<p><strong>ದೊಡ್ಡಬಳ್ಳಾಪುರ:</strong> ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಂಡರೆ ಮಾತ್ರ ರೈತರ ಬದುಕು ಮತ್ತು ಭೂಮಿ ಉಳಿಯಲು ಸಾಧ್ಯ ಎಂದು ಶ್ರೀಲಂಕಾ ದೇಶದ ರೈತ ಮುಖಂಡ ಷರದ್ಫರ್ನಾಂಡೋ ಹೇಳಿದರು.ತಾಲ್ಲೂಕಿನ ನಾಗಸಂದ್ರದಲ್ಲಿ ಮಂಗಳವಾರ ನಡೆದ ದಕ್ಷಿಣ ಏಷ್ಯಾ ರಾಷ್ಟ್ರಗಳ ರೈತ ಮುಖಂಡರ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಸಣ್ಣ ಮತ್ತು ದೊಡ್ಡ ಹಿಡುವಳಿದಾರ ರೈತರು ಒಗ್ಗೂಡುವ ಮೂಲಕ ಹೊಸ ರೈತ ಜಗತ್ತನ್ನು ಸೃಷ್ಟಿಸಬೇಕು.ಇಂದಿನ ಕೃಷಿ ಬಹುರಾಷ್ಟ್ರೀಯ ಕಂಪೆನಿಗಳ ಕಪಿಮುಷ್ಠಿಗೆ ಒಳಗಾಗುತ್ತಿದೆ.ಇದರ ವಿರುದ್ಧ ರೈತರು ಒಗ್ಗೂಡಿ ಹೋರಾಟ ಮಾಡುವ ಅನಿವಾರ್ಯ ಇದೆ ಎಂದು ಹೇಳಿದರು. <br /> <br /> ರಾಜ್ಯ ರೈತ ಸಂಘದ ಅಂತರ ರಾಷ್ಟ್ರೀಯ ಕಾರ್ಯದರ್ಶಿ ಚುಕ್ಕಿನಂಜುಂಡಸ್ವಾಮಿ ಮಾತನಾಡಿ, ಜಾಗತೀಕರಣದ ನಂತರ ಜಾರಿಯಾಗುತ್ತಿರುವ ಕೃಷಿ ನೀತಿಗಳ ಕುರಿತು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗಸಂದ್ರ ಹಾಗೂ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ಎರಡು ದಿನಗಳ ಕಾಲ ರೈತ ಸಂಘಟನೆಗಳ ಸಮನ್ವಯ ಸಮಿತಿ ಸಭೆ ನಡೆಯಲಿದೆ. <br /> <br /> ಮೊದಲ ದಿನದ ಸಭೆಯಲ್ಲಿ ದಕ್ಷಿಣ ಏಷ್ಯಾದ 8 ರಾಷ್ಟ್ರಗಳ ರೈತ ಮುಖಂಡರು ಹಾಗೂ ನಮ್ಮ ದೇಶದ ವಿವಿಧ ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಸ್ಥಳೀಯ ರೈತರೂ ಸಭೆಯಲ್ಲಿ ಭಾಗವಹಿಸುವ ಮೂಲಕ ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಬಹುದು ಎಂದು ತಿಳಿಸಿದರು. <br /> <br /> ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಹೊರ ತಂದಿರುವ ‘ನಮ್ದು’ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ರೈತ ಸಂಘದ ರಾಜ್ಯ ಕಾರ್ಯದರ್ಶಿ ಸಿ.ಪುಟ್ಟಸ್ವಾಮಿ ಚಾಲನೆ ನೀಡಿದರು. <br /> <br /> ಸಭೆಯಲ್ಲಿ ದೆಹಲಿಯ ರೈತ ಮುಖಂಡ ಯದುವೀರ್ಸಿಂಗ್, ನೇಪಾಳದ ಬಲರಾಂ ಬಂಜ್ಕೋಡ್, ಶಾಂತಮಾನವಿ, ತಮಿಳುನಾಡಿನ ರೈತ ಸಂಘಟನೆಯ ಕಾಳಿಮುತ್ತು, ರಾಜ್ಯ ರೈತ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ವೆಂಕಟನಾರಾಣಪ್ಪ, ಕಾರ್ಯದರ್ಶಿ ಡಾ.ಶ್ರೀನಿವಾಸ್, ತಾ.ಅಧ್ಯಕ್ಷ ಪ್ರಸನ್ನ, ಗ್ರಾ.ಪಂ. ಸದಸ್ಯ ಎಸ್.ಸೋಮಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಂಡರೆ ಮಾತ್ರ ರೈತರ ಬದುಕು ಮತ್ತು ಭೂಮಿ ಉಳಿಯಲು ಸಾಧ್ಯ ಎಂದು ಶ್ರೀಲಂಕಾ ದೇಶದ ರೈತ ಮುಖಂಡ ಷರದ್ಫರ್ನಾಂಡೋ ಹೇಳಿದರು.ತಾಲ್ಲೂಕಿನ ನಾಗಸಂದ್ರದಲ್ಲಿ ಮಂಗಳವಾರ ನಡೆದ ದಕ್ಷಿಣ ಏಷ್ಯಾ ರಾಷ್ಟ್ರಗಳ ರೈತ ಮುಖಂಡರ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಸಣ್ಣ ಮತ್ತು ದೊಡ್ಡ ಹಿಡುವಳಿದಾರ ರೈತರು ಒಗ್ಗೂಡುವ ಮೂಲಕ ಹೊಸ ರೈತ ಜಗತ್ತನ್ನು ಸೃಷ್ಟಿಸಬೇಕು.ಇಂದಿನ ಕೃಷಿ ಬಹುರಾಷ್ಟ್ರೀಯ ಕಂಪೆನಿಗಳ ಕಪಿಮುಷ್ಠಿಗೆ ಒಳಗಾಗುತ್ತಿದೆ.ಇದರ ವಿರುದ್ಧ ರೈತರು ಒಗ್ಗೂಡಿ ಹೋರಾಟ ಮಾಡುವ ಅನಿವಾರ್ಯ ಇದೆ ಎಂದು ಹೇಳಿದರು. <br /> <br /> ರಾಜ್ಯ ರೈತ ಸಂಘದ ಅಂತರ ರಾಷ್ಟ್ರೀಯ ಕಾರ್ಯದರ್ಶಿ ಚುಕ್ಕಿನಂಜುಂಡಸ್ವಾಮಿ ಮಾತನಾಡಿ, ಜಾಗತೀಕರಣದ ನಂತರ ಜಾರಿಯಾಗುತ್ತಿರುವ ಕೃಷಿ ನೀತಿಗಳ ಕುರಿತು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗಸಂದ್ರ ಹಾಗೂ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ಎರಡು ದಿನಗಳ ಕಾಲ ರೈತ ಸಂಘಟನೆಗಳ ಸಮನ್ವಯ ಸಮಿತಿ ಸಭೆ ನಡೆಯಲಿದೆ. <br /> <br /> ಮೊದಲ ದಿನದ ಸಭೆಯಲ್ಲಿ ದಕ್ಷಿಣ ಏಷ್ಯಾದ 8 ರಾಷ್ಟ್ರಗಳ ರೈತ ಮುಖಂಡರು ಹಾಗೂ ನಮ್ಮ ದೇಶದ ವಿವಿಧ ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ಸ್ಥಳೀಯ ರೈತರೂ ಸಭೆಯಲ್ಲಿ ಭಾಗವಹಿಸುವ ಮೂಲಕ ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಬಹುದು ಎಂದು ತಿಳಿಸಿದರು. <br /> <br /> ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಹೊರ ತಂದಿರುವ ‘ನಮ್ದು’ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ರೈತ ಸಂಘದ ರಾಜ್ಯ ಕಾರ್ಯದರ್ಶಿ ಸಿ.ಪುಟ್ಟಸ್ವಾಮಿ ಚಾಲನೆ ನೀಡಿದರು. <br /> <br /> ಸಭೆಯಲ್ಲಿ ದೆಹಲಿಯ ರೈತ ಮುಖಂಡ ಯದುವೀರ್ಸಿಂಗ್, ನೇಪಾಳದ ಬಲರಾಂ ಬಂಜ್ಕೋಡ್, ಶಾಂತಮಾನವಿ, ತಮಿಳುನಾಡಿನ ರೈತ ಸಂಘಟನೆಯ ಕಾಳಿಮುತ್ತು, ರಾಜ್ಯ ರೈತ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ವೆಂಕಟನಾರಾಣಪ್ಪ, ಕಾರ್ಯದರ್ಶಿ ಡಾ.ಶ್ರೀನಿವಾಸ್, ತಾ.ಅಧ್ಯಕ್ಷ ಪ್ರಸನ್ನ, ಗ್ರಾ.ಪಂ. ಸದಸ್ಯ ಎಸ್.ಸೋಮಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>