<p>ಹುಣಸಗಿ: ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಗೆ ಶನಿವಾರ ರಾತ್ರಿ ನೀರು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಭಾನುವಾರ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ಮುಖಂಡರೊಂದಿಗೆ ನಾರಾಯಣಪುರಕ್ಕೆ ತೆರಳಿ ಕೃಷ್ಣಾ ಭಾಗ್ಯ ಜಲ ನಿಮಗದ ಅಧಿಕಾರಿಗಳನ್ನು ಭೇಟಿ ಮಾಡಿದರು.<br /> <br /> ರೈತರ ಬೆಳೆಗಳಿಗೆ ಒಂದು ವಾರ ನೀರಿನ ಅವಶ್ಯಕತೆ ಇದ್ದು ರೈತರ ಹಿತ ಕಾಪಾಡಲು ಮಾರ್ಚ್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಬೇಕು ಎಂದು ಮುಖ್ಯ ಎಂಜಿನಿಯರ್ ಎನ್.ಕ್ಷೇತ್ರಪಾಲ್ ಅವರಿಗೆ ಮನವಿ ಮಾಡಿದರು.<br /> <br /> ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಕಾಳು ಕಟ್ಟುತ್ತಿದೆ. ಈ ಹಂತದಲ್ಲಿ ನೀರು ಇಲ್ಲದಿದ್ದರೇ ಸಂಪೂರ್ಣ ಬೆಳೆ ಹಾನಿಯಾಗಲಿದೆ ಎಂದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಎಂಜಿನಿಯರ್ ಕ್ಷೇತ್ರಪಾಲ, ಬಸವ ಸಾಗರ ಜಲಾಶಯದಲ್ಲಿ ಕೇವಲ 1.309 ಟಿಎಂಸಿ ನೀರಿನ ಸಂಗ್ರಹವಿದೆ. ಈ ನೀರನ್ನು ಬೇಸಿಗೆಯಲ್ಲಿ 40 ಹಳ್ಳಿಗಳಿಗೆ ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. ಕೃಷಿಗೆ ಬಳಸುವ ನೀರನ್ನು ಸಂಪೂರ್ಣವಾಗಿ ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಹಕಾರ ನೀಡಬೇಕು ಎಂದರು.<br /> <br /> ನಂತರ ಮುಖ್ಯ ಎಂಜಿನಿಯರ್ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆರ್.ವಿ.ನಾಯಕ, ರೈತರಿಗೆ ನೀರು ಒದಗಿಸಲು ಜಲಸಂಪನ್ಮೂಲ ಸಚಿವರೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ನೀರು ಹರಿಸಲು ಪ್ರಯತ್ನಿಸಲಾಗುತ್ತಿದೆ. ಇನ್ನೆರಡು ದಿನದಲ್ಲಿ ನಿರ್ಣಯ ತಿಳಿಸುವುದಾಗಿ ಹೇಳಿದರು.<br /> <br /> ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರಗೌಡ ಪಾಟೀಲ, ಗೋಪಾಲದಾಸ ಲಡ್ಡಾ, ಮುಖಂಡರಾದ ಬಸನಗೌಡ ಯಡಿಯಾಪುರ, ಸೂಲಪ್ಪ ಕಮತಗಿ, ವಿಠ್ಠಲ್ ಯಾದವ, ಯಂಕೋಬ ಮಂಗಳೂರ, ರಾಜಾ ವೇಣುಗೋಪಾಲ, ಮಾರ್ತಾಂಡಪ್ಪ, ನಾಗಪ್ಪ, ಶಾಂತಪ್ಪ ಮೇಸ್ತಕ, ಅಮರೇಶ, ನಾಗರಾಜ ಜೋಗುರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಗೆ ಶನಿವಾರ ರಾತ್ರಿ ನೀರು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಭಾನುವಾರ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ಮುಖಂಡರೊಂದಿಗೆ ನಾರಾಯಣಪುರಕ್ಕೆ ತೆರಳಿ ಕೃಷ್ಣಾ ಭಾಗ್ಯ ಜಲ ನಿಮಗದ ಅಧಿಕಾರಿಗಳನ್ನು ಭೇಟಿ ಮಾಡಿದರು.<br /> <br /> ರೈತರ ಬೆಳೆಗಳಿಗೆ ಒಂದು ವಾರ ನೀರಿನ ಅವಶ್ಯಕತೆ ಇದ್ದು ರೈತರ ಹಿತ ಕಾಪಾಡಲು ಮಾರ್ಚ್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಬೇಕು ಎಂದು ಮುಖ್ಯ ಎಂಜಿನಿಯರ್ ಎನ್.ಕ್ಷೇತ್ರಪಾಲ್ ಅವರಿಗೆ ಮನವಿ ಮಾಡಿದರು.<br /> <br /> ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಕಾಳು ಕಟ್ಟುತ್ತಿದೆ. ಈ ಹಂತದಲ್ಲಿ ನೀರು ಇಲ್ಲದಿದ್ದರೇ ಸಂಪೂರ್ಣ ಬೆಳೆ ಹಾನಿಯಾಗಲಿದೆ ಎಂದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಎಂಜಿನಿಯರ್ ಕ್ಷೇತ್ರಪಾಲ, ಬಸವ ಸಾಗರ ಜಲಾಶಯದಲ್ಲಿ ಕೇವಲ 1.309 ಟಿಎಂಸಿ ನೀರಿನ ಸಂಗ್ರಹವಿದೆ. ಈ ನೀರನ್ನು ಬೇಸಿಗೆಯಲ್ಲಿ 40 ಹಳ್ಳಿಗಳಿಗೆ ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. ಕೃಷಿಗೆ ಬಳಸುವ ನೀರನ್ನು ಸಂಪೂರ್ಣವಾಗಿ ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಹಕಾರ ನೀಡಬೇಕು ಎಂದರು.<br /> <br /> ನಂತರ ಮುಖ್ಯ ಎಂಜಿನಿಯರ್ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆರ್.ವಿ.ನಾಯಕ, ರೈತರಿಗೆ ನೀರು ಒದಗಿಸಲು ಜಲಸಂಪನ್ಮೂಲ ಸಚಿವರೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ನೀರು ಹರಿಸಲು ಪ್ರಯತ್ನಿಸಲಾಗುತ್ತಿದೆ. ಇನ್ನೆರಡು ದಿನದಲ್ಲಿ ನಿರ್ಣಯ ತಿಳಿಸುವುದಾಗಿ ಹೇಳಿದರು.<br /> <br /> ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರಗೌಡ ಪಾಟೀಲ, ಗೋಪಾಲದಾಸ ಲಡ್ಡಾ, ಮುಖಂಡರಾದ ಬಸನಗೌಡ ಯಡಿಯಾಪುರ, ಸೂಲಪ್ಪ ಕಮತಗಿ, ವಿಠ್ಠಲ್ ಯಾದವ, ಯಂಕೋಬ ಮಂಗಳೂರ, ರಾಜಾ ವೇಣುಗೋಪಾಲ, ಮಾರ್ತಾಂಡಪ್ಪ, ನಾಗಪ್ಪ, ಶಾಂತಪ್ಪ ಮೇಸ್ತಕ, ಅಮರೇಶ, ನಾಗರಾಜ ಜೋಗುರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>