<p><span style="font-size: 26px;"><strong>ಬೆಂಗಳೂರು:</strong> ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದಿಂದ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆ ಕಡೆಗೆ ಡಿ.ವಿ.ಜಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.</span><br /> <br /> ಸೋಮವಾರದಿಂದ (ಜೂ.24) ಆದೇಶ ಜಾರಿಗೆ ಬರಲಿದೆ. ಈವರೆಗೆ ಡಿ.ವಿ.ಜಿ ರಸ್ತೆ ಹಾಗೂ ಸುಬ್ಬರಾಮಚೆಟ್ಟಿ ರಸ್ತೆಗಳು ಕೂಡುವ ನೆಟ್ಟಕಲ್ಲಪ್ಪ ವೃತ್ತದಲ್ಲಿ ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿತ್ತು. ನೆಟ್ಟಕಲ್ಲಪ್ಪ ವೃತ್ತದಿಂದ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆ ಕಡೆಗೆ ಡಿ.ವಿ.ಜಿ ರಸ್ತೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿತ್ತು.<br /> <br /> ಆದರೆ, ನೆಟ್ಟಕಲ್ಲಪ್ಪ ವೃತ್ತದಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ ಈ ಮಾರ್ಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸುವಂತೆ ಸ್ಥಳೀಯರು ಮನವಿ ಸಲ್ಲಿಸಿದ್ದರು. ಹೀಗಾಗಿ ಡಿ.ವಿ.ಜಿ ರಸ್ತೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆಯ ಮಾರ್ಗವಾಗಿ ಎರಡೂ ಕಡೆಗಳಿಂದ ನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಬರುವ ವಾಹನಗಳಿಗೆ ಡಿ.ವಿ.ಜಿ ಜಂಕ್ಷನ್ನಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಡಿ.ವಿ.ಜಿ ರಸ್ತೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆಗಳಿಂದ ನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಹೋಗುವ ವಾಹನಗಳು ಪುಟ್ಟಣ್ಣ ರಸ್ತೆ ಅಥವಾ ಈಸ್ಟ್ ಆಂಜನೇಯ ಟೆಂಪಲ್ ಸ್ಟ್ರೀಟ್ ಮೂಲಕ ನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಸಾಗಬಹುದು.<br /> <br /> ನೆಟ್ಟಕಲ್ಲಪ್ಪ ವೃತ್ತದಿಂದ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆಯ ಕಡೆಗೆ ಸಾಗುವ ವಾಹನಗಳು ಎಂದಿನಂತೆ ಸಂಚರಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಬೆಂಗಳೂರು:</strong> ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದಿಂದ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆ ಕಡೆಗೆ ಡಿ.ವಿ.ಜಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.</span><br /> <br /> ಸೋಮವಾರದಿಂದ (ಜೂ.24) ಆದೇಶ ಜಾರಿಗೆ ಬರಲಿದೆ. ಈವರೆಗೆ ಡಿ.ವಿ.ಜಿ ರಸ್ತೆ ಹಾಗೂ ಸುಬ್ಬರಾಮಚೆಟ್ಟಿ ರಸ್ತೆಗಳು ಕೂಡುವ ನೆಟ್ಟಕಲ್ಲಪ್ಪ ವೃತ್ತದಲ್ಲಿ ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿತ್ತು. ನೆಟ್ಟಕಲ್ಲಪ್ಪ ವೃತ್ತದಿಂದ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆ ಕಡೆಗೆ ಡಿ.ವಿ.ಜಿ ರಸ್ತೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿತ್ತು.<br /> <br /> ಆದರೆ, ನೆಟ್ಟಕಲ್ಲಪ್ಪ ವೃತ್ತದಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ ಈ ಮಾರ್ಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸುವಂತೆ ಸ್ಥಳೀಯರು ಮನವಿ ಸಲ್ಲಿಸಿದ್ದರು. ಹೀಗಾಗಿ ಡಿ.ವಿ.ಜಿ ರಸ್ತೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆಯ ಮಾರ್ಗವಾಗಿ ಎರಡೂ ಕಡೆಗಳಿಂದ ನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಬರುವ ವಾಹನಗಳಿಗೆ ಡಿ.ವಿ.ಜಿ ಜಂಕ್ಷನ್ನಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಡಿ.ವಿ.ಜಿ ರಸ್ತೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆಗಳಿಂದ ನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಹೋಗುವ ವಾಹನಗಳು ಪುಟ್ಟಣ್ಣ ರಸ್ತೆ ಅಥವಾ ಈಸ್ಟ್ ಆಂಜನೇಯ ಟೆಂಪಲ್ ಸ್ಟ್ರೀಟ್ ಮೂಲಕ ನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಸಾಗಬಹುದು.<br /> <br /> ನೆಟ್ಟಕಲ್ಲಪ್ಪ ವೃತ್ತದಿಂದ ಮಲ್ಲಿಕಾರ್ಜುನ ದೇವಸ್ಥಾನ ರಸ್ತೆಯ ಕಡೆಗೆ ಸಾಗುವ ವಾಹನಗಳು ಎಂದಿನಂತೆ ಸಂಚರಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>