<p><strong>ಬೆಂಗಳೂರು: </strong>ನಗರದ ಎಚ್ಎಸ್ಆರ್ ಬಡಾವಣೆಯ ಆಟದ ಮೈದಾನದಲ್ಲಿ ನ್ಯಾಯಾಧೀಶರ ಕಾಲೋನಿ ನಿರ್ಮಿಸಲು ಕಾಮಗಾರಿ ಆರಂಭಿಸಿದ್ದ ಗುತ್ತಿಗೆದಾರರು ವೆಚ್ಚ ಮಾಡಿರುವ ಪೂರ್ಣ ಮೊತ್ತವನ್ನು ಎರಡು ತಿಂಗಳೊಳಗೆ ಸಂದಾಯ ಮಾಡುವಂತೆ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಆಟದ ಮೈದಾನದಲ್ಲಿ ನ್ಯಾಯಾಧೀಶರ ಕಾಲೋನಿ ನಿರ್ಮಾಣ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಮತ್ತು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ವಿಭಾಗೀಯ ಪೀಠ, ಗುತ್ತಿಗೆದಾರರು ವೆಚ್ಚ ಮಾಡಿರುವ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿತು.</p>.<p>ಆಟದ ಮೈದಾನದಲ್ಲಿ ನ್ಯಾಯಾಧೀಶರ ಕಾಲೋನಿ ನಿರ್ಮಾಣಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಗ್ರೊ ಕೈಗಾರಿಕಾ ನಿಗಮದ ಆವರಣದಲ್ಲಿ 16 ವಸತಿ ಗೃಹಗಳನ್ನು ನಿರ್ಮಿಸಿ, ಹಸ್ತಾಂತರಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಎಸ್ಆರ್ ಬಡಾವಣೆ ಆಟದ ಮೈದಾನದಲ್ಲಿ ಕಾಮಗಾರಿ ಕೈಗೊಂಡಿದ್ದ ಗುತ್ತಿಗೆದಾರರಿಗೆ ಬಾಕಿ ಪಾವತಿಗೆ ಆದೇಶ ನೀಡಲಾಗಿದೆ.</p>.<p><strong>ಪ್ರಕರಣ ಬಾಕಿ: </strong>ಈ ಮಧ್ಯೆ 16 ವಸತಿ ಗೃಹಗಳ ಹಸ್ತಾಂತರ ಆಗುವವರೆಗೆ ಪ್ರಕರಣವನ್ನು ಇತ್ಯರ್ಥಗೊಳಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸ್ಪಷ್ಟವಾಗಿ ಹೇಳಿದರು. ವಸತಿ ಗೃಹಗಳು ನ್ಯಾಯಾಂಗ ಇಲಾಖೆಯ ಕೈಸೇರಿದ ಬಳಿಕವೇ ಪ್ರಕರಣವನ್ನು ಮುಕ್ತಾಯಗೊಳಿಸಲಾಗುವುದು ಎಂದು ಮಂಗಳವಾರದ ವಿಚಾರಣೆ ವೇಳೆ ತಿಳಿಸಿದರು.</p>.<p>‘ಲೋಟ ಮತ್ತು ತುಟಿಯ ನಡುವೆ ವ್ಯತ್ಯಾಸ (ಸ್ಲಿಪ್ ಬಿಟ್ವೀನ್ ಕಪ್ ಅಂಡ್ ಲಿಪ್) ಆಗುವುದು ಬೇಡ. ಅಂತಹ ಬೆಳವಣಿಗೆಯನ್ನು ನಾವು ಬಯಸುವುದೂ ಇಲ್ಲ’ ಎಂದು ನ್ಯಾ.ಕೇಹರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಎಚ್ಎಸ್ಆರ್ ಬಡಾವಣೆಯ ಆಟದ ಮೈದಾನದಲ್ಲಿ ನ್ಯಾಯಾಧೀಶರ ಕಾಲೋನಿ ನಿರ್ಮಿಸಲು ಕಾಮಗಾರಿ ಆರಂಭಿಸಿದ್ದ ಗುತ್ತಿಗೆದಾರರು ವೆಚ್ಚ ಮಾಡಿರುವ ಪೂರ್ಣ ಮೊತ್ತವನ್ನು ಎರಡು ತಿಂಗಳೊಳಗೆ ಸಂದಾಯ ಮಾಡುವಂತೆ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಆಟದ ಮೈದಾನದಲ್ಲಿ ನ್ಯಾಯಾಧೀಶರ ಕಾಲೋನಿ ನಿರ್ಮಾಣ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಮತ್ತು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ವಿಭಾಗೀಯ ಪೀಠ, ಗುತ್ತಿಗೆದಾರರು ವೆಚ್ಚ ಮಾಡಿರುವ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿತು.</p>.<p>ಆಟದ ಮೈದಾನದಲ್ಲಿ ನ್ಯಾಯಾಧೀಶರ ಕಾಲೋನಿ ನಿರ್ಮಾಣಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಗ್ರೊ ಕೈಗಾರಿಕಾ ನಿಗಮದ ಆವರಣದಲ್ಲಿ 16 ವಸತಿ ಗೃಹಗಳನ್ನು ನಿರ್ಮಿಸಿ, ಹಸ್ತಾಂತರಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಎಸ್ಆರ್ ಬಡಾವಣೆ ಆಟದ ಮೈದಾನದಲ್ಲಿ ಕಾಮಗಾರಿ ಕೈಗೊಂಡಿದ್ದ ಗುತ್ತಿಗೆದಾರರಿಗೆ ಬಾಕಿ ಪಾವತಿಗೆ ಆದೇಶ ನೀಡಲಾಗಿದೆ.</p>.<p><strong>ಪ್ರಕರಣ ಬಾಕಿ: </strong>ಈ ಮಧ್ಯೆ 16 ವಸತಿ ಗೃಹಗಳ ಹಸ್ತಾಂತರ ಆಗುವವರೆಗೆ ಪ್ರಕರಣವನ್ನು ಇತ್ಯರ್ಥಗೊಳಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸ್ಪಷ್ಟವಾಗಿ ಹೇಳಿದರು. ವಸತಿ ಗೃಹಗಳು ನ್ಯಾಯಾಂಗ ಇಲಾಖೆಯ ಕೈಸೇರಿದ ಬಳಿಕವೇ ಪ್ರಕರಣವನ್ನು ಮುಕ್ತಾಯಗೊಳಿಸಲಾಗುವುದು ಎಂದು ಮಂಗಳವಾರದ ವಿಚಾರಣೆ ವೇಳೆ ತಿಳಿಸಿದರು.</p>.<p>‘ಲೋಟ ಮತ್ತು ತುಟಿಯ ನಡುವೆ ವ್ಯತ್ಯಾಸ (ಸ್ಲಿಪ್ ಬಿಟ್ವೀನ್ ಕಪ್ ಅಂಡ್ ಲಿಪ್) ಆಗುವುದು ಬೇಡ. ಅಂತಹ ಬೆಳವಣಿಗೆಯನ್ನು ನಾವು ಬಯಸುವುದೂ ಇಲ್ಲ’ ಎಂದು ನ್ಯಾ.ಕೇಹರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>