<p><strong>ಬೆಂಗಳೂರು: </strong>`ನ್ಯಾನೊ ಕಾರಿನಲ್ಲಿ ನಗರಕ್ಕೆ ಬಂದವರು ಶಂಕಿತ ಉಗ್ರರಲ್ಲ. ಅವರು ಗುಜರಾತ್ ಮೂಲದ ವ್ಯಾಪಾರಿಗಳು' ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಸ್ಪಷ್ಟಪಡಿಸಿದ್ದಾರೆ.<br /> <br /> ನಗರದ ಕಮಿಷನರ್ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನ್ಯಾನೊ ಕಾರಿನಲ್ಲಿ ಶಂಕಿತ ಉಗ್ರರು ನಗರಕ್ಕೆ ನುಸುಳಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯು ಬೆಂಗಳೂರು ಪೊಲೀಸರಿಗೆ ಸಂದೇಶ ರವಾನಿಸಿದೆ ಎಂಬ ಸುದ್ದಿ ಶನಿವಾರ (ಜೂ.15) ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಯಿತು.</p>.<p>ಆದರೆ, ಗುಪ್ತಚರ ಇಲಾಖೆಯಿಂದ ಅಂತಹ ನಿರ್ದಿಷ್ಟ ಎಚ್ಚರಿಕೆ ಬಂದಿರಲಿಲ್ಲ. ಅದೇ ದಿನ ನಾಗರಿಕರೊಬ್ಬರು ಕರೆ ಮಾಡಿ ಯಾರೊ ನ್ಯಾನೊ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದ್ದರು. ಆ ಮಾಹಿತಿ ಆಧರಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಮಂಗಳವಾರ ಬೆಳಿಗ್ಗೆ ಆ ಕಾರನ್ನು ಪತ್ತೆ ಮಾಡಲಾಗಿದೆ. ಆದರೆ, ಅದರಲ್ಲಿದ್ದ ಇಬ್ಬರೂ ಗುಜರಾತ್ ಮೂಲದ ವ್ಯಾಪಾರಿಗಳಾಗಿದ್ದು, ಅವರು ಅಮಾಯಕರು' ಎಂದರು.<br /> <br /> `ಆ ಇಬ್ಬರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಅವರು ತಮ್ಮನ್ನು ವ್ಯಾಪಾರಿಗಳೆಂದು ಹೇಳಿಕೊಂಡರು. ಅಲ್ಲದೇ, ಮೊಬೈಲ್, ಲ್ಯಾಪ್ಟಾಪ್ಗಳನ್ನು ಪರಿಶೀಲಿಸಿದಾಗ ವ್ಯಾಪಾರದ ಉದ್ದೇಶದಿಂದಲೇ ಅವರು ನಗರಕ್ಕೆ ಬಂದಿರುವುದು ಖಚಿತವಾಯಿತು' ಎಂದು ಮಿರ್ಜಿ ಹೇಳಿದರು.<br /> <br /> `ಮಾದ್ಯಮಗಳಲ್ಲಿ ಪ್ರಸಾರವಾದ ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ನ್ಯಾನೊ ಕಾರು (ಜಿಜೆ 05 ಸಿಆರ್ 53) ಬೆಳಿಗ್ಗೆ 11 ಗಂಟೆ ಸುಮಾರಿಗೆ ನಾಯಂಡಹಳ್ಳಿ ವೃತ್ತ ಮಾರ್ಗವಾಗಿ ಚಲಿಸಿದೆ. ಆ ಕಾರಿನ ನೋಂದಣಿ ಸಂಖ್ಯೆ ಗಮನಿಸಿ ಎಚ್ಚೆತ್ತುಕೊಂಡು ಸಿಬ್ಬಂದಿ, ಕೂಡಲೇ ಬ್ಯಾಟರಾಯನಪುರ ಸಂಚಾರ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು.</p>.<p>ಠಾಣೆಯ ಸಿಬ್ಬಂದಿ ಕೂಡಲೇ ಬಿಎಚ್ಇಎಲ್ ವೃತ್ತದಲ್ಲಿ ಬ್ಯಾರಿಕೇಡ್ಗಳಿಂದ ರಸ್ತೆಯನ್ನು ಬ್ಲಾಕ್ ಮಾಡಿ, ನ್ಯಾನೊ ಕಾರನ್ನು ವಶಕ್ಕೆ ಪಡೆದರು' ಎಂದು ಹಿರಿಯ ಅಧಿಕಾರಿಗಳು `ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ನ್ಯಾನೊ ಕಾರಿನಲ್ಲಿ ನಗರಕ್ಕೆ ಬಂದವರು ಶಂಕಿತ ಉಗ್ರರಲ್ಲ. ಅವರು ಗುಜರಾತ್ ಮೂಲದ ವ್ಯಾಪಾರಿಗಳು' ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಸ್ಪಷ್ಟಪಡಿಸಿದ್ದಾರೆ.