<p><strong>ಭಟ್ಕಳ:</strong> ಪರಿಶಿಷ್ಟರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ನೈಜ ಪರಿಶಿಷ್ಟರಲ್ಲದವರಿಗೆ ನೀಡದಂತೆ ಭಟ್ಕಳ ತಾಲ್ಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿನ ಜಾಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಉಲ್ಲಾಸ ನಾಯ್ಕರಿಗೆ ಮನವಿ ಸಲ್ಲಿಸಿದರು.<br /> <br /> ಜಾಲಿ ಗ್ರಾಮ ಪಂಚಾಯ್ತಿಯಲ್ಲಿ ಪರಿಶಿಷ್ಟರಿಗೆ ಕಾಯ್ದಿರಿಸಿದ ಅನುದಾನದಿಂದ ಮತ್ತು ಸರ್ಕಾರದಿಂದ ಬಂದ ಸವಲತ್ತುಗಳನ್ನು ನೈಜ ಪರಿಶಿಷ್ಟರಿಗೆ ನೀಡದೇ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ. ಈ ಸೌಲಭ್ಯಗಳು ನೈಜ ಪರಿಶಿಷ್ಟರಿಗೆ ನೀಡುವಂತೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಆಗ್ರಹಿಸಿದರು.<br /> <br /> ಕಳೆದ ಹಲವು ವರ್ಷಗಳಿಂದ ಕೆಲವು ಕಂದಾಯ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸಮೀಕ್ಷೆ ಮಾಡದೇ, ಕರ್ತವ್ಯಲೋಪ ಎಸಗಿ ನೈಜ ಪರಿಶಿಷ್ಟರಿಗೆ ನೀಡಬೇಕಾದ ಸವಲತ್ತುಗಳನ್ನು ಪರಿಶಿಷ್ಟರಲ್ಲದವರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಮೂಲತಃ ಮೀನುಗಾರಿಕೆ ವೃತ್ತಿ ಮಾಡುವ ಮೊಗೇರ ಜನಾಂಗದವರು ಪರಿಶಿಷ್ಟ ಜಾತಿಗೆ ಸೇರಿದವರಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಪರಿಶಿಷ್ಟರಲ್ಲದ ಮೊಗೇರ ಸಮಾಜದವರಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ನಿಲ್ಲಿಸಬೇಕು ಹಾಗೂ ಅವರಿಗೆ ಈವರೆಗೆ ನೀಡಿರುವ ಸೌಲಭ್ಯಗಳನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.<br /> <br /> ದ.ಸಂ.ಸ ಮಿತಿಯ ಪ್ರಮುಖ ನಾರಾಯಣ ಶಿರೂರ್, ಕಿರಣ ಶಿರೂರ್, ಮಹೇಶ ಪಾಲನಕರ್, ಭಾಸ್ಕರ ಚಂದಾವರಕರ್, ಅನಿತಾ ಪಾಲೇಕರ್, ಲಲಿತಾ ಪಾವಸ್ಕರ್, ಶ್ರೀಧರ ಹಳ್ಳೇರ್,ಗಣೇಶ ಹಳ್ಳೇರ್, ದೇವೇಂದ್ರ ಬಾಕಡ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಪರಿಶಿಷ್ಟರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ನೈಜ ಪರಿಶಿಷ್ಟರಲ್ಲದವರಿಗೆ ನೀಡದಂತೆ ಭಟ್ಕಳ ತಾಲ್ಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿನ ಜಾಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಉಲ್ಲಾಸ ನಾಯ್ಕರಿಗೆ ಮನವಿ ಸಲ್ಲಿಸಿದರು.<br /> <br /> ಜಾಲಿ ಗ್ರಾಮ ಪಂಚಾಯ್ತಿಯಲ್ಲಿ ಪರಿಶಿಷ್ಟರಿಗೆ ಕಾಯ್ದಿರಿಸಿದ ಅನುದಾನದಿಂದ ಮತ್ತು ಸರ್ಕಾರದಿಂದ ಬಂದ ಸವಲತ್ತುಗಳನ್ನು ನೈಜ ಪರಿಶಿಷ್ಟರಿಗೆ ನೀಡದೇ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ. ಈ ಸೌಲಭ್ಯಗಳು ನೈಜ ಪರಿಶಿಷ್ಟರಿಗೆ ನೀಡುವಂತೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಆಗ್ರಹಿಸಿದರು.<br /> <br /> ಕಳೆದ ಹಲವು ವರ್ಷಗಳಿಂದ ಕೆಲವು ಕಂದಾಯ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸಮೀಕ್ಷೆ ಮಾಡದೇ, ಕರ್ತವ್ಯಲೋಪ ಎಸಗಿ ನೈಜ ಪರಿಶಿಷ್ಟರಿಗೆ ನೀಡಬೇಕಾದ ಸವಲತ್ತುಗಳನ್ನು ಪರಿಶಿಷ್ಟರಲ್ಲದವರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಮೂಲತಃ ಮೀನುಗಾರಿಕೆ ವೃತ್ತಿ ಮಾಡುವ ಮೊಗೇರ ಜನಾಂಗದವರು ಪರಿಶಿಷ್ಟ ಜಾತಿಗೆ ಸೇರಿದವರಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಪರಿಶಿಷ್ಟರಲ್ಲದ ಮೊಗೇರ ಸಮಾಜದವರಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ನಿಲ್ಲಿಸಬೇಕು ಹಾಗೂ ಅವರಿಗೆ ಈವರೆಗೆ ನೀಡಿರುವ ಸೌಲಭ್ಯಗಳನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.<br /> <br /> ದ.ಸಂ.ಸ ಮಿತಿಯ ಪ್ರಮುಖ ನಾರಾಯಣ ಶಿರೂರ್, ಕಿರಣ ಶಿರೂರ್, ಮಹೇಶ ಪಾಲನಕರ್, ಭಾಸ್ಕರ ಚಂದಾವರಕರ್, ಅನಿತಾ ಪಾಲೇಕರ್, ಲಲಿತಾ ಪಾವಸ್ಕರ್, ಶ್ರೀಧರ ಹಳ್ಳೇರ್,ಗಣೇಶ ಹಳ್ಳೇರ್, ದೇವೇಂದ್ರ ಬಾಕಡ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>