<p><strong>ನವದೆಹಲಿ (ಪಿಟಿಐ):</strong> `ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನಾನು ದೇಶದ ಕಾನೂನಿಗೆ ತಲೆಬಾಗುತ್ತೇನೆ' ಎಂದು ಸ್ಪಾಟ್ ಫಿಕ್ಸಿಂಗ್ ಹಗರಣದ ಆರೋಪಿ ಶ್ರೀಶಾಂತ್ ಹೇಳಿದ್ದಾರೆ.<br /> <br /> `ಜೈಲಿನ ಅನುಭವ ಸಾಕಷ್ಟು ಪಾಠಗಳನ್ನು ಕಲಿಸಿದೆ' ಎಂದೂ ಅವರು ತಿಹಾರ್ ಜೈಲಿನಿಂದ ಮಂಗಳವಾರ ಬಿಡುಗಡೆಗೊಂಡ ನಂತರ ಪತ್ರಕರ್ತರ ಜತೆಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.<br /> <br /> ಸೋಮವಾರ ಜಾಮೀನು ಸಿಕ್ಕಿದ್ದರಿಂದ ಆಟಗಾರರಾದ ಶ್ರೀಶಾಂತ್, ಅಂಕಿತ್ ಅವರಲ್ಲದೆ, 17 ಮಂದಿ ಬುಕ್ಕಿಗಳು ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು.<br /> <br /> <strong>ಸ್ಪಾಟ್ ಫಿಕ್ಸಿಂಗ್: ಮತ್ತಿಬ್ಬರಿಗೆ ಜಾಮೀನು<br /> ನವದೆಹಲಿ (ಪಿಟಿಐ</strong>): ಸ್ಪಾಟ್ ಫಿಕ್ಸಿಂಗ್ ಹಗರಣ ಪ್ರಕರಣದ ಮತ್ತಿಬ್ಬರು ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.<br /> <br /> ಬುಕ್ಕಿಗಳಾದ ರಾಕೇಶ್ ಅಲಿಯಾಸ್ ರಾಕಿ ಹಾಗೂ ಅಮಿತ್ ಕುಮಾರ್ ಸಿಂಗ್ ಅವರಿಗೆ ಜಾಮೀನು ನೀಡಿದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶರು ಇಬ್ಬರು ಆರೋಪಿಗಳು ತಲಾ 50 ಸಾವಿರ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಒದಗಿಸುವಂತೆ ಆದೇಶಿಸಿದ್ದಾರೆ.<br /> <br /> `ಇತರ 18 ಮಂದಿ ಸಹ ಆರೋಪಿಗಳಿಗೂ ಈಗಾಗಲೇ ಜಾಮೀನು ನೀಡಲಾಗಿದ್ದು, ಆ ಆರೋಪಗಳ ಸ್ವರೂಪ ಮತ್ತು ಅರ್ಜಿದಾರರ ಪಾತ್ರಗಳನ್ನು ಹೋಲಿಕೆ ಮಾಡುವ ಮೂಲಕ ರಾಕೇಶ್ ಹಾಗೂ ಅಮಿತ್ ಕುಮಾರ್ಗೆ ಜಾಮೀನು ನೀಡಲಾಗಿದೆ' ಎಂದು ನ್ಯಾಯಾಲಯ ಹೇಳಿದೆ.<br /> <br /> <strong>ಪೊಲೀಸ್ ವಶಕ್ಕೆ ಅಗರ್ವಾಲ್ (ಚೆನ್ನೈ ವರದಿ</strong>): ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಹೋಟೆಲ್ ಉದ್ಯಮಿ ವಿಕ್ರಮ್ ಅಗರ್ವಾಲ್ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.<br /> <br /> ಸೋಮವಾರ ಅಗರ್ವಾಲ್ ಅವರನ್ನು ಬಂಧಿಸಿದ್ದ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ತಮಿಳುನಾಡು ಅಪರಾಧ ವಿಭಾಗದ ಸಿಐಡಿ ಪೊಲೀಸರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> `ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನಾನು ದೇಶದ ಕಾನೂನಿಗೆ ತಲೆಬಾಗುತ್ತೇನೆ' ಎಂದು ಸ್ಪಾಟ್ ಫಿಕ್ಸಿಂಗ್ ಹಗರಣದ ಆರೋಪಿ ಶ್ರೀಶಾಂತ್ ಹೇಳಿದ್ದಾರೆ.