<p><strong>ಬೆಂಗಳೂರು: </strong>‘ನೇಕಾರರ ಮತಗಳನ್ನು ಅನಾಯಾಸವಾಗಿ ಪಡೆಯುತ್ತಿರುವ ಜನಪ್ರತಿನಿಧಿಗಳು, ಈ ಸಮುದಾಯದವರಿಗೆ ಒದಗಿಸಬೇಕಾದ ಸವಲತ್ತುಗಳ ಕುರಿತು ಚಿಂತಿಸುತ್ತಿಲ್ಲ. ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ಆರೋಪಿಸಿದರು. ಕರ್ನಾಟಕ ನೇಕಾರರ ಕ್ಷೇಮಾಭಿವೃದ್ಧಿ ಸಂಘವು ನಗರದ ಪುರಭವನದಲ್ಲಿ ಬುಧವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಟ್ರಸ್ಟ್ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ದಾಸಿಮಯ್ಯನವರ ವಚನಗಳು ಆಧುನಿಕ ಸಮಾಜಕ್ಕೆ ಪ್ರಸ್ತುತವಾಗಿದ್ದು, ಆತನ ತತ್ವಗಳನ್ನು ಯುವಜನತೆ ಅನುಸರಿಸಬೇಕು’ ಎಂದು ಹೇಳಿದರು. ಬಿ.ಡಿ.ಸಿ.ಸಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಹಂಪಿ ಹೇಮಕೂಟದ ದಯಾನಂದಪುರಿ ಸ್ವಾಮೀಜಿ, ಗುರುಸಿದ್ಧೇಶ್ವರ ಬೃಹನ್ಮಠ ಬಸವರಾಜ ಪಟ್ಟದಾರ್ಯ, ಶರಣ ಶಿವಲಿಂಗೇಶ್ವರ ಮಠದ ಈಶ್ವರಾನಂದ ಸ್ವಾಮೀಜಿ, ಶಾಸಕರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಮತ್ತಿತರರು ಉಪ್ಥತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನೇಕಾರರ ಮತಗಳನ್ನು ಅನಾಯಾಸವಾಗಿ ಪಡೆಯುತ್ತಿರುವ ಜನಪ್ರತಿನಿಧಿಗಳು, ಈ ಸಮುದಾಯದವರಿಗೆ ಒದಗಿಸಬೇಕಾದ ಸವಲತ್ತುಗಳ ಕುರಿತು ಚಿಂತಿಸುತ್ತಿಲ್ಲ. ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ಆರೋಪಿಸಿದರು. ಕರ್ನಾಟಕ ನೇಕಾರರ ಕ್ಷೇಮಾಭಿವೃದ್ಧಿ ಸಂಘವು ನಗರದ ಪುರಭವನದಲ್ಲಿ ಬುಧವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಟ್ರಸ್ಟ್ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ದಾಸಿಮಯ್ಯನವರ ವಚನಗಳು ಆಧುನಿಕ ಸಮಾಜಕ್ಕೆ ಪ್ರಸ್ತುತವಾಗಿದ್ದು, ಆತನ ತತ್ವಗಳನ್ನು ಯುವಜನತೆ ಅನುಸರಿಸಬೇಕು’ ಎಂದು ಹೇಳಿದರು. ಬಿ.ಡಿ.ಸಿ.ಸಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಹಂಪಿ ಹೇಮಕೂಟದ ದಯಾನಂದಪುರಿ ಸ್ವಾಮೀಜಿ, ಗುರುಸಿದ್ಧೇಶ್ವರ ಬೃಹನ್ಮಠ ಬಸವರಾಜ ಪಟ್ಟದಾರ್ಯ, ಶರಣ ಶಿವಲಿಂಗೇಶ್ವರ ಮಠದ ಈಶ್ವರಾನಂದ ಸ್ವಾಮೀಜಿ, ಶಾಸಕರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಮತ್ತಿತರರು ಉಪ್ಥತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>