<p><strong>ಬೆಂಗಳೂರು: </strong>ಬೆಂಗಳೂರು ಪಶ್ಚಿಮ ಲಯನ್ಸ್ ಸೂಪರ್ಸ್ಪೆಷಾಲಿಟಿ ಕಣ್ಣಾಸ್ಪತ್ರೆಯ ಬೆಳ್ಳಿ ಹಬ್ಬದ ವರ್ಷಾಚರಣೆ ಸ್ಮರಣಾರ್ಥ ಜೆ.ಪಿ. ನಗರದಲ್ಲಿ ನಿರ್ಮಿಸಲಿರುವ ನೂತನ `ಬೆಂಗಳೂರು ಪಶ್ಚಿಮ ಲಯನ್ಸ್- ವಿದ್ಯಾಸಾಗರ್ ಓಸ್ವಾಲ್ ನೇತ್ರ ವಿಜ್ಞಾನ ಸಂಸ್ಥೆ~ಯ ಕಟ್ಟಡಕ್ಕೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಲಾಯಿತು.<br /> <br /> ರೂ 8 ಕೋಟಿ ವೆಚ್ಚದಲ್ಲಿ ಸಂಸ್ಥೆಯ ಕಟ್ಟಡ ನಿರ್ಮಾಣವಾಗಲಿದೆ. ಈ ಸಂಸ್ಥೆಗಾಗಿ ದಾನಿ ಅರುಣಾ ಓಸ್ವಾಲ್ ಅವರು ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಪ್ರತಿಷ್ಠಾನದ (ಎಲ್ಸಿಐಎಫ್) ಮೂಲಕ 5.1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಉಳಿದ 2.9 ಕೋಟಿ ಹಣವನ್ನು ಬೆಂಗಳೂರು ಪಶ್ಚಿಮ ಲಯನ್ಸ್ ಕ್ಲಬ್ ನಿಧಿ ಸಂಗ್ರಹದ ಮೂಲಕ ಸಂಗ್ರಹಿಸಲಾಗಿದೆ.<br /> <br /> ಬೆಂ. ಪಶ್ಚಿಮ ಲಯನ್ಸ್ ಕ್ಲಬ್ನ ವ್ಯವಸ್ಥಾಪಕ ಟ್ರಸ್ಟಿ ಡಾ.ಬಿ.ಎಲ್.ಎಸ್. ಮೂರ್ತಿ ಮಾತನಾಡಿ, `ಕ್ಲಬ್ನ ಅಂತರರಾಷ್ಟ್ರೀಯ ನೇತ್ರ ಬ್ಯಾಂಕ್ ವತಿಯಿಂದ ಇದುವರೆಗೆ 19,000 ಕಾರ್ನಿಯಾಗಳನ್ನು ಸಂಗ್ರಹಿಸಲಾಗಿದೆ. 1,850 ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗದೆ. 1.60 ಲಕ್ಷ ಮಂದಿಗೆ ಕ್ಯಾಟರ್ಯಾಕ್ಟ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಬಡ ರೋಗಿಗಳಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> ಕ್ಲಬ್ನ ಕಾರ್ಯದರ್ಶಿ ಪಿ.ಎಸ್.ಪ್ರೇಮನಾಥ್ ಮಾತನಾಡಿ, `ನಮ್ಮ ಸಂಸ್ಥೆಯು ಕೊಳ್ಳೇಗಾಲ, ಹೊಳೆನರಸೀಪುರ, ಹುಣಸೂರುಗಳಲ್ಲಿ ಕಣ್ಣಾಸ್ಪತ್ರೆಗಳನ್ನು ನಿರ್ವಹಿಸುತ್ತಿದೆ~ ಎಂದರು.<br /> <br /> ಎಲ್ಸಿಐಎಫ್ ಅಧ್ಯಕ್ಷ ಸಿದ್ ಸ್ಕ್ರಗ್ಸ್ ಶಂಕುಸ್ಥಾಪನೆ ನೆರವೇರಿಸಿದರು. ಅರುಣಾ ಓಸ್ವಾಲ್, ಅಭಯ್ ಓಸ್ವಾಲ್, ಸ್ಕ್ರಗ್ಸ್ ಅವರ ಪತ್ನಿ ಜೂಡಿ, ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಜಿಲ್ಲಾ ಗವರ್ನರ್ ಡಾ.ಪಿ.ಆರ್.ಎಸ್.ಚೇತನ್, ಡಾ.ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ಪಶ್ಚಿಮ ಲಯನ್ಸ್ ಸೂಪರ್ಸ್ಪೆಷಾಲಿಟಿ ಕಣ್ಣಾಸ್ಪತ್ರೆಯ ಬೆಳ್ಳಿ ಹಬ್ಬದ ವರ್ಷಾಚರಣೆ ಸ್ಮರಣಾರ್ಥ ಜೆ.ಪಿ. ನಗರದಲ್ಲಿ ನಿರ್ಮಿಸಲಿರುವ ನೂತನ `ಬೆಂಗಳೂರು ಪಶ್ಚಿಮ ಲಯನ್ಸ್- ವಿದ್ಯಾಸಾಗರ್ ಓಸ್ವಾಲ್ ನೇತ್ರ ವಿಜ್ಞಾನ ಸಂಸ್ಥೆ~ಯ ಕಟ್ಟಡಕ್ಕೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಲಾಯಿತು.<br /> <br /> ರೂ 8 ಕೋಟಿ ವೆಚ್ಚದಲ್ಲಿ ಸಂಸ್ಥೆಯ ಕಟ್ಟಡ ನಿರ್ಮಾಣವಾಗಲಿದೆ. ಈ ಸಂಸ್ಥೆಗಾಗಿ ದಾನಿ ಅರುಣಾ ಓಸ್ವಾಲ್ ಅವರು ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಪ್ರತಿಷ್ಠಾನದ (ಎಲ್ಸಿಐಎಫ್) ಮೂಲಕ 5.1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಉಳಿದ 2.9 ಕೋಟಿ ಹಣವನ್ನು ಬೆಂಗಳೂರು ಪಶ್ಚಿಮ ಲಯನ್ಸ್ ಕ್ಲಬ್ ನಿಧಿ ಸಂಗ್ರಹದ ಮೂಲಕ ಸಂಗ್ರಹಿಸಲಾಗಿದೆ.<br /> <br /> ಬೆಂ. ಪಶ್ಚಿಮ ಲಯನ್ಸ್ ಕ್ಲಬ್ನ ವ್ಯವಸ್ಥಾಪಕ ಟ್ರಸ್ಟಿ ಡಾ.ಬಿ.ಎಲ್.ಎಸ್. ಮೂರ್ತಿ ಮಾತನಾಡಿ, `ಕ್ಲಬ್ನ ಅಂತರರಾಷ್ಟ್ರೀಯ ನೇತ್ರ ಬ್ಯಾಂಕ್ ವತಿಯಿಂದ ಇದುವರೆಗೆ 19,000 ಕಾರ್ನಿಯಾಗಳನ್ನು ಸಂಗ್ರಹಿಸಲಾಗಿದೆ. 1,850 ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗದೆ. 1.60 ಲಕ್ಷ ಮಂದಿಗೆ ಕ್ಯಾಟರ್ಯಾಕ್ಟ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಬಡ ರೋಗಿಗಳಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> ಕ್ಲಬ್ನ ಕಾರ್ಯದರ್ಶಿ ಪಿ.ಎಸ್.ಪ್ರೇಮನಾಥ್ ಮಾತನಾಡಿ, `ನಮ್ಮ ಸಂಸ್ಥೆಯು ಕೊಳ್ಳೇಗಾಲ, ಹೊಳೆನರಸೀಪುರ, ಹುಣಸೂರುಗಳಲ್ಲಿ ಕಣ್ಣಾಸ್ಪತ್ರೆಗಳನ್ನು ನಿರ್ವಹಿಸುತ್ತಿದೆ~ ಎಂದರು.<br /> <br /> ಎಲ್ಸಿಐಎಫ್ ಅಧ್ಯಕ್ಷ ಸಿದ್ ಸ್ಕ್ರಗ್ಸ್ ಶಂಕುಸ್ಥಾಪನೆ ನೆರವೇರಿಸಿದರು. ಅರುಣಾ ಓಸ್ವಾಲ್, ಅಭಯ್ ಓಸ್ವಾಲ್, ಸ್ಕ್ರಗ್ಸ್ ಅವರ ಪತ್ನಿ ಜೂಡಿ, ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಜಿಲ್ಲಾ ಗವರ್ನರ್ ಡಾ.ಪಿ.ಆರ್.ಎಸ್.ಚೇತನ್, ಡಾ.ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>