<p><strong>ಬೆಂಗಳೂರು: </strong>ಗುಲ್ಬರ್ಗದಲ್ಲಿನ ಮೊರಾರ್ಜಿ ದೇಸಾಯಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳಲ್ಲಿ ಶಿಕ್ಷಕ , ಶಿಕ್ಷಕೇತರ ಸಿಬ್ಬಂದಿ ಭರ್ತಿಗೆ ಸಂಬಂಧಿಸಿದಂತೆ 2011ರ ಜನವರಿ 21ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ನ ಗುಲ್ಬರ್ಗ ಸಂಚಾರಿ ಪೀಠ ಗುರುವಾರ ತಡೆ ನೀಡಿದೆ.<br /> <br /> ಈ ಅಧಿಸೂಚನೆ ಅನ್ವಯ ವಿವಿಧ ದಿನಾಂಕಗಳಲ್ಲಿ 4550 ಹುದ್ದೆಗಳ ಭರ್ತಿಗೆ ಹೊರಡಿಸಿರುವ ಸುತ್ತೋಲೆಗಳನ್ನು ಪ್ರಶ್ನಿಸಿ ರಾಜಕುಮಾರ ಹಾಗೂ ಹಲವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಎ.ಸತ್ಯನಾರಾಯಣ ನಡೆಸಿದರು.<br /> <br /> `ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ~ದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಶೇ 5ರಷ್ಟು ಕೃಪಾಂಕ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಅರ್ಜಿದಾರರೆಲ್ಲ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಕೃಪಾಂಕ ಮೀಸಲು ಇರಿಸಿಲ್ಲ ಎನ್ನುವುದು ಅರ್ಜಿದಾರರ ದೂರು.<br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ, ಇತರ ಪ್ರತಿವಾದಿಗಳಿಗೆ ನ್ಯಾಯಮೂರ್ತಿಗಳು ನೋಟಿಸ್ ಜಾರಿಗೆ ಆದೇಶಿಸಿದ್ದಾರೆ. ಅಧಿಸೂಚನೆಗೆ ಅವರು ಆರು ವಾರಗಳ ತಡೆ ನೀಡಿ ವಿಚಾರಣೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗುಲ್ಬರ್ಗದಲ್ಲಿನ ಮೊರಾರ್ಜಿ ದೇಸಾಯಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳಲ್ಲಿ ಶಿಕ್ಷಕ , ಶಿಕ್ಷಕೇತರ ಸಿಬ್ಬಂದಿ ಭರ್ತಿಗೆ ಸಂಬಂಧಿಸಿದಂತೆ 2011ರ ಜನವರಿ 21ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ನ ಗುಲ್ಬರ್ಗ ಸಂಚಾರಿ ಪೀಠ ಗುರುವಾರ ತಡೆ ನೀಡಿದೆ.<br /> <br /> ಈ ಅಧಿಸೂಚನೆ ಅನ್ವಯ ವಿವಿಧ ದಿನಾಂಕಗಳಲ್ಲಿ 4550 ಹುದ್ದೆಗಳ ಭರ್ತಿಗೆ ಹೊರಡಿಸಿರುವ ಸುತ್ತೋಲೆಗಳನ್ನು ಪ್ರಶ್ನಿಸಿ ರಾಜಕುಮಾರ ಹಾಗೂ ಹಲವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಎ.ಸತ್ಯನಾರಾಯಣ ನಡೆಸಿದರು.<br /> <br /> `ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ~ದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಶೇ 5ರಷ್ಟು ಕೃಪಾಂಕ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಅರ್ಜಿದಾರರೆಲ್ಲ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಕೃಪಾಂಕ ಮೀಸಲು ಇರಿಸಿಲ್ಲ ಎನ್ನುವುದು ಅರ್ಜಿದಾರರ ದೂರು.<br /> <br /> ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ, ಇತರ ಪ್ರತಿವಾದಿಗಳಿಗೆ ನ್ಯಾಯಮೂರ್ತಿಗಳು ನೋಟಿಸ್ ಜಾರಿಗೆ ಆದೇಶಿಸಿದ್ದಾರೆ. ಅಧಿಸೂಚನೆಗೆ ಅವರು ಆರು ವಾರಗಳ ತಡೆ ನೀಡಿ ವಿಚಾರಣೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>