<p><strong>ಮಾಲೂರು: </strong>ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಪುರಸಭಾ ಉಪಾಧ್ಯಕ್ಷ ಎ.ರಾಜಪ್ಪ ತಿಳಿಸಿದರು.<br /> <br /> ಮಂಗಳವಾರ ಪುರಸಭಾ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರತಿದಿನ 54 ಲಕ್ಷ ಲೀಟರ್ ನೀರಿನ ಬೇಡಿಕೆ ಇದ್ದು, ಕೊಳವೆ ಬಾವಿಗಳಿಂದ 24 ಲಕ್ಷ ಲೀ. ನೀರು ಮಾತ್ರ ಶೇಖರಣೆಯಾಗುತ್ತಿದೆ. 30 ಲಕ್ಷ ಲೀ. ನೀರು ಕೊರತೆ ಇರುವುದರಿಂದ ಸಮಸ್ಯೆ ಎದುರಾಗಿದೆ. <br /> <br /> ಟ್ಯಾಂಕರ್ ಮೂಲಕ ತುರ್ತಾಗಿ ನೀರು ಪೂರೈಸಲು ಬರ ಪರಿಹಾರ ನಿಧಿಯಿಂದ ಮಂಜೂರಾಗಿರುವ 10 ಲಕ್ಷ ರೂ. ಗಳನ್ನು ಬಳಕೆ ಮಾಡಿಕೊಳ್ಳಲು ಜಿಲ್ಲಾಧಿ ಕಾರಿ ಸೂಚಿಸಿದ್ದಾರೆ. ನೀರಿನ ಸಮಸ್ಯೆ ಎದುರಿಸುತ್ತಿರುವ ವಾರ್ಡ್ ಗಳಿಗೆ ಪ್ರತಿದಿನ 5 ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು. <br /> ಪಟ್ಟಣದಲ್ಲಿ 160 ಪುರಸಭೆಯ ಕೊಳವೆ ಬಾವಿಗಳಿದ್ದು, 75 ಬಾವಿಗಳಲ್ಲಿ ಮಾತ್ರ ನೀರು ಸರಬರಾಜು ಆಗುತ್ತಿದೆ. ಉಳಿದ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಖಾಸಗಿ ಬೋರ್ವೆಲ್ಗಳ ಮಾಲೀಕರ ಸಭೆಯನ್ನು ಬುಧವಾರ ಕರೆದಿದ್ದು, ಮಳೆಗಾಲದವರೆಗೆ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಮನವೊಲಿಸುವುದಾಗಿ ಹೇಳಿದರು. <br /> ಪುರಸಭಾ ಅಧ್ಯಕ್ಷೆ ಗುಲಾಬ್ಜಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ, ಎಂಜಿನಿಯರ್ಗಳಾದ ನರಸಿಂಹಸ್ವಾಮಿ, ವಿಶ್ವನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಪುರಸಭಾ ಉಪಾಧ್ಯಕ್ಷ ಎ.ರಾಜಪ್ಪ ತಿಳಿಸಿದರು.<br /> <br /> ಮಂಗಳವಾರ ಪುರಸಭಾ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರತಿದಿನ 54 ಲಕ್ಷ ಲೀಟರ್ ನೀರಿನ ಬೇಡಿಕೆ ಇದ್ದು, ಕೊಳವೆ ಬಾವಿಗಳಿಂದ 24 ಲಕ್ಷ ಲೀ. ನೀರು ಮಾತ್ರ ಶೇಖರಣೆಯಾಗುತ್ತಿದೆ. 30 ಲಕ್ಷ ಲೀ. ನೀರು ಕೊರತೆ ಇರುವುದರಿಂದ ಸಮಸ್ಯೆ ಎದುರಾಗಿದೆ. <br /> <br /> ಟ್ಯಾಂಕರ್ ಮೂಲಕ ತುರ್ತಾಗಿ ನೀರು ಪೂರೈಸಲು ಬರ ಪರಿಹಾರ ನಿಧಿಯಿಂದ ಮಂಜೂರಾಗಿರುವ 10 ಲಕ್ಷ ರೂ. ಗಳನ್ನು ಬಳಕೆ ಮಾಡಿಕೊಳ್ಳಲು ಜಿಲ್ಲಾಧಿ ಕಾರಿ ಸೂಚಿಸಿದ್ದಾರೆ. ನೀರಿನ ಸಮಸ್ಯೆ ಎದುರಿಸುತ್ತಿರುವ ವಾರ್ಡ್ ಗಳಿಗೆ ಪ್ರತಿದಿನ 5 ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು. <br /> ಪಟ್ಟಣದಲ್ಲಿ 160 ಪುರಸಭೆಯ ಕೊಳವೆ ಬಾವಿಗಳಿದ್ದು, 75 ಬಾವಿಗಳಲ್ಲಿ ಮಾತ್ರ ನೀರು ಸರಬರಾಜು ಆಗುತ್ತಿದೆ. ಉಳಿದ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಖಾಸಗಿ ಬೋರ್ವೆಲ್ಗಳ ಮಾಲೀಕರ ಸಭೆಯನ್ನು ಬುಧವಾರ ಕರೆದಿದ್ದು, ಮಳೆಗಾಲದವರೆಗೆ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಮನವೊಲಿಸುವುದಾಗಿ ಹೇಳಿದರು. <br /> ಪುರಸಭಾ ಅಧ್ಯಕ್ಷೆ ಗುಲಾಬ್ಜಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ, ಎಂಜಿನಿಯರ್ಗಳಾದ ನರಸಿಂಹಸ್ವಾಮಿ, ವಿಶ್ವನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>