<p><strong>ಹೊಳಲ್ಕೆರೆ:</strong> ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ ಮತ್ತಿತರ ಮೂಲಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡುವುದಾಗಿ ಶಾಸಕ ಎಂ. ಚಂದ್ರಪ್ಪ ಹೇಳಿದರು.<br /> <br /> ತಾಲ್ಲೂಕಿನ ಹಳೇಹಳ್ಳಿ ಗೊಲ್ಲರಹಟ್ಟಿಯಲ್ಲಿ ಸೋಮವಾರ ರೂ. 5 ಲಕ್ಷ ವೆಚ್ಚದ ಮಹಿಳಾ ಭವನ ಮತ್ತು ರೂ. 10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> ಯಾದವ ಮಹಿಳೆಯರಿಗೆ ತಾಲ್ಲೂಕಿನ 20 ಗೊಲ್ಲರಹಟ್ಟಿಗಳಲ್ಲಿ ತಲಾ ರೂ. 5 ಲಕ್ಷ ವೆಚ್ಚದಲ್ಲಿ ಮಹಿಳಾ ಭವನಗಳನ್ನು ನಿರ್ಮಿಸಲಾಗುತ್ತಿದೆ. ಗೊಲ್ಲರಹಟ್ಟಿಗಳು ಯಾವುದೇ ಮೂಲ ಸೌಕರ್ಯಗಳಿಲ್ಲದೆ ಸೊರಗುತ್ತಿದ್ದು, ಜನ ಕನಿಷ್ಠ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿದ್ದಾರೆ.<br /> <br /> ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಈ ಹಟ್ಟಿಗಳಲ್ಲಿ ಸುಸಜ್ಜಿತ ರಸ್ತೆ, ಚರಂಡಿ, ಉತ್ತಮ ವಾಸಯೋಗ್ಯ ಮನೆಗಳಿಲ್ಲ. ಇದನ್ನು ಮನಗಂಡು ಎಲ್ಲಾ ಗೊಲ್ಲರಹಟ್ಟಿಗಳಿಗೂ ಕಾಂಕ್ರೀಟ್ ರಸ್ತೆಗಳನ್ನು ಮಂಜೂರು ಮಾಡಿಸಿದ್ದೇನೆ. ಹಂತ ಹಂತವಾಗಿ ಮೂಲ ಸೌಲಭ್ಯ ಒದಗಿಸಲು ತೀರ್ಮಾನಿಸಿದ್ದು, ಹಿಂದುಳಿದ ಜನಾಂಗದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದೇನೆ ಎಂದರು.<br /> <br /> ಈ ಭಾಗದಲ್ಲಿ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಅನೇಕ ಗ್ರಾಮೀಣ ಸಂಪರ್ಕ ರಸ್ತೆಗಳನ್ನು ನಿರ್ಮಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ-13 ರಿಂದ ತಾಳ್ಯವರೆಗೆ ರೂ. 2 ಕೋಟಿ ವೆಚ್ಚದ ರಸ್ತೆ ಮತ್ತು ರೂ. 50 ಲಕ್ಷದ ಸೇತುವೆ ನಿರ್ಮಿಸಲಾಗಿದೆ. ಚಿತ್ರಹಳ್ಳಿಯಿಂದ ಅಮೃತಾಪುರ, ಚಿಕ್ಕಜಾಜೂರು ರಸ್ತೆಗೆ ರೂ. 3 ಕೋಟಿ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು. ರೂ. 1 ಕೋಟಿ ವೆಚ್ಚದಲ್ಲಿ ಶಿವಗಂಗಾ- ಕೊಂಡಾಪುರ ರಸ್ತೆ ನಿರ್ಮಿಸುತ್ತಿದ್ದು, ಈ ಮಾರ್ಗದ ಏಳು ಹಳ್ಳಿಗಳ ಜನ ನೇರವಾಗಿ ತಾಲ್ಲೂಕು ಕೇಂದ್ರ ತಲುಪಬಹುದಾಗಿದೆ ಎಂದು ಚಂದ್ರಪ್ಪ ಹೇಳಿದರು.<br /> <br /> ಪಟ್ಟಣ ಪಂಚಾಯ್ತಿ ಸದಸ್ಯ ಕೆ.ಸಿ. ರಮೇಶ್ ಮಾತನಾಡಿ, ಶಾಸಕರ ಸಮಾರಂಭಗಳಿಗೆ ಜನ ತಂಡೋಪ ತಂಡವಾಗಿ ಸೇರುತ್ತಿರುವುದು ಅವರ ಜನಪ್ರಿಯತೆಗೆ ಸಾಕ್ಷಿ. ಅವರು ತಮ್ಮ ಅಭಿವೃದ್ಧಿ ಕಾರ್ಯಗಳಿಂದಲೇ ಜನರನ್ನು ಆಕರ್ಷಿಸುತ್ತಿದ್ದಾರೆ. ಮಾತಿಗಿಂತ ಕೃತಿ ಮುಖ್ಯ ಎಂಬ ತತ್ವ ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.<br /> <br /> ದಾಸಯ್ಯನ ಹಟ್ಟಿ, ಅಮೃತಾಪುರದಲ್ಲಿ ಶಾಸಕರು ಮಹಿಳಾ ಭವನಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. <br /> ಎಪಿಎಂಸಿ ಸದಸ್ಯ ಮರುಳಸಿದ್ದಪ್ಪ, ರುಕ್ಷ್ಮಿಣಿ, ರಂಗಪ್ಪ, ಸೋಮಶೇಖರಪ್ಪ, ಗೋವಿಂದಪ್ಪ, ಮಹೇಶ್ವರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ:</strong> ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ ಮತ್ತಿತರ ಮೂಲಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡುವುದಾಗಿ ಶಾಸಕ ಎಂ. ಚಂದ್ರಪ್ಪ ಹೇಳಿದರು.