<p><strong>ಸಿದ್ದಾಪುರ:</strong> ಪಟ್ಟಣದ ನೆಮ್ಮದಿ ಕೇಂದ್ರವನ್ನು ತಾಲ್ಲೂಕು ಕಚೇರಿಯ ಸಮೀಪಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸ್ಥಳೀಯ ತಹಸೀಲ್ದಾರ ಕಾರ್ಯಾಲಯದ ಎದುರು ಧರಣಿ ನಡೆಸಿದರು.<br /> <br /> `ಪಟ್ಟಣದ ನೆಮ್ಮದಿ ಕೇಂದ್ರವನ್ನು ಸ್ಥಳಾಂತರ ಮಾಡುವಂತೆ ಕೋರಿ ಈ ಹಿಂದೆ ಮನವಿ ನೀಡ ಲಾಗಿತ್ತು. ಆದರೆ ಆ ಮನವಿಗೆ ಯಾವುದೇ ಸ್ಪಂದನೆ ಸಿಗಲಿಲ್ಲ. ಆದ್ದರಿಂದ ಈಗ ಪ್ರತಿಭಟನೆ ಅನಿವಾರ್ಯ ಎಂದು ಪ್ರತಿಭಟನಾಕಾರರು ಹೇಳಿದರು.<br /> <br /> ಇನ್ನು ಮುಂದೆಯೂ ಬೇಡಿಕೆ ಈಡೇರದೇ ಇದ್ದರೆ ನೆಮ್ಮದಿ ಕೇಂದ್ರಕ್ಕೆ ಬೀಗ ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.<br /> <br /> ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯ ದಲ್ಲಿ ನಡೆದ ಪ್ರತಿಭಟನೆಯಲ್ಲಿ ಘಟಕದ ಅಧ್ಯಕ್ಷ ಕೆ.ಜಿ.ನಾಗರಾಜ, ಜಿ.ಪಂ.ಸದಸ್ಯ ಈಶ್ವರ ನಾಯ್ಕ, ತಾ.ಪಂ.ಸದಸ್ಯ ವಸಂತ ನಾಯ್ಕ, ತಾ.ಪಂ.ಮಾಜಿ ಸದಸ್ಯ ಸಿ.ಆರ್.ನಾಯ್ಕ, ಗ್ರಾ.ಪಂ.ಸದಸ್ಯ ರಾಜು ಕಟ್ಟೆಮನೆ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಪಟ್ಟಣದ ನೆಮ್ಮದಿ ಕೇಂದ್ರವನ್ನು ತಾಲ್ಲೂಕು ಕಚೇರಿಯ ಸಮೀಪಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸ್ಥಳೀಯ ತಹಸೀಲ್ದಾರ ಕಾರ್ಯಾಲಯದ ಎದುರು ಧರಣಿ ನಡೆಸಿದರು.<br /> <br /> `ಪಟ್ಟಣದ ನೆಮ್ಮದಿ ಕೇಂದ್ರವನ್ನು ಸ್ಥಳಾಂತರ ಮಾಡುವಂತೆ ಕೋರಿ ಈ ಹಿಂದೆ ಮನವಿ ನೀಡ ಲಾಗಿತ್ತು. ಆದರೆ ಆ ಮನವಿಗೆ ಯಾವುದೇ ಸ್ಪಂದನೆ ಸಿಗಲಿಲ್ಲ. ಆದ್ದರಿಂದ ಈಗ ಪ್ರತಿಭಟನೆ ಅನಿವಾರ್ಯ ಎಂದು ಪ್ರತಿಭಟನಾಕಾರರು ಹೇಳಿದರು.<br /> <br /> ಇನ್ನು ಮುಂದೆಯೂ ಬೇಡಿಕೆ ಈಡೇರದೇ ಇದ್ದರೆ ನೆಮ್ಮದಿ ಕೇಂದ್ರಕ್ಕೆ ಬೀಗ ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.<br /> <br /> ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯ ದಲ್ಲಿ ನಡೆದ ಪ್ರತಿಭಟನೆಯಲ್ಲಿ ಘಟಕದ ಅಧ್ಯಕ್ಷ ಕೆ.ಜಿ.ನಾಗರಾಜ, ಜಿ.ಪಂ.ಸದಸ್ಯ ಈಶ್ವರ ನಾಯ್ಕ, ತಾ.ಪಂ.ಸದಸ್ಯ ವಸಂತ ನಾಯ್ಕ, ತಾ.ಪಂ.ಮಾಜಿ ಸದಸ್ಯ ಸಿ.ಆರ್.ನಾಯ್ಕ, ಗ್ರಾ.ಪಂ.ಸದಸ್ಯ ರಾಜು ಕಟ್ಟೆಮನೆ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>