<p>ಬೀದರ್: ರಾಜ್ಯದಲ್ಲಿ ಸಿ ಮತ್ತು ಡಿ ದರ್ಜೆಯ ಸರ್ಕಾರಿ ಹುದ್ದೆಗಳಿಗೆ ವಯೋಮಿತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಜೈ ಕರ್ನಾಟಕ ರಕ್ಷಣಾ ವೇದಿಕೆಯು ನಗರದಲ್ಲಿ ಶುಕ್ರವಾರ ಪ್ರತಿಭಟನಾ ರ್ಯಾಲಿ ನಡೆಸಿತು.<br /> <br /> ನಗರದ ಕನ್ನಡಾಂಬೆ ವೃತ್ತದಲ್ಲಿ ಜಮಾಯಿಸಿದ ವೇದಿಕೆಯ ಕಾರ್ಯಕರ್ತರು ಅಲ್ಲಿಂದ ಕರಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರು.<br /> <br /> ನಿರುದ್ಯೋಗಿ ಪದವೀಧರರ ವಯೋಮಿತಿ ಮೀರುತ್ತಿರುವುದನ್ನು ಪರಿಗಣಿಸಿ ನೆರೆಯ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ವಯೋಮಿತಿ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ಪಶ್ಚಿಮ ಬಂಗಾಳದಲ್ಲಿ ಸಾಮಾನ್ಯ ವರ್ಗದ ವಯೋಮಿತಿ 37 ವರ್ಷದಿಂದ 40, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ 40 ರಿಂದ 43 ಹಾಗೂ ಅಂಗವಿಕಲರ ವಯೋಮಿತಿ 43 ವರ್ಷದಿಂದ 45ಕ್ಕೆ ಹೆಚ್ಚಿಸಲಾಗಿದೆ. ಆಂಧ್ರಪ್ರದೇಶ ಸರ್ಕಾರ ಸಾಮಾನ್ಯ ವರ್ಗದ ವಯೋಮಿತಿ 34 ವರ್ಷದಿಂದ 36 ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಯೋಮಿತಿ 39 ವರ್ಷದಿಂದ 41ಕ್ಕೆ ಹೆಚ್ಚಿಸಿದೆ ಎಂದು ಹೇಳಿದ್ದಾರೆ. <br /> <br /> ನಿರುದ್ಯೋಗಿಗಳು ನೌಕರಿ ಪಡೆಯುವಂತಾಗಲು ಈ ಎರಡು ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿ ವಯೋಮಿತಿ ಹೆಚ್ಚಿಸಬೇಕು. ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಅರುಣಕುಮಾರ ಎಸ್. ಪಾಟೀಲ್, ಜಿಲ್ಲಾ ಅಧ್ಯಕ್ಷ ಗಣೇಶರೆಡ್ಡಿ, ಪ್ರಮುಖರಾದ ಗುಂಡುರೆಡ್ಡಿ, ಶಿವಶಂಕರ ಗುನ್ಗುನೆ, ಸ್ಯಾಮಸನ್ ಮಂಗಲಪೇಟ್, ರತಿಕಾಂತ, ನಾಗರಾಜ, ಪ್ರವೀಣ, ಹರೀಶ, ಆನಂದ ನಂದಗಿ, ಜಗನ್ನಾಥ ಪಟ್ಟಣಶೆಟ್ಟಿ, ಸಚಿನ್ ಫರಹತಾಬಾದ್, ವಾಜೀದ್ಖಾನ್, ಶರಣು ಮಡಿವಾಳ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ರಾಜ್ಯದಲ್ಲಿ ಸಿ ಮತ್ತು ಡಿ ದರ್ಜೆಯ ಸರ್ಕಾರಿ ಹುದ್ದೆಗಳಿಗೆ ವಯೋಮಿತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಜೈ ಕರ್ನಾಟಕ ರಕ್ಷಣಾ ವೇದಿಕೆಯು ನಗರದಲ್ಲಿ ಶುಕ್ರವಾರ ಪ್ರತಿಭಟನಾ ರ್ಯಾಲಿ ನಡೆಸಿತು.<br /> <br /> ನಗರದ ಕನ್ನಡಾಂಬೆ ವೃತ್ತದಲ್ಲಿ ಜಮಾಯಿಸಿದ ವೇದಿಕೆಯ ಕಾರ್ಯಕರ್ತರು ಅಲ್ಲಿಂದ ಕರಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರು.<br /> <br /> ನಿರುದ್ಯೋಗಿ ಪದವೀಧರರ ವಯೋಮಿತಿ ಮೀರುತ್ತಿರುವುದನ್ನು ಪರಿಗಣಿಸಿ ನೆರೆಯ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ವಯೋಮಿತಿ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ಪಶ್ಚಿಮ ಬಂಗಾಳದಲ್ಲಿ ಸಾಮಾನ್ಯ ವರ್ಗದ ವಯೋಮಿತಿ 37 ವರ್ಷದಿಂದ 40, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ 40 ರಿಂದ 43 ಹಾಗೂ ಅಂಗವಿಕಲರ ವಯೋಮಿತಿ 43 ವರ್ಷದಿಂದ 45ಕ್ಕೆ ಹೆಚ್ಚಿಸಲಾಗಿದೆ. ಆಂಧ್ರಪ್ರದೇಶ ಸರ್ಕಾರ ಸಾಮಾನ್ಯ ವರ್ಗದ ವಯೋಮಿತಿ 34 ವರ್ಷದಿಂದ 36 ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಯೋಮಿತಿ 39 ವರ್ಷದಿಂದ 41ಕ್ಕೆ ಹೆಚ್ಚಿಸಿದೆ ಎಂದು ಹೇಳಿದ್ದಾರೆ. <br /> <br /> ನಿರುದ್ಯೋಗಿಗಳು ನೌಕರಿ ಪಡೆಯುವಂತಾಗಲು ಈ ಎರಡು ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿ ವಯೋಮಿತಿ ಹೆಚ್ಚಿಸಬೇಕು. ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.<br /> <br /> ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಅರುಣಕುಮಾರ ಎಸ್. ಪಾಟೀಲ್, ಜಿಲ್ಲಾ ಅಧ್ಯಕ್ಷ ಗಣೇಶರೆಡ್ಡಿ, ಪ್ರಮುಖರಾದ ಗುಂಡುರೆಡ್ಡಿ, ಶಿವಶಂಕರ ಗುನ್ಗುನೆ, ಸ್ಯಾಮಸನ್ ಮಂಗಲಪೇಟ್, ರತಿಕಾಂತ, ನಾಗರಾಜ, ಪ್ರವೀಣ, ಹರೀಶ, ಆನಂದ ನಂದಗಿ, ಜಗನ್ನಾಥ ಪಟ್ಟಣಶೆಟ್ಟಿ, ಸಚಿನ್ ಫರಹತಾಬಾದ್, ವಾಜೀದ್ಖಾನ್, ಶರಣು ಮಡಿವಾಳ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>