<p>ಬೆಂಗಳೂರು: ‘ಬೆಂಗಳೂರು ಜಲಮಂಡಲಿಯ ಎಂಜಿನಿಯರ್ಗಳು ಹಾಗೂ ನೌಕರರ ಪ್ರತಿಭೆ ಗುರುತಿಸಲು ಸೂಕ್ತ ವೇದಿಕೆ ಕಲ್ಪಿಸಬೇಕಿದೆ’ ಎಂದು ಬೆಂಗಳೂರು ಜಲಮಂಡಲಿ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.<br /> <br /> ಜಲಮಂಡಲಿಯ ಶಿಂಷಾ ಕಲಾಸಂಘ ಇತ್ತೀಚೆಗೆ ಏರ್ಪಡಿಸಿದ್ದ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> ‘ನೀರು ಪೂರೈಕೆಯಂತಹ ಮಹತ್ತರ ಕಾರ್ಯ ನಿರ್ವಹಿಸುವ ಸಿಬ್ಬಂದಿ ಸದಾ ಒತ್ತಡದಲ್ಲಿರುತ್ತಾರೆ. ಸಾಂಸ್ಕೃತಿಕ ಚಟುವಟಿಕೆ ಅವರಲ್ಲಿ ಉತ್ಸಾಹ ತುಂಬಬಲ್ಲವು. ಆದ್ದರಿಂದ ಕಲಾ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯೋಗಿಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದರು.<br /> <br /> ಜಲಮಂಡಲಿ ಅಧ್ಯಕ್ಷ ಪಿ.ಬಿ.ರಾಮಮೂರ್ತಿ ಮಾತನಾಡಿ ‘ಜಲಮಂಡಲಿ ವ್ಯಾಪ್ತಿಯ ಮೂರು ಸಾಂಸ್ಕೃತಿಕ ಕಲಾ ಸಂಘಗಳನ್ನು ಒಗ್ಗೂಡಿಸಿ ಅವರ ಪ್ರತಿಭೆ ಗುರುತಿಸಲು ಈ ವರ್ಷದಿಂದಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.<br /> <br /> ‘ಈ ಕಲಾ ಸಂಘಗಳಿಂದ ನಾಟಕ ಸ್ಪರ್ಧೆ ಏರ್ಪಡಿಸಿ ಕಲಾವಿದರು ಹಾಗೂ ತಂಡಗಳಿಗೆ ಬಹುಮಾನ ನೀಡಲಾಗುವುದು. ಕಲಾ ಕಾರ್ಯಕ್ರಮಗಳನ್ನು ನಡೆಸಲು ಕಲಾಮಂದಿರದ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.<br /> <br /> ನೌಕರರಾದ ರಂಗ ಕಲಾವಿದ ಶಿವಣ್ಣ ಹಾಗೂ ಯೋಗಪಟು ಆರ್.ರಾಮಮೂರ್ತಿ ಅವರಿಗೆ ಈ ಸಾಲಿನ ಶಿಂಷಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.<br /> ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಪ್ರಧಾನ ಎಂಜಿನಿಯರ್ ಟಿ.ವೆಂಕಟರಾಜು, ಮುಖ್ಯ ಎಂಜಿನಿಯರ್ಗಳಾದ ರಾಮಸ್ವಾಮಿ, ಕೆಂಪರಾಮಯ್ಯ, ನಾರಾಯಣ, ನೌಕರರ ಸಂಘದ ಅಧ್ಯಕ್ಷ ರುದ್ರೇಗೌಡ, ಸಾರ್ವಜನಿಕ ಸಂಪರ್ಕಾಧಿಕಾರಿ ಅ.ನಾ.ಪ್ರಹ್ಲಾದವರಾವ್, ಕಲಾಸಂಘದ ಅಧ್ಯಕ್ಷ ಆರ್.ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬೆಂಗಳೂರು ಜಲಮಂಡಲಿಯ ಎಂಜಿನಿಯರ್ಗಳು ಹಾಗೂ ನೌಕರರ ಪ್ರತಿಭೆ ಗುರುತಿಸಲು ಸೂಕ್ತ ವೇದಿಕೆ ಕಲ್ಪಿಸಬೇಕಿದೆ’ ಎಂದು ಬೆಂಗಳೂರು ಜಲಮಂಡಲಿ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.<br /> <br /> ಜಲಮಂಡಲಿಯ ಶಿಂಷಾ ಕಲಾಸಂಘ ಇತ್ತೀಚೆಗೆ ಏರ್ಪಡಿಸಿದ್ದ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> ‘ನೀರು ಪೂರೈಕೆಯಂತಹ ಮಹತ್ತರ ಕಾರ್ಯ ನಿರ್ವಹಿಸುವ ಸಿಬ್ಬಂದಿ ಸದಾ ಒತ್ತಡದಲ್ಲಿರುತ್ತಾರೆ. ಸಾಂಸ್ಕೃತಿಕ ಚಟುವಟಿಕೆ ಅವರಲ್ಲಿ ಉತ್ಸಾಹ ತುಂಬಬಲ್ಲವು. ಆದ್ದರಿಂದ ಕಲಾ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯೋಗಿಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದರು.<br /> <br /> ಜಲಮಂಡಲಿ ಅಧ್ಯಕ್ಷ ಪಿ.ಬಿ.ರಾಮಮೂರ್ತಿ ಮಾತನಾಡಿ ‘ಜಲಮಂಡಲಿ ವ್ಯಾಪ್ತಿಯ ಮೂರು ಸಾಂಸ್ಕೃತಿಕ ಕಲಾ ಸಂಘಗಳನ್ನು ಒಗ್ಗೂಡಿಸಿ ಅವರ ಪ್ರತಿಭೆ ಗುರುತಿಸಲು ಈ ವರ್ಷದಿಂದಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.<br /> <br /> ‘ಈ ಕಲಾ ಸಂಘಗಳಿಂದ ನಾಟಕ ಸ್ಪರ್ಧೆ ಏರ್ಪಡಿಸಿ ಕಲಾವಿದರು ಹಾಗೂ ತಂಡಗಳಿಗೆ ಬಹುಮಾನ ನೀಡಲಾಗುವುದು. ಕಲಾ ಕಾರ್ಯಕ್ರಮಗಳನ್ನು ನಡೆಸಲು ಕಲಾಮಂದಿರದ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.<br /> <br /> ನೌಕರರಾದ ರಂಗ ಕಲಾವಿದ ಶಿವಣ್ಣ ಹಾಗೂ ಯೋಗಪಟು ಆರ್.ರಾಮಮೂರ್ತಿ ಅವರಿಗೆ ಈ ಸಾಲಿನ ಶಿಂಷಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.<br /> ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಪ್ರಧಾನ ಎಂಜಿನಿಯರ್ ಟಿ.ವೆಂಕಟರಾಜು, ಮುಖ್ಯ ಎಂಜಿನಿಯರ್ಗಳಾದ ರಾಮಸ್ವಾಮಿ, ಕೆಂಪರಾಮಯ್ಯ, ನಾರಾಯಣ, ನೌಕರರ ಸಂಘದ ಅಧ್ಯಕ್ಷ ರುದ್ರೇಗೌಡ, ಸಾರ್ವಜನಿಕ ಸಂಪರ್ಕಾಧಿಕಾರಿ ಅ.ನಾ.ಪ್ರಹ್ಲಾದವರಾವ್, ಕಲಾಸಂಘದ ಅಧ್ಯಕ್ಷ ಆರ್.ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>