<p>ಕೆಜಿಎಫ್: ನುಡಿ ತೇರಿನ ಮಹತ್ವವನ್ನು ಗಡಿಭಾಗದ ಜನರಿಗೆ ತಲುಪಿಸಿ ಅವರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ಕೆಲಸವನ್ನು ಕನ್ನಡ ಪರ ಸಂಘಟನೆಗಳು ಮಾಡಬೇಕು ಎಂದು ಶಾಸಕ ವೈ.ಸಂಪಂಗಿ ಹೇಳಿದರು.<br /> ಜ. 24 ರಂದು ಕೆಜಿಎಫ್ನಲ್ಲಿ ಚಾಲನೆ ಸಿಗುವ ಕನ್ನಡ ನುಡಿ ತೇರು ಕಾರ್ಯಕ್ರಮದ ಅಂಗವಾಗಿ ಸೋಮವಾರ ಊರಿಗಾಂನಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದರು.<br /> <br /> ಸಚಿವ ಗೋವಿಂದ ಕಾರಜೋಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವರ್ತೂರು ಪ್ರಕಾಶ್ ಸಮ್ಮೇಳನದಲ್ಲಿ ಭಾಗವಹಿಸುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ತೇರನ್ನು ಉದ್ಘಾಟಿಸುವ ಕಾರ್ಯಕ್ರಮವಿದ್ದು, ಅದಿನ್ನೂ ದೃಢಪಡಬೇಕಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಲ್ಲಿಕಾರ್ಜುನಯ್ಯ ಹೇಳಿದರು.<br /> <br /> ಕಾರ್ಯಕ್ರಮಕ್ಕೆ ಕನ್ನಡ ಪರ ಹೋರಾಟ ನಡೆಸುತ್ತಿರುವ ಸಂಘ ಸಂಸ್ಥೆಗಳನ್ನು ಕಡೆಗಣಿಸಲಾಗಿದೆ ಎಂದು ಕನ್ನಡ ಹೋರಾಟಗಾರರಾದ ರಾಜಗೋಪಾಲಗೌಡ ಮತ್ತು ವಿ.ಎಸ್. ಪ್ರಕಾಶ್ ಆರೋಪಿಸಿದರು. <br /> <br /> ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ನಡೆದ ದಿಬ್ಬಣದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟಾಚಲಪತಿ ಹೇಳಿದರು.<br /> <br /> ಉಪವಿಭಾಗಾಧಿಕಾರಿ ಪೆದ್ದಪ್ಪಯ್ಯ, ತಹಶೀಲ್ದಾರ್ ಮಂಗಳಾ, ಪೌರಾಯುಕ್ತ ಬಾಲಚಂದ್ರ, ಡಿವೈಎಸ್ಪಿ, ಎಂ.ವಿ.ಶೇಷನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ನುಡಿ ತೇರಿನ ಮಹತ್ವವನ್ನು ಗಡಿಭಾಗದ ಜನರಿಗೆ ತಲುಪಿಸಿ ಅವರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ಕೆಲಸವನ್ನು ಕನ್ನಡ ಪರ ಸಂಘಟನೆಗಳು ಮಾಡಬೇಕು ಎಂದು ಶಾಸಕ ವೈ.ಸಂಪಂಗಿ ಹೇಳಿದರು.<br /> ಜ. 24 ರಂದು ಕೆಜಿಎಫ್ನಲ್ಲಿ ಚಾಲನೆ ಸಿಗುವ ಕನ್ನಡ ನುಡಿ ತೇರು ಕಾರ್ಯಕ್ರಮದ ಅಂಗವಾಗಿ ಸೋಮವಾರ ಊರಿಗಾಂನಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದರು.<br /> <br /> ಸಚಿವ ಗೋವಿಂದ ಕಾರಜೋಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವರ್ತೂರು ಪ್ರಕಾಶ್ ಸಮ್ಮೇಳನದಲ್ಲಿ ಭಾಗವಹಿಸುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ತೇರನ್ನು ಉದ್ಘಾಟಿಸುವ ಕಾರ್ಯಕ್ರಮವಿದ್ದು, ಅದಿನ್ನೂ ದೃಢಪಡಬೇಕಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಲ್ಲಿಕಾರ್ಜುನಯ್ಯ ಹೇಳಿದರು.<br /> <br /> ಕಾರ್ಯಕ್ರಮಕ್ಕೆ ಕನ್ನಡ ಪರ ಹೋರಾಟ ನಡೆಸುತ್ತಿರುವ ಸಂಘ ಸಂಸ್ಥೆಗಳನ್ನು ಕಡೆಗಣಿಸಲಾಗಿದೆ ಎಂದು ಕನ್ನಡ ಹೋರಾಟಗಾರರಾದ ರಾಜಗೋಪಾಲಗೌಡ ಮತ್ತು ವಿ.ಎಸ್. ಪ್ರಕಾಶ್ ಆರೋಪಿಸಿದರು. <br /> <br /> ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ನಡೆದ ದಿಬ್ಬಣದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟಾಚಲಪತಿ ಹೇಳಿದರು.<br /> <br /> ಉಪವಿಭಾಗಾಧಿಕಾರಿ ಪೆದ್ದಪ್ಪಯ್ಯ, ತಹಶೀಲ್ದಾರ್ ಮಂಗಳಾ, ಪೌರಾಯುಕ್ತ ಬಾಲಚಂದ್ರ, ಡಿವೈಎಸ್ಪಿ, ಎಂ.ವಿ.ಶೇಷನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>