<p>ಕುಶಾಲನಗರ: ಪಟ್ಟಣದ ನಾಡಕಚೇರಿ ಬಳಿಯಿರುವ ನೆಮ್ಮದಿ ಕೇಂದ್ರದಲ್ಲಿ ವಿವಿಧ ದೃಢೀಕರಣ ಪತ್ರಗಳಿಗೆ ಅರ್ಜಿ ಪಡೆಯಲು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಇಲ್ಲಿನ ಸಿಬ್ಬಂದಿಯನ್ನು ಸಾರ್ವಜನಿಕರು ಗುರುವಾರ ತರಾಟೆಗೆ ತೆಗೆದುಕೊಂಡರು.<br /> <br /> ನಾಲ್ಕೈದು ದಿನಗಳಿಂದ ನೆಮ್ಮದಿ ಕೇಂದ್ರದಲ್ಲಿ ಕಂಪ್ಯೂಟರ್ ತೊಂದರೆ, ಕಾಟ್ರೇಜ್ ತೊಂದರೆ ಎಂದು ನೆಪ ಹೇಳುತ್ತಿರುವ ಸಿಬ್ಬಂದಿ, ದೂರದ ಊರುಗಳಿಂದ ಬರುವ ಜನರನ್ನು ನಿತ್ಯ ಅಲೆದಾಡುವಂತೆ ಮಾಡುತ್ತಿದ್ದಾರೆ ಎಂದು ಜನರು ದೂರಿದರು.<br /> <br /> ಈ ವೇಳೆ ಮಾತನಾಡಿದ ರಾಜ್ಯ ಆದಿಜಾಂಭವ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್ರಾಜ್ದಾಸ್, ಇದು ಒಂದು ವಾರದಿಂದಷ್ಟೇ ಉದ್ಭವಿಸಿರುವ ಸಮಸ್ಯೆ ಅಲ್ಲ. ಪ್ರತಿ ತಿಂಗಳ ಕೊನೆ ಮತ್ತು ಆರಂಭದಲ್ಲಿ ಈ ಸಮಸ್ಯೆ ಇದ್ದೇ ಇರುತ್ತದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು.<br /> <br /> ಹೋಬಳಿಯ ಯಾವುದೋ ಮೂಲೆಯಿಂದ ಇಲ್ಲಿಗೆ ನಿತ್ಯ ನೂರಾರು ಜನರು ವಿವಿಧ ಅರ್ಜಿಗಳನ್ನು ಹಿಡಿದು ವಿವಿಧ ಕೆಲಸಗಳಿಗಾಗಿ ಬರುತ್ತಾರೆ. ಆದರೆ, ಚಿಕ್ಕಪುಟ್ಟ ಸಮಸ್ಯೆಗಳನ್ನೇ ಮುಖ್ಯವಾಗಿಸಿಕೊಂಡು ಜನರು ವಾರಗಟ್ಟಲೇ ನೆಮ್ಮದಿ ಕೇಂದ್ರಗಳಿಗೆ ನೆಮ್ಮದಿಯಿಲ್ಲದೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.<br /> <br /> ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ನಾಡಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗೋವಿಂದ್ರಾಜ್ದಾಸ್ ತಿಳಿಸಿದರು.<br /> <br /> ಯುವಜನರ ಪರ ಚಿಂತನಾ ವೇದಿಕೆ ಅಧ್ಯಕ್ಷ ನಾರಾಯಣ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸರಳ ರಮಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಪಟ್ಟಣದ ನಾಡಕಚೇರಿ ಬಳಿಯಿರುವ ನೆಮ್ಮದಿ ಕೇಂದ್ರದಲ್ಲಿ ವಿವಿಧ ದೃಢೀಕರಣ ಪತ್ರಗಳಿಗೆ ಅರ್ಜಿ ಪಡೆಯಲು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಇಲ್ಲಿನ ಸಿಬ್ಬಂದಿಯನ್ನು ಸಾರ್ವಜನಿಕರು ಗುರುವಾರ ತರಾಟೆಗೆ ತೆಗೆದುಕೊಂಡರು.<br /> <br /> ನಾಲ್ಕೈದು ದಿನಗಳಿಂದ ನೆಮ್ಮದಿ ಕೇಂದ್ರದಲ್ಲಿ ಕಂಪ್ಯೂಟರ್ ತೊಂದರೆ, ಕಾಟ್ರೇಜ್ ತೊಂದರೆ ಎಂದು ನೆಪ ಹೇಳುತ್ತಿರುವ ಸಿಬ್ಬಂದಿ, ದೂರದ ಊರುಗಳಿಂದ ಬರುವ ಜನರನ್ನು ನಿತ್ಯ ಅಲೆದಾಡುವಂತೆ ಮಾಡುತ್ತಿದ್ದಾರೆ ಎಂದು ಜನರು ದೂರಿದರು.<br /> <br /> ಈ ವೇಳೆ ಮಾತನಾಡಿದ ರಾಜ್ಯ ಆದಿಜಾಂಭವ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್ರಾಜ್ದಾಸ್, ಇದು ಒಂದು ವಾರದಿಂದಷ್ಟೇ ಉದ್ಭವಿಸಿರುವ ಸಮಸ್ಯೆ ಅಲ್ಲ. ಪ್ರತಿ ತಿಂಗಳ ಕೊನೆ ಮತ್ತು ಆರಂಭದಲ್ಲಿ ಈ ಸಮಸ್ಯೆ ಇದ್ದೇ ಇರುತ್ತದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು.<br /> <br /> ಹೋಬಳಿಯ ಯಾವುದೋ ಮೂಲೆಯಿಂದ ಇಲ್ಲಿಗೆ ನಿತ್ಯ ನೂರಾರು ಜನರು ವಿವಿಧ ಅರ್ಜಿಗಳನ್ನು ಹಿಡಿದು ವಿವಿಧ ಕೆಲಸಗಳಿಗಾಗಿ ಬರುತ್ತಾರೆ. ಆದರೆ, ಚಿಕ್ಕಪುಟ್ಟ ಸಮಸ್ಯೆಗಳನ್ನೇ ಮುಖ್ಯವಾಗಿಸಿಕೊಂಡು ಜನರು ವಾರಗಟ್ಟಲೇ ನೆಮ್ಮದಿ ಕೇಂದ್ರಗಳಿಗೆ ನೆಮ್ಮದಿಯಿಲ್ಲದೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.<br /> <br /> ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ನಾಡಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗೋವಿಂದ್ರಾಜ್ದಾಸ್ ತಿಳಿಸಿದರು.<br /> <br /> ಯುವಜನರ ಪರ ಚಿಂತನಾ ವೇದಿಕೆ ಅಧ್ಯಕ್ಷ ನಾರಾಯಣ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸರಳ ರಮಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>