<p><strong>ಸಿರುಗುಪ್ಪ:</strong> ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆಯಿಂದ ಹಚ್ಚೊಳ್ಳಿ ಉಪ ಕಾಲುವೆಗೆ ಸಮರ್ಪಕ ನೀರು ಬಿಡುಗಡೆಗೆ ಒತ್ತಾಯಿಸಿ ತಾಲ್ಲೂಕಿನ ಬಂಡ್ರಾಳ್ ಕ್ರಾಸ್ ಬಳಿಯ ಆದವಾನಿ-ಸಿರುಗುಪ್ಪ ರಸ್ತೆಯಲ್ಲಿ ಗುರುವಾರ ನೂರಾರು ರೈತರು ಎರಡು ಗಂಟೆ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.<br /> <br /> ತಾಲ್ಲೂಕಿನ ಬಂಡ್ರಾಳ್, ನಾಡಂಗ, ಬೊಮ್ಮಲಾಪುರ, ಅಗಸನೂರು, ನಾಗರಹಾಳ್, ರಾರಾವಿ, ಕುರುವಳ್ಳಿ ಗ್ರಾಮಗಳ ನೀರಾವರಿ ಜಮೀನುಗಳಿಗೆ ನೀರು ಒದಗಿಸುವ ಹಚ್ಚೊಳ್ಳಿ ಉಪ ಕಾಲುವೆಗೆ ಸರಿಯಾಗಿ ನೀರು ಬಾರದಿರುವುದನ್ನು ಖಂಡಿಸಿ ನೂರಾರು ರೈತರು ಹೋರಾಟಕ್ಕೆ ಮುಂದಾಗಿದ್ದಾರೆ.<br /> <br /> ಆಂಧ್ರ ಭಾಗದಿಂದ ಈ ಉಪ ಕಾಲುವೆಗೆ ನೀರು ಹರಿದು ಬರಬೇಕಾಗಿದೆ. ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಟ್ಟು 20 ದಿನಗಳು ಕಳೆದರೂ ಇಲ್ಲಿಯವರೆಗೆ ಒಂದು ಹನಿ ನೀರು ಹರಿದುಬಂದಿಲ್ಲ, ಮೇಲ್ಭಾಗದ ಆಂಧ್ರದ ರೈತರು ನೂರಾರು ಎಕರೆ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದಾರೆ ಎಂದು ದೂರಿದರು. ನಮ್ಮ ಪಾಲಿನ 54 ಕ್ಯೂಸೆಕ್ ನೀರು ಕೊಡಿ ಇಲ್ಲವಾದರೆ ಕಾಲುವೆಯನ್ನು ಸಂಪೂರ್ಣವಾಗಿ ಮುಚ್ಚಿಬಿಡಿ ಎಂದು ರಾಮಕೃಷ್ಣಾರೆಡ್ಡಿ ಹೇಳಿದರು.<br /> <br /> ತಹಸೀಲ್ದಾರ್ ಸಿ.ಎಚ್.ಶಿವಕುಮಾರ್ ಮತ್ತು ನೀರಾವರಿ ಇಲಾಖೆ ಎಇಇ ಆದೆಪ್ಪ ರೈತರೊಂದಿಗೆ ಸಮಾಲೋಚಿಸಿ ಆಂಧ್ರ ಪ್ರದೇಶದ ನೀರಾವರಿ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.<br /> <br /> ತಾ.ಪಂ.ಸದಸ್ಯ ರಾಮಾ ನಾಯ್ಕ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ನಾಗೇಶಪ್ಪ, ಚಂದ್ರಶೇಖರ, ಆರ್.ಪಂಪನಗೌಡ, ರಾಘವೇಂದ್ರ ರೆಡ್ಡಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆಯಿಂದ ಹಚ್ಚೊಳ್ಳಿ ಉಪ ಕಾಲುವೆಗೆ ಸಮರ್ಪಕ ನೀರು ಬಿಡುಗಡೆಗೆ ಒತ್ತಾಯಿಸಿ ತಾಲ್ಲೂಕಿನ ಬಂಡ್ರಾಳ್ ಕ್ರಾಸ್ ಬಳಿಯ ಆದವಾನಿ-ಸಿರುಗುಪ್ಪ ರಸ್ತೆಯಲ್ಲಿ ಗುರುವಾರ ನೂರಾರು ರೈತರು ಎರಡು ಗಂಟೆ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.<br /> <br /> ತಾಲ್ಲೂಕಿನ ಬಂಡ್ರಾಳ್, ನಾಡಂಗ, ಬೊಮ್ಮಲಾಪುರ, ಅಗಸನೂರು, ನಾಗರಹಾಳ್, ರಾರಾವಿ, ಕುರುವಳ್ಳಿ ಗ್ರಾಮಗಳ ನೀರಾವರಿ ಜಮೀನುಗಳಿಗೆ ನೀರು ಒದಗಿಸುವ ಹಚ್ಚೊಳ್ಳಿ ಉಪ ಕಾಲುವೆಗೆ ಸರಿಯಾಗಿ ನೀರು ಬಾರದಿರುವುದನ್ನು ಖಂಡಿಸಿ ನೂರಾರು ರೈತರು ಹೋರಾಟಕ್ಕೆ ಮುಂದಾಗಿದ್ದಾರೆ.<br /> <br /> ಆಂಧ್ರ ಭಾಗದಿಂದ ಈ ಉಪ ಕಾಲುವೆಗೆ ನೀರು ಹರಿದು ಬರಬೇಕಾಗಿದೆ. ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಟ್ಟು 20 ದಿನಗಳು ಕಳೆದರೂ ಇಲ್ಲಿಯವರೆಗೆ ಒಂದು ಹನಿ ನೀರು ಹರಿದುಬಂದಿಲ್ಲ, ಮೇಲ್ಭಾಗದ ಆಂಧ್ರದ ರೈತರು ನೂರಾರು ಎಕರೆ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದಾರೆ ಎಂದು ದೂರಿದರು. ನಮ್ಮ ಪಾಲಿನ 54 ಕ್ಯೂಸೆಕ್ ನೀರು ಕೊಡಿ ಇಲ್ಲವಾದರೆ ಕಾಲುವೆಯನ್ನು ಸಂಪೂರ್ಣವಾಗಿ ಮುಚ್ಚಿಬಿಡಿ ಎಂದು ರಾಮಕೃಷ್ಣಾರೆಡ್ಡಿ ಹೇಳಿದರು.<br /> <br /> ತಹಸೀಲ್ದಾರ್ ಸಿ.ಎಚ್.ಶಿವಕುಮಾರ್ ಮತ್ತು ನೀರಾವರಿ ಇಲಾಖೆ ಎಇಇ ಆದೆಪ್ಪ ರೈತರೊಂದಿಗೆ ಸಮಾಲೋಚಿಸಿ ಆಂಧ್ರ ಪ್ರದೇಶದ ನೀರಾವರಿ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.<br /> <br /> ತಾ.ಪಂ.ಸದಸ್ಯ ರಾಮಾ ನಾಯ್ಕ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ನಾಗೇಶಪ್ಪ, ಚಂದ್ರಶೇಖರ, ಆರ್.ಪಂಪನಗೌಡ, ರಾಘವೇಂದ್ರ ರೆಡ್ಡಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>