<p>ಹೊಸದುರ್ಗ: ಪ್ರತಿಯೊಬ್ಬ ವ್ಯಕ್ತಿ ನೆಮ್ಮದಿಯಾಗಿ ಜೀವಿಸಲು ಮಾನವ ಹಕ್ಕುಗಳು ಸಹಕಾರಿಯಾಗುತ್ತವೆ ಎಂದು ಪಟ್ಟಣದ ಜೆಎಂಎಫ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ವೇಣುಗೋಪಾಲ್ ತಿಳಿಸಿದರು.<br /> <br /> ಮಂಗಳವಾರ ಪಟ್ಟಣದ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕೆಲವರು ವಿವಿಧ ಹಕ್ಕುಗಳಿಂದ ವಂಚಿತರಾಗಿ, ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಂಡು ಬದುಕುತ್ತಿದ್ದಾರೆ. ಈ ಬಗ್ಗೆ ಸಂವಿಧಾನದ ಜವಾಬ್ದಾರಿಗಳನ್ನು ನಿಭಾಯಿಸುವವರು ಕಾಳಜಿ ವಹಿಸಬೇಕಿದೆ. ಹಕ್ಕುಗಳಿಗೆ ಚ್ಯುತಿ ತರುವಂತವರನ್ನು ಸರಿದಾರಿಗೆ ತರಬೇಕಾದರೆ ನ್ಯಾಯಾಲಯದ ವತಿಯಿಂದ ನಡೆಯುವ ವಿವಿಧ ಕಾನೂನು ಅರಿವು ಕಾರ್ಯಕ್ರಮಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.<br /> <br /> ಹಿರಿಯ ವಕೀಲ ಪಾಲನೇತ್ರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಸಂಗಪ್ಪ ದರಗದ, ವಕೀಲರಾದ ಗುರುಬಸಪ್ಪ, ಷಡಾಕ್ಷರಪ್ಪ, ಬಸವರಾಜು, ಜಗದೀಶ್ನಾಯ್ಕ್, ರುಕ್ಮಿಣಿ, ಕೆ.ಮಲ್ಲಿಕಾರ್ಜುನಪ್ಪ, ಡಿ.ನಿರಂಜನ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ಪ್ರತಿಯೊಬ್ಬ ವ್ಯಕ್ತಿ ನೆಮ್ಮದಿಯಾಗಿ ಜೀವಿಸಲು ಮಾನವ ಹಕ್ಕುಗಳು ಸಹಕಾರಿಯಾಗುತ್ತವೆ ಎಂದು ಪಟ್ಟಣದ ಜೆಎಂಎಫ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ವೇಣುಗೋಪಾಲ್ ತಿಳಿಸಿದರು.<br /> <br /> ಮಂಗಳವಾರ ಪಟ್ಟಣದ ಸಿವಿಲ್ ನ್ಯಾಯಾಲಯದ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕೆಲವರು ವಿವಿಧ ಹಕ್ಕುಗಳಿಂದ ವಂಚಿತರಾಗಿ, ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಂಡು ಬದುಕುತ್ತಿದ್ದಾರೆ. ಈ ಬಗ್ಗೆ ಸಂವಿಧಾನದ ಜವಾಬ್ದಾರಿಗಳನ್ನು ನಿಭಾಯಿಸುವವರು ಕಾಳಜಿ ವಹಿಸಬೇಕಿದೆ. ಹಕ್ಕುಗಳಿಗೆ ಚ್ಯುತಿ ತರುವಂತವರನ್ನು ಸರಿದಾರಿಗೆ ತರಬೇಕಾದರೆ ನ್ಯಾಯಾಲಯದ ವತಿಯಿಂದ ನಡೆಯುವ ವಿವಿಧ ಕಾನೂನು ಅರಿವು ಕಾರ್ಯಕ್ರಮಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.<br /> <br /> ಹಿರಿಯ ವಕೀಲ ಪಾಲನೇತ್ರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಸಂಗಪ್ಪ ದರಗದ, ವಕೀಲರಾದ ಗುರುಬಸಪ್ಪ, ಷಡಾಕ್ಷರಪ್ಪ, ಬಸವರಾಜು, ಜಗದೀಶ್ನಾಯ್ಕ್, ರುಕ್ಮಿಣಿ, ಕೆ.ಮಲ್ಲಿಕಾರ್ಜುನಪ್ಪ, ಡಿ.ನಿರಂಜನ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>