<p>ಹಿರೇಕೆರೂರ: ತಾಲ್ಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಆಗುತ್ತಿಲ್ಲ, ಅರ್ಹರಿಗೆ ಪಡಿತರ ಕಾರ್ಡ್ ದೊರಕಿಲ್ಲ ಎಂದು ಆರೋಪಿಸಿ ಸ್ಥಳೀಯ ರೈತಸಂಘದ ಕಾರ್ಯಕರ್ತರು ಶುಕ್ರವಾರ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಗ್ರಾಮದ ರೈತಸಂಘದ (ಪ್ರೊ.ನಂಜುಂಡಸ್ವಾಮಿ ಬಣ) ಅಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ, `ಗ್ರಾಮದಲ್ಲಿ ಅರ್ಹ ಬಡವರಿಗೆ ಪಡಿತರ ಚೀಟಿ ದೊರಕಿಲ್ಲ, ಕಡು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದೆ. ಪಡಿತರ ಸಕಾಲದಲ್ಲಿ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ, ಇದರಿಂದ ಬಡವರು ಮತ್ತು ದುರ್ಬಲ ವರ್ಗದ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾ~ೆ ಎಂದು ಆರೋಪಿಸಿದರು.<br /> <br /> ಅರ್ಹರಿಗೆ ಪಡಿತರ ವಿತರಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರತಿ ಪಡಿತರ ಕಾರ್ಡುದಾರರಿಂದ ಸಂಗ್ರಹಿಸಿರುವ ತಲಾ ರೂ.100ನ್ನು ಕೂಡಲೇ ವಾಪಸು ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ರೈತ ಮುಖಂಡರಾದ ಆರ್.ಎನ್. ಗಾಳೇರ, ಶಿವಯೋಗೆಪ್ಪ ದೀವಿಗಿಹಳ್ಳಿ, ಹನುಮಂತಪ್ಪ ಕರಿಯಣ್ಣನವರ, ಬಸವರಾಜ ದೀವಿಗಿಹಳ್ಳಿ, ಹನುಮಂತಪ್ಪ ಮೇಗಳಮನಿ, ಕೆ.ಸಿ.ಹಾರೋಗೊಪ್ಪ, ಮಂಜಪ್ಪ ಉಪ್ಪಾರ, ಬಸವರಾಜ ಎಲಿಗಾರ ಮೊದಲಾದವರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರೇಕೆರೂರ: ತಾಲ್ಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಆಗುತ್ತಿಲ್ಲ, ಅರ್ಹರಿಗೆ ಪಡಿತರ ಕಾರ್ಡ್ ದೊರಕಿಲ್ಲ ಎಂದು ಆರೋಪಿಸಿ ಸ್ಥಳೀಯ ರೈತಸಂಘದ ಕಾರ್ಯಕರ್ತರು ಶುಕ್ರವಾರ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಗ್ರಾಮದ ರೈತಸಂಘದ (ಪ್ರೊ.ನಂಜುಂಡಸ್ವಾಮಿ ಬಣ) ಅಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ, `ಗ್ರಾಮದಲ್ಲಿ ಅರ್ಹ ಬಡವರಿಗೆ ಪಡಿತರ ಚೀಟಿ ದೊರಕಿಲ್ಲ, ಕಡು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದೆ. ಪಡಿತರ ಸಕಾಲದಲ್ಲಿ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ, ಇದರಿಂದ ಬಡವರು ಮತ್ತು ದುರ್ಬಲ ವರ್ಗದ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾ~ೆ ಎಂದು ಆರೋಪಿಸಿದರು.<br /> <br /> ಅರ್ಹರಿಗೆ ಪಡಿತರ ವಿತರಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರತಿ ಪಡಿತರ ಕಾರ್ಡುದಾರರಿಂದ ಸಂಗ್ರಹಿಸಿರುವ ತಲಾ ರೂ.100ನ್ನು ಕೂಡಲೇ ವಾಪಸು ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ರೈತ ಮುಖಂಡರಾದ ಆರ್.ಎನ್. ಗಾಳೇರ, ಶಿವಯೋಗೆಪ್ಪ ದೀವಿಗಿಹಳ್ಳಿ, ಹನುಮಂತಪ್ಪ ಕರಿಯಣ್ಣನವರ, ಬಸವರಾಜ ದೀವಿಗಿಹಳ್ಳಿ, ಹನುಮಂತಪ್ಪ ಮೇಗಳಮನಿ, ಕೆ.ಸಿ.ಹಾರೋಗೊಪ್ಪ, ಮಂಜಪ್ಪ ಉಪ್ಪಾರ, ಬಸವರಾಜ ಎಲಿಗಾರ ಮೊದಲಾದವರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>