<p><strong>ಬೆಳಗಾವಿ:</strong> ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿಯ ನೇಮಕಾತಿಗಾಗಿ ಶುಕ್ರವಾರ ನಡೆಯಬೇಕಿದ್ದ ಸಂದರ್ಶನ ಮುಂದೂಡಿದ್ದನ್ನು ವಿರೋಧಿಸಿ ಆರ್ಸಿವಿವಿ ಆವರಣದಲ್ಲಿ ಅಭ್ಯರ್ಥಿಗಳು ಶುಕ್ರವಾರ ಪ್ರತಿಭಟಿಸಿದರು.<br /> <br /> ಇದೇ ಜೂ.14 ರಿಂದ 21 ರವರೆಗೆ ವಿಶ್ವವಿದ್ಯಾಲಯದ ವಿವಿಧ ಬೋಧಕೇತರ ಸಿಬ್ಬಂದಿ ನೇಮಕಾತಿಗಾಗಿ ಸಂದರ್ಶನ ನಡೆಯಬೇಕಿತ್ತು. 45 ಪ್ರಥಮ ದರ್ಜೆ ಸಹಾಯಕ ಹುದ್ದೆ, 35 ದ್ವಿತೀಯ ದರ್ಜೆ ಹುದ್ದೆ ಹಾಗೂ 40 ಕಂಪ್ಯೂಟರ್ ಸಹಾಯಕ ಹುದ್ದೆಗಳಿಗೆ ಸಂದರ್ಶನ ನಡೆಯಬೇಕಿತ್ತು.<br /> <br /> ಶುಕ್ರವಾರ ಬೆಳಿಗ್ಗೆ ಸಂದರ್ಶನ ಹಾಗೂ ಗಣಕಯಂತ್ರ ಕೌಶಲ ಪರೀಕ್ಷೆ ಆರಂಭಗೊಂಡಿತ್ತು. ಆದರೆ, ಸರ್ಕಾರದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಲು ಆದೇಶ ಬಂದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಯಿತು. ಸಂದರ್ಶನಕ್ಕೆ ಆಗಮಿಸಿದ್ದ ನೂರಾರು ಅಭ್ಯರ್ಥಿಗಳು ನಿರಾಶರಾಗಿ ಸರ್ಕಾರದ ಕ್ರಮವನ್ನು ಖಂಡಿಸಿದರು.<br /> <br /> ನೇಮಕಾತಿ ಪ್ರಕ್ರಿಯೆ ಮುಂದೂಡಿರುವ ಕ್ರಮವನ್ನು ಖಂಡಿಸಿ ಅಭ್ಯರ್ಥಿಗಳು ಪ್ರತಿಭಟನೆಗೆ ಮುಂದಾದರು. ಸುಮಾರು ಒಂದು ತಾಸಿಗೂ ಹೆಚ್ಚುಕಾಲ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅಭ್ಯರ್ಥಿಗಳು, ಕೂಡಲೇ ನೇಮಕಾತಿ ಪ್ರಕ್ರಿಯೆಯ ದಿನಾಂಕವನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.<br /> <br /> `ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯ ನಿರ್ದೇಶನದ ಮೇರೆಗೆ ಶುಕ್ರವಾರ ನಡೆಯಬೇಕಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.<br /> <br /> ಸರ್ಕಾರದಿಂದ ಆದೇಶ ಬಂದ ನಂತರ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಸಂಜೆ 4.03ಕ್ಕೆ ಫ್ಯಾಕ್ಸ್ ಮೂಲಕ ಸರ್ಕಾರದಿಂದ ಆದೇಶ ಬಂದಿದ್ದು, ಅದನ್ನು ನಾನು ಪಾಲಿಸಿದ್ದೇನೆ' ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ವಿಷ್ಣುಕಾಂತ ಚಟಪಲ್ಲಿ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಸಹಾಯಕ ಹುದ್ದೆಯ ಸಂದರ್ಶನಕ್ಕೆ ಪೂರ್ವ ತಯಾರಿಯೊಂದಿಗೆ ಸಿದ್ಧವಾಗಿ ಬಂದ್ದ್ದಿದೆ. ಆದರೆ, ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿರುವುದು ಬೇಸರ ತಂದಿದೆ.