<p>ಚಿಕ್ಕಮಗಳೂರು: ನ್ಯಾಯಾಂಗ ಇಲಾಖೆ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಇಲಾಖೆಯ ಪ್ರತಿಯೊಬ್ಬ ನೌಕರರ ಪಾತ್ರವೂ ಮಹತ್ವಪೂರ್ಣವಾದುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆ ಆಡಳಿತಾತ್ಮಕ ನ್ಯಾಯಮೂರ್ತಿ ಸುಭಾಷ್ ಬಿ.ಆದಿ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಭಾನುವಾರ ನಡೆದ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘದ ಸ್ನೇಹ ಸಂಗಮ ಕಾರ್ಯಕ್ರಮ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ನ್ಯಾಯಾಲಯ ಒಂದು ಕುಟುಂಬ ಇದ್ದಂತೆ. ಇಲ್ಲಿ ನೌಕರರೂ ಅವಿಭಾಜ್ಯ ಅಂಗ. ತ್ವರಿತ ನ್ಯಾಯ ಒದಗಿಸಲು ನೌಕರರ ಪಾತ್ರವೂ ಮುಖ್ಯ. ನ್ಯಾಯಾಧೀಶರು, ವಕೀಲರಷ್ಟೇ ಸಮಪಾಲು ನೌಕರರದ್ದು ಇರುತ್ತದೆ ಎಂದರು.<br /> <br /> ನಿವೃತ್ತರಾದ ನೌಕರರು ಕೀಳರಿಮೆ ಇಟ್ಟುಕೊಳ್ಳಬಾರದು. ಆಗಾಗ ನ್ಯಾಯಾಲಯಕ್ಕೆ ಬಂದು ಕಿರಿಯ ನೌಕರರಿಗೆ ಸಲಹೆ, ಸಹಕಾರ ನೀಡಬೇಕು. ನಿವೃತ್ತರಿಗೆ ಆರ್ಥಿಕ ಹಾಗೂ ನೈತಿಕವಾಗಿ ವೃತ್ತಿನಿರತರು ಬೆಂಬಲ ನೀಡಬೇಕು~ ಎಂದರು. <br /> <br /> ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ್.ಎ ಪಾಟೀಲ್ ಮಾತನಾಡಿ, ಸಂಘಟನೆಯಿಂದ ಎಲ್ಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ನೌಕರರಲ್ಲಿ ನಿಸ್ವಾರ್ಥ ಸೇವಾ ಮನೋಭಾವ ಇರಬೇಕು. ಕಕ್ಷಿಗಾರರ ಕೆಲಸವನ್ನು ಆದಷ್ಟು ಶೀಘ್ರ ಮಾಡಿಕೊಡುವುದರಿಂದ ಅವರಲ್ಲಿಯೂ ಇಲಾಖೆ, ನ್ಯಾಯಾಲಯದ ಮೇಲೆ ಒಳ್ಳೆಯ ಭಾವನೆ ಮೂಡುತ್ತದೆ ಎಂದರು.<br /> <br /> ಭಾರತೀಯ ವಕೀಲರ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ಬಿ.ಎಸ್.ಪ್ರಭಾಕರ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಮಹೇಶ್ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಮಂಜುನಾಥ್ ಇದ್ದರು. 16 ಮಂದಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನ್ಯಾಯಾಂಗ ಇಲಾಖೆ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಇಲಾಖೆಯ ಪ್ರತಿಯೊಬ್ಬ ನೌಕರರ ಪಾತ್ರವೂ ಮಹತ್ವಪೂರ್ಣವಾದುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆ ಆಡಳಿತಾತ್ಮಕ ನ್ಯಾಯಮೂರ್ತಿ ಸುಭಾಷ್ ಬಿ.ಆದಿ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಭಾನುವಾರ ನಡೆದ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘದ ಸ್ನೇಹ ಸಂಗಮ ಕಾರ್ಯಕ್ರಮ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ನ್ಯಾಯಾಲಯ ಒಂದು ಕುಟುಂಬ ಇದ್ದಂತೆ. ಇಲ್ಲಿ ನೌಕರರೂ ಅವಿಭಾಜ್ಯ ಅಂಗ. ತ್ವರಿತ ನ್ಯಾಯ ಒದಗಿಸಲು ನೌಕರರ ಪಾತ್ರವೂ ಮುಖ್ಯ. ನ್ಯಾಯಾಧೀಶರು, ವಕೀಲರಷ್ಟೇ ಸಮಪಾಲು ನೌಕರರದ್ದು ಇರುತ್ತದೆ ಎಂದರು.<br /> <br /> ನಿವೃತ್ತರಾದ ನೌಕರರು ಕೀಳರಿಮೆ ಇಟ್ಟುಕೊಳ್ಳಬಾರದು. ಆಗಾಗ ನ್ಯಾಯಾಲಯಕ್ಕೆ ಬಂದು ಕಿರಿಯ ನೌಕರರಿಗೆ ಸಲಹೆ, ಸಹಕಾರ ನೀಡಬೇಕು. ನಿವೃತ್ತರಿಗೆ ಆರ್ಥಿಕ ಹಾಗೂ ನೈತಿಕವಾಗಿ ವೃತ್ತಿನಿರತರು ಬೆಂಬಲ ನೀಡಬೇಕು~ ಎಂದರು. <br /> <br /> ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ್.ಎ ಪಾಟೀಲ್ ಮಾತನಾಡಿ, ಸಂಘಟನೆಯಿಂದ ಎಲ್ಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ನೌಕರರಲ್ಲಿ ನಿಸ್ವಾರ್ಥ ಸೇವಾ ಮನೋಭಾವ ಇರಬೇಕು. ಕಕ್ಷಿಗಾರರ ಕೆಲಸವನ್ನು ಆದಷ್ಟು ಶೀಘ್ರ ಮಾಡಿಕೊಡುವುದರಿಂದ ಅವರಲ್ಲಿಯೂ ಇಲಾಖೆ, ನ್ಯಾಯಾಲಯದ ಮೇಲೆ ಒಳ್ಳೆಯ ಭಾವನೆ ಮೂಡುತ್ತದೆ ಎಂದರು.<br /> <br /> ಭಾರತೀಯ ವಕೀಲರ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ಬಿ.ಎಸ್.ಪ್ರಭಾಕರ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಮಹೇಶ್ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಮಂಜುನಾಥ್ ಇದ್ದರು. 16 ಮಂದಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>