಜನವಿರೋಧಿ ಸರ್ಕಾರವಾಗಿದೆ. ವರ್ಷಕ್ಕೆ 3 ಲಕ್ಷ ಮನೆ ವಿತರಿಸುವುದಾಗಿ ಹೇಳುತ್ತಿರುವ ಸರ್ಕಾರ ಒಂದೇ ಒಂದು ನಿವೇಶನ ನೀಡಿರುವುದನ್ನು ತೋರಿಸಲಿ ಎಂದು ಸವಾಲು ಹಾಕಿದರು. <br /> <br /> ರಾಜ್ಯದ ಇತಿಹಾಸದಲ್ಲೇ ಇಂತಹ ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ಕಂಡಿಲ್ಲ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಾವುದೇ ನದಿ ನಾಲೆಗಳಿಲ್ಲದೆ ನೀರಿಗಾಗಿ ಕೊಳವೆ ಬಾವಿ ಮೇಲೆ ಅವಲಂಭಿತವಾಗಿವೆ. 2 ಜಿಲ್ಲೆಗೆ ಹೆಚ್ಚಿನ ಹಣ ನೀಡಿ ಎಂದು ವಿಧಾನಸಭೆಯಲ್ಲೇ ಸೂಚಿಸಿದ್ದೆವು. ಶಾಸಕರು ಸಹ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಕುಡಿಯುವ ನೀರಿಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಾಸಕರ ಬೇಡಿಕೆ ಬಗ್ಗೆ ಸರ್ಕಾರ ಶೀಘ್ರ ಸ್ಪಂದಿಸಬೇಕು. ಅನಾಹುತವಾದರೆ ಸರ್ಕಾರವೇ ನೇರ ಹೊಣೆ ಎಂದು ವಿಧಾನ ಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು.<br /> <br /> ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಕುಡಿಯುವ ನೀರಿಗಾಗಿ ಒತ್ತಾಯಿಸಿ ಶಾಸಕ ಡಾ.ಎಂ.ಸಿ.ಸುಧಾಕರ್ ಮತ್ತು ಬೆಂಬಲಿಗರು ನಡೆಸುತ್ತಿರುವ ಉಪವಾಸ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು.<br /> <br /> ಕುಡಿಯುವ ನೀರು ಕೊಡುವುದು ಸರ್ಕಾರದ ಕರ್ತವ್ಯ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರ ಮೇಲೆ ಗೋಲಿಬಾರ್ ಮಾಡಿ ಮೋಸ ಮಾಡಿದ ಭ್ರಷ್ಟ ಸರ್ಕಾರ. ನೀರಿಲ್ಲದೆ ಜನರು ಪರದಾಡುತ್ತಿರುವಾಗ ಯಡಿಯೂರಪ್ಪ ಕ್ರಿಕೆಟ್ ಆಟದಲ್ಲಿ ಮಜಾ ಉಡಾಯಿಸುತ್ತಿದ್ದಾರೆ ಎಂದು ಟೀಕಿಸಿದರು.<br /> <br /> ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತಿತರ ಮೂಲ ಸೌಲಭ್ಯ ಒದಗಿಸುವುದನ್ನು ಬಿಟ್ಟು ಮಠ ಮಂದಿರಗಳಿಗೆ ಹಣ ನೀಡುತ್ತಾರೆ. ಜನರ ಸಮಸ್ಯೆ ತೆಗೆದುಕೊಂಡು ಶಾಸಕರೊಬ್ಬರು ಅನಿರ್ಧಿಷ್ಟ ಧರಣಿ, ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಕನಿಷ್ಠ ಬಂದು ವಿಚಾರಿಸುವ ಸೌಜನ್ಯ ತೋರಿಸುತ್ತಿಲ್ಲ ಎಂದರು.<br /> <br /> ಬಡವರ, ಜನವಿರೋಧಿ ಸರ್ಕಾರವಾಗಿದೆ. ವರ್ಷಕ್ಕೆ 3 ಲಕ್ಷ ಮನೆ ವಿತರಿಸುವುದಾಗಿ ಹೇಳುತ್ತಿರುವ ಸರ್ಕಾರ ಒಂದೇ ಒಂದು ನಿವೇಶನ ನೀಡಿರುವುದನ್ನು ತೋರಿಸಲಿ ಎಂದು ಸವಾಲು ಹಾಕಿದರು. <br /> <br /> ರಾಜ್ಯದ ಇತಿಹಾಸದಲ್ಲೇ ಇಂತಹ ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ಕಂಡಿಲ್ಲ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಾವುದೇ ನದಿ ನಾಲೆಗಳಿಲ್ಲದೆ ನೀರಿಗಾಗಿ ಕೊಳವೆ ಬಾವಿ ಮೇಲೆ ಅವಲಂಭಿತವಾಗಿವೆ. 2 ಜಿಲ್ಲೆಗೆ ಹೆಚ್ಚಿನ ಹಣ ನೀಡಿ ಎಂದು ವಿಧಾನಸಭೆಯಲ್ಲೇ ಸೂಚಿಸಿದ್ದೆವು. ಶಾಸಕರು ಸಹ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>