<p><strong>ಚನ್ನರಾಯಪಟ್ಟಣ: </strong>ಕುಡಿಯುವ ನೀರು ಯೋಜನೆಗಾಗಿ ನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲು ರಾಜ್ಯ ಸರ್ಕಾರ 17.85 ಕೋಟಿ ರೂ. ಬಿಡುಗಡೆ ಮಾಡಿದ್ದು, ಸದ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಸಿ.ಎಸ್. ಪುಟ್ಟೇಗೌಡ ಹೇಳಿದರು.<br /> <br /> ತಾಲ್ಲೂಕಿನ ನುಗ್ಗೇಹಳ್ಳಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ~ಗ್ರಾಮಸ್ಥರ ಸಭೆ~ಯಲ್ಲಿ ಮಾತನಾಡಿದರು.<br /> ಬಾಗೂರು ಏತ ನೀರಾವರಿ ಯೋಜನೆಯ ಪ್ರವೇಶದಲ್ಲಿರುವ ನಾಲೆ ಮೂಲಕ ನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲಾಗುವುದು. ಈ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದ್ದು, ಸದ್ಯದಲ್ಲಿ ಟೆಂಡರ್ ಕರೆಯಲಾಗುವುದು. ಶಂಕುಸ್ಥಾಪನೆಯ ದಿನಾಂಕ ನಿಗದಿಗೊಳಿಸಿ ಮುಖ್ಯಮಂತ್ರಿ ಸೇರಿ ಸಂಬಂಧಿಸಿದ ಸಚಿವರು, ಅಧಿಕಾರಿಗಳನ್ನು ಆಹ್ವಾನಿಸಲಾಗುವುದು ಎಂದರು.<br /> <br /> ಕೆರೆಗೆ ನೀರು ಹರಿಸುವುದರಿಂದ ಈ ಭಾಗದಲ್ಲಿನ ಕುಡಿಯುವ ನೀರಿನ ಬವಣೆ ನೀಗಲಿದೆ. ಸುತ್ತಲು ಅಂತರ್ಜಲ ಹೆಚ್ಚಾಗಲಿದೆ. ಹಿರೀಸಾವೆ -ಶ್ರವಣಬೆಳಗೊಳ ಏತ ನೀರಾವರಿ ಯೋಜನೆಗೆ ಸದ್ಯದಲ್ಲಿ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಹೇಳಿದರು. <br /> <br /> ತಾ.ಪಂ. ಅಧ್ಯಕ್ಷ ರಂಗಮ್ಮ ರಾಮಕೃಷ್ಣೇಗೌಡ, ಜಿ.ಪಂ ಮಾಜಿ ಉಪಾಧ್ಯಕ್ಷ ಎ.ಈ. ಚಂದ್ರಶೇಖರ್. ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಕೆಂಪನಂಜೇಗೌಡ, ಎಪಿಎಂಸಿ ನಿರ್ದೇಶಕ ಬಿ.ಆರ್. ದೊರೆಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ: </strong>ಕುಡಿಯುವ ನೀರು ಯೋಜನೆಗಾಗಿ ನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲು ರಾಜ್ಯ ಸರ್ಕಾರ 17.85 ಕೋಟಿ ರೂ. ಬಿಡುಗಡೆ ಮಾಡಿದ್ದು, ಸದ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಸಿ.ಎಸ್. ಪುಟ್ಟೇಗೌಡ ಹೇಳಿದರು.<br /> <br /> ತಾಲ್ಲೂಕಿನ ನುಗ್ಗೇಹಳ್ಳಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ~ಗ್ರಾಮಸ್ಥರ ಸಭೆ~ಯಲ್ಲಿ ಮಾತನಾಡಿದರು.<br /> ಬಾಗೂರು ಏತ ನೀರಾವರಿ ಯೋಜನೆಯ ಪ್ರವೇಶದಲ್ಲಿರುವ ನಾಲೆ ಮೂಲಕ ನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲಾಗುವುದು. ಈ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದ್ದು, ಸದ್ಯದಲ್ಲಿ ಟೆಂಡರ್ ಕರೆಯಲಾಗುವುದು. ಶಂಕುಸ್ಥಾಪನೆಯ ದಿನಾಂಕ ನಿಗದಿಗೊಳಿಸಿ ಮುಖ್ಯಮಂತ್ರಿ ಸೇರಿ ಸಂಬಂಧಿಸಿದ ಸಚಿವರು, ಅಧಿಕಾರಿಗಳನ್ನು ಆಹ್ವಾನಿಸಲಾಗುವುದು ಎಂದರು.<br /> <br /> ಕೆರೆಗೆ ನೀರು ಹರಿಸುವುದರಿಂದ ಈ ಭಾಗದಲ್ಲಿನ ಕುಡಿಯುವ ನೀರಿನ ಬವಣೆ ನೀಗಲಿದೆ. ಸುತ್ತಲು ಅಂತರ್ಜಲ ಹೆಚ್ಚಾಗಲಿದೆ. ಹಿರೀಸಾವೆ -ಶ್ರವಣಬೆಳಗೊಳ ಏತ ನೀರಾವರಿ ಯೋಜನೆಗೆ ಸದ್ಯದಲ್ಲಿ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಹೇಳಿದರು. <br /> <br /> ತಾ.ಪಂ. ಅಧ್ಯಕ್ಷ ರಂಗಮ್ಮ ರಾಮಕೃಷ್ಣೇಗೌಡ, ಜಿ.ಪಂ ಮಾಜಿ ಉಪಾಧ್ಯಕ್ಷ ಎ.ಈ. ಚಂದ್ರಶೇಖರ್. ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಕೆಂಪನಂಜೇಗೌಡ, ಎಪಿಎಂಸಿ ನಿರ್ದೇಶಕ ಬಿ.ಆರ್. ದೊರೆಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>