<p>ಕುಶಾಲನಗರ: ‘ಮಾನವನ ಬಳಿ ಕೋಟಿ ಸಂಪತ್ತು ಇದ್ದರೂ ನೆಮ್ಮದಿ ಇಲ್ಲದಿದ್ದರೆ ಅಂತಹ ಸಂಪತ್ತು ವ್ಯರ್ಥ’ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.<br /> <br /> ಎಸ್ಎಲ್ಎನ್ ಸಂಸ್ಥೆ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ₨ 5 ಲಕ್ಷ ವೆಚ್ಚದಲ್ಲಿ ನವೀಕರಣಗೊಂಡಿರುವ ಪಟ್ಟಣದ ರಾಧಾಕೃಷ್ಣ ಬಡಾವಣೆಯ ಶಾಂತಿ ಉದ್ಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಾನವ ಎಷ್ಟೇ ಸಂಪತ್ತನ್ನು ಗಳಿಸಿದ್ದರೂ ಅದನ್ನು ಸಮಾಜದ ಒಳಿತಿಗಾಗಿ ಸದ್ವಿನಿಯೋಗಿಸದಿದ್ದರೆ ಅಂತಹ ಸಂಪತ್ತು ವ್ಯರ್ಥವಾಗುತ್ತದೆ ಎಂದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಇಂದು ನಗರಗಳು ಕಲುಷಿತಗೊಳ್ಳುತ್ತಿದ್ದು, ಉತ್ತಮ ಗಾಳಿಯೇ ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭಗಳಲ್ಲಿ ಉದ್ಯಾನಗಳು ಅತ್ಯಗತ್ಯ ಎಂದರು.<br /> <br /> ಇದೇ ಸಂದರ್ಭ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮೈಸೂರು ಉಪವಲಯ ನಿರ್ದೇಶಕಿ ಲಕ್ಷ್ಮೀಜಿ ಅವರಿಂದ ಶಾಂತಿ– ಸಹಬಾಳ್ವೆ ಕುರಿತು ಪ್ರವಚನ ನಡೆಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಮಾತನಾಡಿದರು.<br /> ಕಾರ್ಯಕ್ರಮದಲ್ಲಿ ಎಸ್.ಎಲ್ಎನ್ ಸಂಸ್ಥೆ ಸಹೋದರರಾದ ವಿಶ್ವನಾಥ್ ಮತ್ತು ಸಾಥಪ್ಪನ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರವಣಕುಮಾರ್, ಕುಶಾಲನಗರ ಈಶ್ವರೀಯ ವಿಶ್ವವಿದ್ಯಾಲಯದ ಧನಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ‘ಮಾನವನ ಬಳಿ ಕೋಟಿ ಸಂಪತ್ತು ಇದ್ದರೂ ನೆಮ್ಮದಿ ಇಲ್ಲದಿದ್ದರೆ ಅಂತಹ ಸಂಪತ್ತು ವ್ಯರ್ಥ’ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.<br /> <br /> ಎಸ್ಎಲ್ಎನ್ ಸಂಸ್ಥೆ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ₨ 5 ಲಕ್ಷ ವೆಚ್ಚದಲ್ಲಿ ನವೀಕರಣಗೊಂಡಿರುವ ಪಟ್ಟಣದ ರಾಧಾಕೃಷ್ಣ ಬಡಾವಣೆಯ ಶಾಂತಿ ಉದ್ಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಾನವ ಎಷ್ಟೇ ಸಂಪತ್ತನ್ನು ಗಳಿಸಿದ್ದರೂ ಅದನ್ನು ಸಮಾಜದ ಒಳಿತಿಗಾಗಿ ಸದ್ವಿನಿಯೋಗಿಸದಿದ್ದರೆ ಅಂತಹ ಸಂಪತ್ತು ವ್ಯರ್ಥವಾಗುತ್ತದೆ ಎಂದರು.<br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಇಂದು ನಗರಗಳು ಕಲುಷಿತಗೊಳ್ಳುತ್ತಿದ್ದು, ಉತ್ತಮ ಗಾಳಿಯೇ ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭಗಳಲ್ಲಿ ಉದ್ಯಾನಗಳು ಅತ್ಯಗತ್ಯ ಎಂದರು.<br /> <br /> ಇದೇ ಸಂದರ್ಭ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮೈಸೂರು ಉಪವಲಯ ನಿರ್ದೇಶಕಿ ಲಕ್ಷ್ಮೀಜಿ ಅವರಿಂದ ಶಾಂತಿ– ಸಹಬಾಳ್ವೆ ಕುರಿತು ಪ್ರವಚನ ನಡೆಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಮಾತನಾಡಿದರು.<br /> ಕಾರ್ಯಕ್ರಮದಲ್ಲಿ ಎಸ್.ಎಲ್ಎನ್ ಸಂಸ್ಥೆ ಸಹೋದರರಾದ ವಿಶ್ವನಾಥ್ ಮತ್ತು ಸಾಥಪ್ಪನ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರವಣಕುಮಾರ್, ಕುಶಾಲನಗರ ಈಶ್ವರೀಯ ವಿಶ್ವವಿದ್ಯಾಲಯದ ಧನಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>