<br /> <br /> ಪದೇ ಪದೇ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಸರ್ಕಾರದ ಕ್ರಮ ಖಂಡನೀಯವಾದುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ನಿರುದ್ಯೋಗಿಗಳನ್ನಾಗಿ ಮಾಡದೇ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯಯನ್ನೂ ಆರಂಭಿಸಬೇಕು' ಎಂದು ಧಾರವಾಡದಿಂದ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿ ಈರಣ್ಣ ಭಾವಿ ಒತ್ತಾಯಿಸಿದರು.<br /> <br /> `ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೌಕರಿ ಪಡೆಯುವದೇ ಒಂದು ದೊಡ್ಡ ಸವಾಲಾಗಿದೆ. ಯಾವುದೇ ಪದವಿಯಲ್ಲಿ ಹೆಚ್ಚು ಅಂಕ ಪಡೆದರೂ ನೌಕರಿ ಸಿಗುತ್ತದೆ ಎಂಬ ಭರವಸೆ ಉಳಿದಿಲ್ಲ.<br /> <br /> ಲಭಿಸುವ ಒಂದೊಂದು ಉದ್ಯೋಗಾವಕಾಶಗಳನ್ನು ಸಮರ್ಥವಾಗಿ ಬಳಸಿದರೆ ಮಾತ್ರ ನೌಕರಿ ಪಡೆಯಬಹುದು. ಆದರೆ, ಸರ್ಕಾರವು ಈ ರೀತಿಯಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡುತ್ತಾ ಸಾಗಿದರೆ ನಮ್ಮ ಜೀವನದ ಗತಿ ಏನು' ಎಂದು ಹುಬ್ಬಳ್ಳಿಯಿಂದ ಬಂದಿದ್ದ ಸಂತೋಷಕುಮಾರ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿಯ ನೇಮಕಾತಿಗಾಗಿ ಶುಕ್ರವಾರ ನಡೆಯಬೇಕಿದ್ದ ಸಂದರ್ಶನ ಮುಂದೂಡಿದ್ದನ್ನು ವಿರೋಧಿಸಿ ಆರ್ಸಿವಿವಿ ಆವರಣದಲ್ಲಿ ಅಭ್ಯರ್ಥಿಗಳು ಶುಕ್ರವಾರ ಪ್ರತಿಭಟಿಸಿದರು.<br /> <br /> ಇದೇ ಜೂ.14 ರಿಂದ 21 ರವರೆಗೆ ವಿಶ್ವವಿದ್ಯಾಲಯದ ವಿವಿಧ ಬೋಧಕೇತರ ಸಿಬ್ಬಂದಿ ನೇಮಕಾತಿಗಾಗಿ ಸಂದರ್ಶನ ನಡೆಯಬೇಕಿತ್ತು. 45 ಪ್ರಥಮ ದರ್ಜೆ ಸಹಾಯಕ ಹುದ್ದೆ, 35 ದ್ವಿತೀಯ ದರ್ಜೆ ಹುದ್ದೆ ಹಾಗೂ 40 ಕಂಪ್ಯೂಟರ್ ಸಹಾಯಕ ಹುದ್ದೆಗಳಿಗೆ ಸಂದರ್ಶನ ನಡೆಯಬೇಕಿತ್ತು.<br /> <br /> ಶುಕ್ರವಾರ ಬೆಳಿಗ್ಗೆ ಸಂದರ್ಶನ ಹಾಗೂ ಗಣಕಯಂತ್ರ ಕೌಶಲ ಪರೀಕ್ಷೆ ಆರಂಭಗೊಂಡಿತ್ತು. ಆದರೆ, ಸರ್ಕಾರದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಲು ಆದೇಶ ಬಂದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಯಿತು. ಸಂದರ್ಶನಕ್ಕೆ ಆಗಮಿಸಿದ್ದ ನೂರಾರು ಅಭ್ಯರ್ಥಿಗಳು ನಿರಾಶರಾಗಿ ಸರ್ಕಾರದ ಕ್ರಮವನ್ನು ಖಂಡಿಸಿದರು.