<p><strong>ವಿಜಾಪುರ: </strong>ಇಲ್ಲಿಯ ಜೋರಾಪುರ ಪೇಟೆ ಬಣಗಾರ ಗಲ್ಲಿಯ ಹಿರೇಮಠ ಹಾಗೂ ಜಮಖಂಡಿ ತಾಲ್ಲೂಕು ಹುಲ್ಯಾಳ ಯೋಗಾಶ್ರಮದ ನೂತನ ಪೀಠಾಧಿಕಾರಿ ಡಾ.ರೇಣುಕ ಸದಾಶಿವ ಶಿವಾಚಾರ್ಯ ಅವರ ಪಟ್ಟಾಧಿಕಾರ ಮಹೋತ್ಸವ ಗುರುವಾರ ಇಲ್ಲಿ ನಡೆಯಿತು.<br /> <br /> ಈ ಮಠಗಳ ಹಿರಿಯ ಸ್ವಾಮೀಜಿ ವಿದ್ಯಾನಂದ ಶಿವಾಚಾರ್ಯ ಸಮ್ಮುಖದಲ್ಲಿ ರಂಭಾಪುರಿ ಜಗದ್ಗುರುಗಳು ನೂತನ ಪೀಠಾಧಿಕಾರಿಗೆ ಪಟ್ಟಾಧಿಕಾರ ನೆರವೇರಿಸಿದರು.<br /> <br /> ನಂತರ ನಡೆದ ಧರ್ಮ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ರಂಭಾಪುರಿ ಜಗದ್ಗುರುಗಳು, ‘ಜೋರಾಪುರ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠ. ವಿದ್ಯಾನಂದ ಶಿವಾಚಾರ್ಯ ಸ್ವಾಮೀಜಿ ಸಶಕ್ತರಾಗಿರುವಾಗಲೇ ರೇಣುಕ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಅಧಿಕಾರ ವಹಿಸಿದ್ದು ಹೆಮ್ಮೆಯ ಸಂಗತಿ. ನೂತನ ಶ್ರೀಗಳು ಈ ಭಾಗದ ಭಕ್ತ ಸಮುದಾಯಕ್ಕೆ ಧರ್ಮದ ಬೆಳಕು ಬೀರಲಿ’ ಎಂದು ಆಶೀರ್ವದಿಸಿದರು.<br /> <br /> ‘ಧರ್ಮ ಯಾವುದೇ ಇರಲಿ. ಸಮಾಜದಲ್ಲಿ ಸಾಮರಸ್ಯ ಸದ್ಭಾವನೆಗಳನ್ನು ಬೆಳೆಸಬೇಕು. ಧರ್ಮ, ಜಾತಿ, ಭಾಷೆ ಮತ್ತು ಪ್ರಾಂತದ ಹೆಸರಿನಲ್ಲಿ ಜನಾಂಗವನ್ನು ಯಾರೂ ವಿಂಗಡಿಸಬಾರದು’ ಎಂದು ಸಲಹೆ ನೀಡಿದರು.<br /> <br /> ಬಂಕಾಪುರದ ರೇವಣಸಿದ್ಧೇಶ್ವರ ಶಿವಾಚಾರ್ಯರು, ಕಲಾದಗಿ ಚಂದ್ರಶೇಖರ ಶಿವಾಚಾರ್ಯರು, ಎಮ್ಮಿಗನೂರು ವಾಮದೇವ ಮಹಾಂತ ಶಿವಾಚಾರ್ಯರು, ಹರನಾಳದ ಮಹಾಂತೇಶ್ವರ ಶಿವಾಚಾರ್ಯರು ಮಾತನಾಡಿದರು. ವಿದ್ಯಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ನಂತರ ನೂತನ ಶ್ರೀಗಳ ಪಲ್ಲಕ್ಕಿ ಮಹೋತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>ಇಲ್ಲಿಯ ಜೋರಾಪುರ ಪೇಟೆ ಬಣಗಾರ ಗಲ್ಲಿಯ ಹಿರೇಮಠ ಹಾಗೂ ಜಮಖಂಡಿ ತಾಲ್ಲೂಕು ಹುಲ್ಯಾಳ ಯೋಗಾಶ್ರಮದ ನೂತನ ಪೀಠಾಧಿಕಾರಿ ಡಾ.ರೇಣುಕ ಸದಾಶಿವ ಶಿವಾಚಾರ್ಯ ಅವರ ಪಟ್ಟಾಧಿಕಾರ ಮಹೋತ್ಸವ ಗುರುವಾರ ಇಲ್ಲಿ ನಡೆಯಿತು.<br /> <br /> ಈ ಮಠಗಳ ಹಿರಿಯ ಸ್ವಾಮೀಜಿ ವಿದ್ಯಾನಂದ ಶಿವಾಚಾರ್ಯ ಸಮ್ಮುಖದಲ್ಲಿ ರಂಭಾಪುರಿ ಜಗದ್ಗುರುಗಳು ನೂತನ ಪೀಠಾಧಿಕಾರಿಗೆ ಪಟ್ಟಾಧಿಕಾರ ನೆರವೇರಿಸಿದರು.<br /> <br /> ನಂತರ ನಡೆದ ಧರ್ಮ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ರಂಭಾಪುರಿ ಜಗದ್ಗುರುಗಳು, ‘ಜೋರಾಪುರ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠ. ವಿದ್ಯಾನಂದ ಶಿವಾಚಾರ್ಯ ಸ್ವಾಮೀಜಿ ಸಶಕ್ತರಾಗಿರುವಾಗಲೇ ರೇಣುಕ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಅಧಿಕಾರ ವಹಿಸಿದ್ದು ಹೆಮ್ಮೆಯ ಸಂಗತಿ. ನೂತನ ಶ್ರೀಗಳು ಈ ಭಾಗದ ಭಕ್ತ ಸಮುದಾಯಕ್ಕೆ ಧರ್ಮದ ಬೆಳಕು ಬೀರಲಿ’ ಎಂದು ಆಶೀರ್ವದಿಸಿದರು.<br /> <br /> ‘ಧರ್ಮ ಯಾವುದೇ ಇರಲಿ. ಸಮಾಜದಲ್ಲಿ ಸಾಮರಸ್ಯ ಸದ್ಭಾವನೆಗಳನ್ನು ಬೆಳೆಸಬೇಕು. ಧರ್ಮ, ಜಾತಿ, ಭಾಷೆ ಮತ್ತು ಪ್ರಾಂತದ ಹೆಸರಿನಲ್ಲಿ ಜನಾಂಗವನ್ನು ಯಾರೂ ವಿಂಗಡಿಸಬಾರದು’ ಎಂದು ಸಲಹೆ ನೀಡಿದರು.<br /> <br /> ಬಂಕಾಪುರದ ರೇವಣಸಿದ್ಧೇಶ್ವರ ಶಿವಾಚಾರ್ಯರು, ಕಲಾದಗಿ ಚಂದ್ರಶೇಖರ ಶಿವಾಚಾರ್ಯರು, ಎಮ್ಮಿಗನೂರು ವಾಮದೇವ ಮಹಾಂತ ಶಿವಾಚಾರ್ಯರು, ಹರನಾಳದ ಮಹಾಂತೇಶ್ವರ ಶಿವಾಚಾರ್ಯರು ಮಾತನಾಡಿದರು. ವಿದ್ಯಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ನಂತರ ನೂತನ ಶ್ರೀಗಳ ಪಲ್ಲಕ್ಕಿ ಮಹೋತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>