<br /> <br /> ನಗರದ ಕಮಿಷನರ್ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನ್ಯಾನೊ ಕಾರಿನಲ್ಲಿ ಶಂಕಿತ ಉಗ್ರರು ನಗರಕ್ಕೆ ನುಸುಳಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯು ಬೆಂಗಳೂರು ಪೊಲೀಸರಿಗೆ ಸಂದೇಶ ರವಾನಿಸಿದೆ ಎಂಬ ಸುದ್ದಿ ಶನಿವಾರ (ಜೂ.15) ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಯಿತು.</p>.<p>ಆದರೆ, ಗುಪ್ತಚರ ಇಲಾಖೆಯಿಂದ ಅಂತಹ ನಿರ್ದಿಷ್ಟ ಎಚ್ಚರಿಕೆ ಬಂದಿರಲಿಲ್ಲ. ಅದೇ ದಿನ ನಾಗರಿಕರೊಬ್ಬರು ಕರೆ ಮಾಡಿ ಯಾರೊ ನ್ಯಾನೊ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದ್ದರು. ಆ ಮಾಹಿತಿ ಆಧರಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಮಂಗಳವಾರ ಬೆಳಿಗ್ಗೆ ಆ ಕಾರನ್ನು ಪತ್ತೆ ಮಾಡಲಾಗಿದೆ. ಆದರೆ, ಅದರಲ್ಲಿದ್ದ ಇಬ್ಬರೂ ಗುಜರಾತ್ ಮೂಲದ ವ್ಯಾಪಾರಿಗಳಾಗಿದ್ದು, ಅವರು ಅಮಾಯಕರು' ಎಂದರು.<br /> <br /> `ಆ ಇಬ್ಬರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಅವರು ತಮ್ಮನ್ನು ವ್ಯಾಪಾರಿಗಳೆಂದು ಹೇಳಿಕೊಂಡರು. ಅಲ್ಲದೇ, ಮೊಬೈಲ್, ಲ್ಯಾಪ್ಟಾಪ್ಗಳನ್ನು ಪರಿಶೀಲಿಸಿದಾಗ ವ್ಯಾಪಾರದ ಉದ್ದೇಶದಿಂದಲೇ ಅವರು ನಗರಕ್ಕೆ ಬಂದಿರುವುದು ಖಚಿತವಾಯಿತು' ಎಂದು ಮಿರ್ಜಿ ಹೇಳಿದರು.<br /> <br /> `ಮಾದ್ಯಮಗಳಲ್ಲಿ ಪ್ರಸಾರವಾದ ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ನ್ಯಾನೊ ಕಾರು (ಜಿಜೆ 05 ಸಿಆರ್ 53) ಬೆಳಿಗ್ಗೆ 11 ಗಂಟೆ ಸುಮಾರಿಗೆ ನಾಯಂಡಹಳ್ಳಿ ವೃತ್ತ ಮಾರ್ಗವಾಗಿ ಚಲಿಸಿದೆ. ಆ ಕಾರಿನ ನೋಂದಣಿ ಸಂಖ್ಯೆ ಗಮನಿಸಿ ಎಚ್ಚೆತ್ತುಕೊಂಡು ಸಿಬ್ಬಂದಿ, ಕೂಡಲೇ ಬ್ಯಾಟರಾಯನಪುರ ಸಂಚಾರ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು.</p>.<p>ಠಾಣೆಯ ಸಿಬ್ಬಂದಿ ಕೂಡಲೇ ಬಿಎಚ್ಇಎಲ್ ವೃತ್ತದಲ್ಲಿ ಬ್ಯಾರಿಕೇಡ್ಗಳಿಂದ ರಸ್ತೆಯನ್ನು ಬ್ಲಾಕ್ ಮಾಡಿ, ನ್ಯಾನೊ ಕಾರನ್ನು ವಶಕ್ಕೆ ಪಡೆದರು' ಎಂದು ಹಿರಿಯ ಅಧಿಕಾರಿಗಳು `ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>