<br /> <br /> ನೇಮಕಾತಿ ಪ್ರಕ್ರಿಯೆ ಮುಂದೂಡಿರುವ ಕ್ರಮವನ್ನು ಖಂಡಿಸಿ ಅಭ್ಯರ್ಥಿಗಳು ಪ್ರತಿಭಟನೆಗೆ ಮುಂದಾದರು. ಸುಮಾರು ಒಂದು ತಾಸಿಗೂ ಹೆಚ್ಚುಕಾಲ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅಭ್ಯರ್ಥಿಗಳು, ಕೂಡಲೇ ನೇಮಕಾತಿ ಪ್ರಕ್ರಿಯೆಯ ದಿನಾಂಕವನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.<br /> <br /> `ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯ ನಿರ್ದೇಶನದ ಮೇರೆಗೆ ಶುಕ್ರವಾರ ನಡೆಯಬೇಕಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.<br /> <br /> ಸರ್ಕಾರದಿಂದ ಆದೇಶ ಬಂದ ನಂತರ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಸಂಜೆ 4.03ಕ್ಕೆ ಫ್ಯಾಕ್ಸ್ ಮೂಲಕ ಸರ್ಕಾರದಿಂದ ಆದೇಶ ಬಂದಿದ್ದು, ಅದನ್ನು ನಾನು ಪಾಲಿಸಿದ್ದೇನೆ' ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ವಿಷ್ಣುಕಾಂತ ಚಟಪಲ್ಲಿ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಸಹಾಯಕ ಹುದ್ದೆಯ ಸಂದರ್ಶನಕ್ಕೆ ಪೂರ್ವ ತಯಾರಿಯೊಂದಿಗೆ ಸಿದ್ಧವಾಗಿ ಬಂದ್ದ್ದಿದೆ. ಆದರೆ, ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿರುವುದು ಬೇಸರ ತಂದಿದೆ.<br /> <br /> ಪದೇ ಪದೇ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಸರ್ಕಾರದ ಕ್ರಮ ಖಂಡನೀಯವಾದುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ನಿರುದ್ಯೋಗಿಗಳನ್ನಾಗಿ ಮಾಡದೇ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯಯನ್ನೂ ಆರಂಭಿಸಬೇಕು' ಎಂದು ಧಾರವಾಡದಿಂದ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿ ಈರಣ್ಣ ಭಾವಿ ಒತ್ತಾಯಿಸಿದರು.<br /> <br /> `ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೌಕರಿ ಪಡೆಯುವದೇ ಒಂದು ದೊಡ್ಡ ಸವಾಲಾಗಿದೆ. ಯಾವುದೇ ಪದವಿಯಲ್ಲಿ ಹೆಚ್ಚು ಅಂಕ ಪಡೆದರೂ ನೌಕರಿ ಸಿಗುತ್ತದೆ ಎಂಬ ಭರವಸೆ ಉಳಿದಿಲ್ಲ.<br /> <br /> ಲಭಿಸುವ ಒಂದೊಂದು ಉದ್ಯೋಗಾವಕಾಶಗಳನ್ನು ಸಮರ್ಥವಾಗಿ ಬಳಸಿದರೆ ಮಾತ್ರ ನೌಕರಿ ಪಡೆಯಬಹುದು. ಆದರೆ, ಸರ್ಕಾರವು ಈ ರೀತಿಯಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡುತ್ತಾ ಸಾಗಿದರೆ ನಮ್ಮ ಜೀವನದ ಗತಿ ಏನು' ಎಂದು ಹುಬ್ಬಳ್ಳಿಯಿಂದ ಬಂದಿದ್ದ ಸಂತೋಷಕುಮಾರ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>