<br /> <br /> `ಜೈಲಿನ ಅನುಭವ ಸಾಕಷ್ಟು ಪಾಠಗಳನ್ನು ಕಲಿಸಿದೆ' ಎಂದೂ ಅವರು ತಿಹಾರ್ ಜೈಲಿನಿಂದ ಮಂಗಳವಾರ ಬಿಡುಗಡೆಗೊಂಡ ನಂತರ ಪತ್ರಕರ್ತರ ಜತೆಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.<br /> <br /> ಸೋಮವಾರ ಜಾಮೀನು ಸಿಕ್ಕಿದ್ದರಿಂದ ಆಟಗಾರರಾದ ಶ್ರೀಶಾಂತ್, ಅಂಕಿತ್ ಅವರಲ್ಲದೆ, 17 ಮಂದಿ ಬುಕ್ಕಿಗಳು ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು.<br /> <br /> <strong>ಸ್ಪಾಟ್ ಫಿಕ್ಸಿಂಗ್: ಮತ್ತಿಬ್ಬರಿಗೆ ಜಾಮೀನು<br /> ನವದೆಹಲಿ (ಪಿಟಿಐ</strong>): ಸ್ಪಾಟ್ ಫಿಕ್ಸಿಂಗ್ ಹಗರಣ ಪ್ರಕರಣದ ಮತ್ತಿಬ್ಬರು ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.<br /> <br /> ಬುಕ್ಕಿಗಳಾದ ರಾಕೇಶ್ ಅಲಿಯಾಸ್ ರಾಕಿ ಹಾಗೂ ಅಮಿತ್ ಕುಮಾರ್ ಸಿಂಗ್ ಅವರಿಗೆ ಜಾಮೀನು ನೀಡಿದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶರು ಇಬ್ಬರು ಆರೋಪಿಗಳು ತಲಾ 50 ಸಾವಿರ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಒದಗಿಸುವಂತೆ ಆದೇಶಿಸಿದ್ದಾರೆ.<br /> <br /> `ಇತರ 18 ಮಂದಿ ಸಹ ಆರೋಪಿಗಳಿಗೂ ಈಗಾಗಲೇ ಜಾಮೀನು ನೀಡಲಾಗಿದ್ದು, ಆ ಆರೋಪಗಳ ಸ್ವರೂಪ ಮತ್ತು ಅರ್ಜಿದಾರರ ಪಾತ್ರಗಳನ್ನು ಹೋಲಿಕೆ ಮಾಡುವ ಮೂಲಕ ರಾಕೇಶ್ ಹಾಗೂ ಅಮಿತ್ ಕುಮಾರ್ಗೆ ಜಾಮೀನು ನೀಡಲಾಗಿದೆ' ಎಂದು ನ್ಯಾಯಾಲಯ ಹೇಳಿದೆ.<br /> <br /> <strong>ಪೊಲೀಸ್ ವಶಕ್ಕೆ ಅಗರ್ವಾಲ್ (ಚೆನ್ನೈ ವರದಿ</strong>): ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಹೋಟೆಲ್ ಉದ್ಯಮಿ ವಿಕ್ರಮ್ ಅಗರ್ವಾಲ್ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.<br /> <br /> ಸೋಮವಾರ ಅಗರ್ವಾಲ್ ಅವರನ್ನು ಬಂಧಿಸಿದ್ದ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ತಮಿಳುನಾಡು ಅಪರಾಧ ವಿಭಾಗದ ಸಿಐಡಿ ಪೊಲೀಸರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>