<p><strong>ಯಾದಗಿರಿ: </strong>ನೆಮ್ಮದಿ ಕೇಂದ್ರಗಳಲ್ಲಿನ 1,600 ಗ್ರಾಮೀಣ ಕಂಪ್ಯೂಟರ್ ಆಪರೇಟರ್ಗಳ ಪರವಾಗಿ ಕೆಲಸ ಮಾಡುತ್ತಿರುವ ನೌಕರರನ್ನೇ ನೆಮ್ಮದಿ ಕೇಂದ್ರಗಳಲ್ಲಿ ಡಾಟಾ ಆಪರೇಟರ್ಗಳಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ನೆಮ್ಮದಿ ಕೇಂದ್ರಗಳ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. <br /> <br /> ಕರ್ನಾಟಕ ರಾಜ್ಯವು ನೆಮ್ಮದಿ ಕೇಂದ್ರಗಳ ಮೂಲಕ ಸರ್ಕಾರದ ಸೇವೆಯನ್ನು ಗ್ರಾಮೀಣ ಜನತೆಯ ಬಾಗಿಲಿಗೆ ತಲುಪುವಂತೆ ಮಾಡಿದ್ದು, ರಾಷ್ಟ್ರದಲ್ಲೆ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನೆಮ್ಮದಿ ಯೋಜನೆಯು ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ ನಡೆಸಲಾಗಿದ್ದು, ಈ ಕಾರ್ಯನಿರ್ವಣೆಗಾಗಿ ನೇಮಿಸಿಕೊಳ್ಳಲಾಗಿದ 1,600 ಕಂಪ್ಯೂಟರ್ ಆಪರೇಟರ್ಗಳು, ಈ ಸೇವೆಯ ಜನಪ್ರಿಯತೆ ಹಾಗೂ ಯಶಸ್ಸಿಗೆ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. <br /> <br /> ಆದರೆ ಏಕಾಏಕಿ ಅವರನ್ನು ಸೇವೆಯಿಂದ ತೆಗೆದರೆ ಕುಟುಂಬಗಳು ಬೀದಿ ಪಾಲಾಗಲಿವೆ. ಕೂಡಲೆ ನೆಮ್ಮದಿ ಕೇಂದ್ರಗಳಲ್ಲಿನ ಕಂಪ್ಯೂಟರ್ ಆಪರೇಟರ್ಗಳನ್ನು ಡಾಟಾ ಎಂಟ್ರಿ ಆಪರೇಟರ್ಗಳೆಂದು ವಿಲೀನಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾಯಿ ರಡ್ಡಿ, ಗಣೇಶ ಆವಂಟಿ, ಯಲ್ಲಾಲಿಂಗ ಕಂದಕೂರ, ಅಂಜನಾದೇವಿ, ನಿಂಗಮ್ಮ ಮನವಿ ಮಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ನೆಮ್ಮದಿ ಕೇಂದ್ರಗಳಲ್ಲಿನ 1,600 ಗ್ರಾಮೀಣ ಕಂಪ್ಯೂಟರ್ ಆಪರೇಟರ್ಗಳ ಪರವಾಗಿ ಕೆಲಸ ಮಾಡುತ್ತಿರುವ ನೌಕರರನ್ನೇ ನೆಮ್ಮದಿ ಕೇಂದ್ರಗಳಲ್ಲಿ ಡಾಟಾ ಆಪರೇಟರ್ಗಳಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ನೆಮ್ಮದಿ ಕೇಂದ್ರಗಳ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. <br /> <br /> ಕರ್ನಾಟಕ ರಾಜ್ಯವು ನೆಮ್ಮದಿ ಕೇಂದ್ರಗಳ ಮೂಲಕ ಸರ್ಕಾರದ ಸೇವೆಯನ್ನು ಗ್ರಾಮೀಣ ಜನತೆಯ ಬಾಗಿಲಿಗೆ ತಲುಪುವಂತೆ ಮಾಡಿದ್ದು, ರಾಷ್ಟ್ರದಲ್ಲೆ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನೆಮ್ಮದಿ ಯೋಜನೆಯು ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ ನಡೆಸಲಾಗಿದ್ದು, ಈ ಕಾರ್ಯನಿರ್ವಣೆಗಾಗಿ ನೇಮಿಸಿಕೊಳ್ಳಲಾಗಿದ 1,600 ಕಂಪ್ಯೂಟರ್ ಆಪರೇಟರ್ಗಳು, ಈ ಸೇವೆಯ ಜನಪ್ರಿಯತೆ ಹಾಗೂ ಯಶಸ್ಸಿಗೆ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. <br /> <br /> ಆದರೆ ಏಕಾಏಕಿ ಅವರನ್ನು ಸೇವೆಯಿಂದ ತೆಗೆದರೆ ಕುಟುಂಬಗಳು ಬೀದಿ ಪಾಲಾಗಲಿವೆ. ಕೂಡಲೆ ನೆಮ್ಮದಿ ಕೇಂದ್ರಗಳಲ್ಲಿನ ಕಂಪ್ಯೂಟರ್ ಆಪರೇಟರ್ಗಳನ್ನು ಡಾಟಾ ಎಂಟ್ರಿ ಆಪರೇಟರ್ಗಳೆಂದು ವಿಲೀನಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾಯಿ ರಡ್ಡಿ, ಗಣೇಶ ಆವಂಟಿ, ಯಲ್ಲಾಲಿಂಗ ಕಂದಕೂರ, ಅಂಜನಾದೇವಿ, ನಿಂಗಮ್ಮ ಮನವಿ ಮಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>