<p><strong>ಮದ್ದೂರು: </strong>ಪಟ್ಟಣದ ಪೊಲೀಸ್ ಹಾಗೂ ಸರ್ಕಾರಿ ವಸತಿ ಗೃಹಗಳ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಮಂಗಳವಾರ ಅಲ್ಲಿನ ನಿವಾಸಿಗಳು ಪುರಸಭಾ ಕಚೇರಿ ಎದುರು ಖಾಲಿ ಕೊಡ ಪ್ರದರ್ಶನ ನಡೆಸಿ ಪ್ರತಿಭಟಿಸಿದರು.<br /> <br /> ಪುರಸಭಾ ಅಧಿಕಾರಿಗಳ ವಿರುದ್ಧ ಘೋಷಣೆ ಮೊಳಗಿಸಿದ ಅವರು, ಅರ್ಧಗಂಟೆಗೂ ಹೆಚ್ಚು ಕಾಲ ಕಚೇರಿ ಎದುರು ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಒಂದು ತಿಂಗಳಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ. ಈ ಕುರಿತು ಪುರಸಭೆಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ. ಇಲ್ಲಿನ ನಿವಾಸಿಗಳು ದೂರದ ಬೋರ್ವೆಲ್ಗಳಿಗೆ ತೆರಳಿ ನೀರು ಹೊತ್ತು ತರಬೇಕಾದ ಪರಿಸ್ಥಿತಿ ಒದಗಿದೆ ಎಂದು ಕಾಲೋನಿಯ ಮಹಿಳೆಯರು ತಮ್ಮ ಅಳಲು ವ್ಯಕ್ತಪಡಿಸಿದರು.<br /> <br /> ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಪುರಸಭಾ ಎಂಜಿನಿಯರ್ ಪ್ರಸಾದ್ ಅವರನ್ನು ಸುತ್ತುವರಿದ ಮಹಿಳೆಯರು ಅವರ ವಿರುದ್ಧ ಘೋಷಣೆ ಮೊಳಗಿಸಿದರು. ಮಹಿಳೆಯರನ್ನು ಸಮಾಧಾನಗೊಳಿಸಿದ ಪ್ರಸಾದ್ ಅವರು, ವಿದ್ಯುತ್ ಅಭಾವದಿಂದಾಗಿ ಸಮರ್ಪಕ ಕುಡಿಯುವ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ.<br /> <br /> ಇನ್ನೊಂದು ವಾರದೊಳಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಸುವ ಮೂಲಕ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುವುದು ಎಂಬ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆಯಲಾಯಿತು. ಶಿವಮ್ಮ, ಇಂದ್ರಮ್ಮ, ಅನುಪಮ, ಶಾಂತಮ್ಮ, ಕಲ್ಪನಾ, ಮಂಜುಳಾ, ನಾಗಮ್ಮ, ಚಿಕ್ಕತಾಯಮ್ಮ, ಹೇಮಾವತಿ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು: </strong>ಪಟ್ಟಣದ ಪೊಲೀಸ್ ಹಾಗೂ ಸರ್ಕಾರಿ ವಸತಿ ಗೃಹಗಳ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಮಂಗಳವಾರ ಅಲ್ಲಿನ ನಿವಾಸಿಗಳು ಪುರಸಭಾ ಕಚೇರಿ ಎದುರು ಖಾಲಿ ಕೊಡ ಪ್ರದರ್ಶನ ನಡೆಸಿ ಪ್ರತಿಭಟಿಸಿದರು.<br /> <br /> ಪುರಸಭಾ ಅಧಿಕಾರಿಗಳ ವಿರುದ್ಧ ಘೋಷಣೆ ಮೊಳಗಿಸಿದ ಅವರು, ಅರ್ಧಗಂಟೆಗೂ ಹೆಚ್ಚು ಕಾಲ ಕಚೇರಿ ಎದುರು ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಒಂದು ತಿಂಗಳಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ. ಈ ಕುರಿತು ಪುರಸಭೆಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ. ಇಲ್ಲಿನ ನಿವಾಸಿಗಳು ದೂರದ ಬೋರ್ವೆಲ್ಗಳಿಗೆ ತೆರಳಿ ನೀರು ಹೊತ್ತು ತರಬೇಕಾದ ಪರಿಸ್ಥಿತಿ ಒದಗಿದೆ ಎಂದು ಕಾಲೋನಿಯ ಮಹಿಳೆಯರು ತಮ್ಮ ಅಳಲು ವ್ಯಕ್ತಪಡಿಸಿದರು.<br /> <br /> ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಪುರಸಭಾ ಎಂಜಿನಿಯರ್ ಪ್ರಸಾದ್ ಅವರನ್ನು ಸುತ್ತುವರಿದ ಮಹಿಳೆಯರು ಅವರ ವಿರುದ್ಧ ಘೋಷಣೆ ಮೊಳಗಿಸಿದರು. ಮಹಿಳೆಯರನ್ನು ಸಮಾಧಾನಗೊಳಿಸಿದ ಪ್ರಸಾದ್ ಅವರು, ವಿದ್ಯುತ್ ಅಭಾವದಿಂದಾಗಿ ಸಮರ್ಪಕ ಕುಡಿಯುವ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ.<br /> <br /> ಇನ್ನೊಂದು ವಾರದೊಳಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಸುವ ಮೂಲಕ ಸಮಸ್ಯೆ ಬಗೆಹರಿಸಲು ಯತ್ನಿಸಲಾಗುವುದು ಎಂಬ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆಯಲಾಯಿತು. ಶಿವಮ್ಮ, ಇಂದ್ರಮ್ಮ, ಅನುಪಮ, ಶಾಂತಮ್ಮ, ಕಲ್ಪನಾ, ಮಂಜುಳಾ, ನಾಗಮ್ಮ, ಚಿಕ್ಕತಾಯಮ್ಮ, ಹೇಮಾವತಿ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>