<p><strong>ಮದ್ದೂರು:</strong> ತಾಲ್ಲೂಕಿನ ಕುದರಗುಂಡಿ ಕಾಲೋನಿ ಹಾಗೂ ಮಲ್ಲಯ್ಯನದೊಡ್ಡಿ ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಜಿಲ್ಲಾಪಂಚಾಯಿತಿ ಎಂಜನಿಯರಿಂಗ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> <br /> ಖಾಲಿ ಕೊಡಗಳೊಂದಿಗೆ ಕಚೇರಿ ಎದುರು ಅರ್ಧತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.<br /> <br /> ಗ್ರಾಮದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ಆದೇಶ ನೀಡಲಾಗಿದ್ದರೂ, ಅಧಿಕಾರಿಗಳು ಗ್ರಾಮದ ಕೆಲವು ಪ್ರಭಾವಿಗಳ ಮರ್ಜಿಗೆ ಒಳಗಾಗಿ ಕೊಳವೆ ಬಾವಿ ಕೊರೆಸಲು ಮುಂದಾಗಿಲ್ಲ. ಈ ಕೂಡಲೇ ಮಂಜೂರಾಗಿರುವ ಕೊಳವೆ ಬಾವಿ ಕೊರೆಸುವ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಗ್ರಾಮದ ಮುಖಂಡ ಶ್ರೀನಿವಾಸ್ ಎಚ್ಚರಿಕೆ ನೀಡಿದರು.<br /> ಮುಖಂಡರಾದ ನಾಗೇಶ್, ಆನಂದ್, ಕೆ.ಶಿವರಾಮು, ಚಿಕ್ಕಬೋರಯ್ಯ, ಗೀತಾ, ಸಾವಿತ್ರಮ್ಮ, ಸುಜಾತ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ತಾಲ್ಲೂಕಿನ ಕುದರಗುಂಡಿ ಕಾಲೋನಿ ಹಾಗೂ ಮಲ್ಲಯ್ಯನದೊಡ್ಡಿ ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಜಿಲ್ಲಾಪಂಚಾಯಿತಿ ಎಂಜನಿಯರಿಂಗ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> <br /> ಖಾಲಿ ಕೊಡಗಳೊಂದಿಗೆ ಕಚೇರಿ ಎದುರು ಅರ್ಧತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.<br /> <br /> ಗ್ರಾಮದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ಆದೇಶ ನೀಡಲಾಗಿದ್ದರೂ, ಅಧಿಕಾರಿಗಳು ಗ್ರಾಮದ ಕೆಲವು ಪ್ರಭಾವಿಗಳ ಮರ್ಜಿಗೆ ಒಳಗಾಗಿ ಕೊಳವೆ ಬಾವಿ ಕೊರೆಸಲು ಮುಂದಾಗಿಲ್ಲ. ಈ ಕೂಡಲೇ ಮಂಜೂರಾಗಿರುವ ಕೊಳವೆ ಬಾವಿ ಕೊರೆಸುವ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಗ್ರಾಮದ ಮುಖಂಡ ಶ್ರೀನಿವಾಸ್ ಎಚ್ಚರಿಕೆ ನೀಡಿದರು.<br /> ಮುಖಂಡರಾದ ನಾಗೇಶ್, ಆನಂದ್, ಕೆ.ಶಿವರಾಮು, ಚಿಕ್ಕಬೋರಯ್ಯ, ಗೀತಾ, ಸಾವಿತ್ರಮ್ಮ, ಸುಜಾತ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>