<p><strong>ಮದ್ದೂರು:</strong> ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆ-ಶೀಪ್) ಯೋಜನೆಯಡಿಯಲ್ಲಿ ತುಮಕೂರು ಹೆದ್ದಾರಿ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳನ್ನು ಕಡಿದು ಹಾಕಿರುವ ಘಟನೆ ಸಮೀಪದ ಹೆಮ್ಮನಹಳ್ಳಿ ರಸ್ತೆಯಲ್ಲಿ ನಿರಂತರ ನಡೆಯುತ್ತಿದೆ. <br /> <br /> ಕಳೆದ ಒಂದು ವಾರದಿಂದ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, ಈ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಎದುರಿನಲ್ಲೇ 5 ಬೃಹತ್ ಮರಗಳನ್ನು ಕಡಿದು ಧರೆಗೆ ಉರುಳಿಸಲಾಗಿದೆ. ಇದಕ್ಕೂ ಮುನ್ನ ಮಳವಳ್ಳಿ ರಸ್ತೆಯಲ್ಲಿ ಇದೇ ಹೆದ್ದಾರಿ ಅಗಲೀಕರಣ ಸಂಬಂಧ 200ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಿಸಿರುವುದು ಪಟ್ಟಣದ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. <br /> <br /> ಆಗ್ರಹ: ಟೆಂಡರ್ ಮೂಲಕ ನೂರಾರು ಮರಗಳನ್ನು ಕಡಿಯ ಲಾಗಿದ್ದು, ಕಡಿದ ಸ್ಥಳದಲ್ಲಿ ಈ ಕೂಡಲೇ ಅರಣ್ಯ ಇಲಾಖೆ ಹೊಸದಾಗಿ ಗಿಡ ನೆಡುವ ಕೆಲಸಕ್ಕೆ ಮುಂದಾಗ ಬೇಕು. ಅಲ್ಲದೇ ಸರ್ಕಾರೇತರ ಸ್ವಯಂ ಸೇವಾ ಸಂಘಟನೆಗಳ ನೆರವಿನೊಂದಿಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಲಾರಾ ಪ್ರಸನ್ನ ಆಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆ-ಶೀಪ್) ಯೋಜನೆಯಡಿಯಲ್ಲಿ ತುಮಕೂರು ಹೆದ್ದಾರಿ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳನ್ನು ಕಡಿದು ಹಾಕಿರುವ ಘಟನೆ ಸಮೀಪದ ಹೆಮ್ಮನಹಳ್ಳಿ ರಸ್ತೆಯಲ್ಲಿ ನಿರಂತರ ನಡೆಯುತ್ತಿದೆ. <br /> <br /> ಕಳೆದ ಒಂದು ವಾರದಿಂದ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, ಈ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಎದುರಿನಲ್ಲೇ 5 ಬೃಹತ್ ಮರಗಳನ್ನು ಕಡಿದು ಧರೆಗೆ ಉರುಳಿಸಲಾಗಿದೆ. ಇದಕ್ಕೂ ಮುನ್ನ ಮಳವಳ್ಳಿ ರಸ್ತೆಯಲ್ಲಿ ಇದೇ ಹೆದ್ದಾರಿ ಅಗಲೀಕರಣ ಸಂಬಂಧ 200ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಿಸಿರುವುದು ಪಟ್ಟಣದ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. <br /> <br /> ಆಗ್ರಹ: ಟೆಂಡರ್ ಮೂಲಕ ನೂರಾರು ಮರಗಳನ್ನು ಕಡಿಯ ಲಾಗಿದ್ದು, ಕಡಿದ ಸ್ಥಳದಲ್ಲಿ ಈ ಕೂಡಲೇ ಅರಣ್ಯ ಇಲಾಖೆ ಹೊಸದಾಗಿ ಗಿಡ ನೆಡುವ ಕೆಲಸಕ್ಕೆ ಮುಂದಾಗ ಬೇಕು. ಅಲ್ಲದೇ ಸರ್ಕಾರೇತರ ಸ್ವಯಂ ಸೇವಾ ಸಂಘಟನೆಗಳ ನೆರವಿನೊಂದಿಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಲಾರಾ ಪ್ರಸನ್ನ ಆಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>