<br /> <br /> ತಾಲ್ಲೂಕಿನ ಹಳೇಹಳ್ಳಿ ಗೊಲ್ಲರಹಟ್ಟಿಯಲ್ಲಿ ಸೋಮವಾರ ರೂ. 5 ಲಕ್ಷ ವೆಚ್ಚದ ಮಹಿಳಾ ಭವನ ಮತ್ತು ರೂ. 10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> ಯಾದವ ಮಹಿಳೆಯರಿಗೆ ತಾಲ್ಲೂಕಿನ 20 ಗೊಲ್ಲರಹಟ್ಟಿಗಳಲ್ಲಿ ತಲಾ ರೂ. 5 ಲಕ್ಷ ವೆಚ್ಚದಲ್ಲಿ ಮಹಿಳಾ ಭವನಗಳನ್ನು ನಿರ್ಮಿಸಲಾಗುತ್ತಿದೆ. ಗೊಲ್ಲರಹಟ್ಟಿಗಳು ಯಾವುದೇ ಮೂಲ ಸೌಕರ್ಯಗಳಿಲ್ಲದೆ ಸೊರಗುತ್ತಿದ್ದು, ಜನ ಕನಿಷ್ಠ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿದ್ದಾರೆ.<br /> <br /> ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಈ ಹಟ್ಟಿಗಳಲ್ಲಿ ಸುಸಜ್ಜಿತ ರಸ್ತೆ, ಚರಂಡಿ, ಉತ್ತಮ ವಾಸಯೋಗ್ಯ ಮನೆಗಳಿಲ್ಲ. ಇದನ್ನು ಮನಗಂಡು ಎಲ್ಲಾ ಗೊಲ್ಲರಹಟ್ಟಿಗಳಿಗೂ ಕಾಂಕ್ರೀಟ್ ರಸ್ತೆಗಳನ್ನು ಮಂಜೂರು ಮಾಡಿಸಿದ್ದೇನೆ. ಹಂತ ಹಂತವಾಗಿ ಮೂಲ ಸೌಲಭ್ಯ ಒದಗಿಸಲು ತೀರ್ಮಾನಿಸಿದ್ದು, ಹಿಂದುಳಿದ ಜನಾಂಗದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದೇನೆ ಎಂದರು.<br /> <br /> ಈ ಭಾಗದಲ್ಲಿ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಅನೇಕ ಗ್ರಾಮೀಣ ಸಂಪರ್ಕ ರಸ್ತೆಗಳನ್ನು ನಿರ್ಮಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ-13 ರಿಂದ ತಾಳ್ಯವರೆಗೆ ರೂ. 2 ಕೋಟಿ ವೆಚ್ಚದ ರಸ್ತೆ ಮತ್ತು ರೂ. 50 ಲಕ್ಷದ ಸೇತುವೆ ನಿರ್ಮಿಸಲಾಗಿದೆ. ಚಿತ್ರಹಳ್ಳಿಯಿಂದ ಅಮೃತಾಪುರ, ಚಿಕ್ಕಜಾಜೂರು ರಸ್ತೆಗೆ ರೂ. 3 ಕೋಟಿ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು. ರೂ. 1 ಕೋಟಿ ವೆಚ್ಚದಲ್ಲಿ ಶಿವಗಂಗಾ- ಕೊಂಡಾಪುರ ರಸ್ತೆ ನಿರ್ಮಿಸುತ್ತಿದ್ದು, ಈ ಮಾರ್ಗದ ಏಳು ಹಳ್ಳಿಗಳ ಜನ ನೇರವಾಗಿ ತಾಲ್ಲೂಕು ಕೇಂದ್ರ ತಲುಪಬಹುದಾಗಿದೆ ಎಂದು ಚಂದ್ರಪ್ಪ ಹೇಳಿದರು.<br /> <br /> ಪಟ್ಟಣ ಪಂಚಾಯ್ತಿ ಸದಸ್ಯ ಕೆ.ಸಿ. ರಮೇಶ್ ಮಾತನಾಡಿ, ಶಾಸಕರ ಸಮಾರಂಭಗಳಿಗೆ ಜನ ತಂಡೋಪ ತಂಡವಾಗಿ ಸೇರುತ್ತಿರುವುದು ಅವರ ಜನಪ್ರಿಯತೆಗೆ ಸಾಕ್ಷಿ. ಅವರು ತಮ್ಮ ಅಭಿವೃದ್ಧಿ ಕಾರ್ಯಗಳಿಂದಲೇ ಜನರನ್ನು ಆಕರ್ಷಿಸುತ್ತಿದ್ದಾರೆ. ಮಾತಿಗಿಂತ ಕೃತಿ ಮುಖ್ಯ ಎಂಬ ತತ್ವ ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.<br /> <br /> ದಾಸಯ್ಯನ ಹಟ್ಟಿ, ಅಮೃತಾಪುರದಲ್ಲಿ ಶಾಸಕರು ಮಹಿಳಾ ಭವನಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. <br /> ಎಪಿಎಂಸಿ ಸದಸ್ಯ ಮರುಳಸಿದ್ದಪ್ಪ, ರುಕ್ಷ್ಮಿಣಿ, ರಂಗಪ್ಪ, ಸೋಮಶೇಖರಪ್ಪ, ಗೋವಿಂದಪ್ಪ, ಮಹೇಶ್ವರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>