<p><strong>ಕೋಲಾರ: </strong>ನೀರಿನ ಸಮಸ್ಯೆ ನೀಗಿಸ ಬೇಕು ಎಂದು ಆಗ್ರಹಿಸಿ ಕೋಲಾರದ ಇದ್ರಿಸ್ ಮೊಹಲ್ಲಾ ಮಹಿಳೆಯರು ನಗರಸಭೆ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದರು.21ನೇ ವಾರ್ಡಿನಲ್ಲಿ ಕಳೆದ 6 ತಿಂಗಳಿಂದ ಕುಡಿಯುವ ನೀರು ಇಲ್ಲ ದಂತಾಗಿದೆ.<br /> <br /> ಜನ ಪರದಾಡುತ್ತಿದ್ದರೂ ನಗರಸಭೆ ಸದಸ್ಯರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.<br /> ವಾರ್ಡ್ನ ಕೊಳವೆ ಬಾವಿ ಬತ್ತಿ ಸುಮಾರು ವರ್ಷ ಕಳೆದಿವೆ. ವಾರ್ಡ್ಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, ಕೇವಲ ಒಂದು ವಾರಕ್ಕೆ ಒಂದು ಟ್ಯಾಂಕರ್ ಮಾತ್ರ ಬರುತ್ತದೆ. ಅಡುಗೆ ಮಾಡಲು ಸಹ ನೀರಿಲ್ಲದಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.<br /> <br /> ನೀರು ಒದಗಿಸುವವರೆಗೂ ಧರಣಿ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಸಹಾಯಕ ಎಂಜಿನಿಯರ್ಗಳನ್ನು ತರಾಟೆಗೆ ತೆಗೆದುಕೊಂಡರು. ನೂರಾರು ಕುಟುಂಬಗಳು ಇರುವ ವಾರ್ಡಿಗೆ ಕೇವಲ ಒಂದು ವಾರಕ್ಕೆ ಒಂದು ಟ್ಯಾಂಕರ್ ನೀರು ಕಳುಹಿಸಿದರೆ ಹೇಗೆ ಜೀವನ ಸಾಧ್ಯ? ಎಂದು ಪ್ರಶ್ನಿಸಿದರು. <br /> <br /> ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವು ದಾಗಿ ನಗರಸಭೆ ಅಧ್ಯಕ್ಷೆ ನಾಜಿಯಾ ಭರವಸೆ ನೀಡಿದರೂ ಪ್ರತಿಭಟನಾಕಾ ರರು ಧರಣಿ ಮುಂದುವರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ನೀರಿನ ಸಮಸ್ಯೆ ನೀಗಿಸ ಬೇಕು ಎಂದು ಆಗ್ರಹಿಸಿ ಕೋಲಾರದ ಇದ್ರಿಸ್ ಮೊಹಲ್ಲಾ ಮಹಿಳೆಯರು ನಗರಸಭೆ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದರು.21ನೇ ವಾರ್ಡಿನಲ್ಲಿ ಕಳೆದ 6 ತಿಂಗಳಿಂದ ಕುಡಿಯುವ ನೀರು ಇಲ್ಲ ದಂತಾಗಿದೆ.<br /> <br /> ಜನ ಪರದಾಡುತ್ತಿದ್ದರೂ ನಗರಸಭೆ ಸದಸ್ಯರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.<br /> ವಾರ್ಡ್ನ ಕೊಳವೆ ಬಾವಿ ಬತ್ತಿ ಸುಮಾರು ವರ್ಷ ಕಳೆದಿವೆ. ವಾರ್ಡ್ಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, ಕೇವಲ ಒಂದು ವಾರಕ್ಕೆ ಒಂದು ಟ್ಯಾಂಕರ್ ಮಾತ್ರ ಬರುತ್ತದೆ. ಅಡುಗೆ ಮಾಡಲು ಸಹ ನೀರಿಲ್ಲದಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.<br /> <br /> ನೀರು ಒದಗಿಸುವವರೆಗೂ ಧರಣಿ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಸಹಾಯಕ ಎಂಜಿನಿಯರ್ಗಳನ್ನು ತರಾಟೆಗೆ ತೆಗೆದುಕೊಂಡರು. ನೂರಾರು ಕುಟುಂಬಗಳು ಇರುವ ವಾರ್ಡಿಗೆ ಕೇವಲ ಒಂದು ವಾರಕ್ಕೆ ಒಂದು ಟ್ಯಾಂಕರ್ ನೀರು ಕಳುಹಿಸಿದರೆ ಹೇಗೆ ಜೀವನ ಸಾಧ್ಯ? ಎಂದು ಪ್ರಶ್ನಿಸಿದರು. <br /> <br /> ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವು ದಾಗಿ ನಗರಸಭೆ ಅಧ್ಯಕ್ಷೆ ನಾಜಿಯಾ ಭರವಸೆ ನೀಡಿದರೂ ಪ್ರತಿಭಟನಾಕಾ ರರು ಧರಣಿ ಮುಂದುವರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>