<p><strong>ಬಳ್ಳಾರಿ: </strong>ಸಿಬಿಐ ಬಂಧನದಲ್ಲಿರುವ ಅರಣ್ಯಾಧಿಕಾರಿ ಎಸ್.ಮುತ್ತಯ್ಯ ಅವರನ್ನು ನಾಲ್ಕು ವರ್ಷಗಳ ಹಿಂದೆ ಬಳ್ಳಾರಿಯಲ್ಲಿ ಸಂಭವಿಸಿದ ಪ್ರಕರಣದ ವಿಚಾರಣೆಗಾಗಿ ಗುರುವಾರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.<br /> <br /> ಬುಧವಾರ ರಾತ್ರಿಯೇ ಮುತ್ತಯ್ಯ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದ ಪೊಲೀಸರು, ಗುರುವಾರ ಮುಂಜಾನೆ 11ಕ್ಕೆ ಜಿಲ್ಲಾ ನ್ಯಾಯಾಧೀಶೆ ಎಂ.ಜಿ. ಉಮಾ ಅವರ ಮುಂದೆ ಹಾಜರುಪಡಿಸಿದರು. ಮುತ್ತಯ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಬಾಡಿ ವಾರೆಂಟ್ ಜಾರಿಯಾಗಿತ್ತು.<br /> <br /> ಮಾಜಿ ಸಚಿವ ಎಂ.ದಿವಾಕರ ಬಾಬು, ತುಮುಟಿ ಮೈನ್ಸ್ನ ಟಪಾಲ್ ಗಣೇಶ್ ಸೇರಿದಂತೆ ಒಟ್ಟು 29 ಜನರ ವಿರುದ್ಧ, ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಅತಿಕ್ರಮ ಪ್ರವೇಶ, ಪೀಠೋಪಕರಣ ಧ್ವಂಸ, ಹಲ್ಲೆ ಯತ್ನ ಹಾಗೂ ಪ್ರಾಣ ಬೆದರಿಕೆ ಆರೋಪ ಕುರಿತು ಮುತ್ತಯ್ಯ ದೂರು ನೀಡಿದ್ದರು.<br /> <br /> ಜಿಲ್ಲೆಯ ಸಂಡೂರು ತಾಲ್ಲೂಕಿನ ತುಮಟಿ, ವಿಠಲಾಪುರ ಬಳಿಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ 2008ರ ಅಕ್ಟೋಬರ್ 15ರಂದು ಮಧ್ಯಾಹ್ನ ಅರಣ್ಯ ಇಲಾಖೆ ಕಚೇರಿ ಮುಂದೆ ಮೇಲ್ಕಂಡ ಆರೋಪಿಗಳು ಪ್ರತಿಭಟನೆ ನಡೆಸಿದ್ದರು.<br /> <br /> `ಪ್ರತಿಭಟನೆ ವೇಳೆ ಈ ಎಲ್ಲ 29 ಆರೋಪಿಗಳು ಕಚೇರಿ ಅತಿಕ್ರಮ ಪ್ರವೇಶ ಮಾಡಿ, ಒಳಗೆ ನಡೆಯುತ್ತಿದ್ದ ಸಭೆಗೆ ಅಡ್ಡಿಪಡಿಸಿದ್ದಲ್ಲದೆ, ಸಭೆಯಲ್ಲಿದ್ದ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಪ್ರಾಣ ಬೆದರಿಕೆಯನ್ನೂ ಹಾಕಿದ್ದರು~ ಎಂದು ಆರೋಪಿಸಿ ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಮುತ್ತಯ್ಯ ಅವರು ಬ್ರೂಸ್ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಾಕರ ಬಾಬು ಮತ್ತಿತರರನ್ನು ಬಂಧಿಸಲಾಗಿತ್ತು.<br /> <br /> ಆರೋಪಿಗಳೆಲ್ಲ ನ್ಯಾಯಾಲಯಕ್ಕೆ ಹಾಜರಾಗಿದ್ದು, ದೂರು ನೀಡಿರುವ ಮುತ್ತಯ್ಯ ಅವರನ್ನು ಸಾಕ್ಷ್ಯ ನುಡಿಯುವಂತೆ ಸಮನ್ಸ್ ಜಾರಿಗೊಳಿಸಿದ್ದರಿಂದ ಅವರನ್ನು ಬಳ್ಳಾರಿಗೆ ಕರೆತರಲಾಗಿದೆ.<br /> <br /> ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶರ ಮುಂದೆ ಮುತ್ತಯ್ಯ ಘಟನೆ ಕುರಿತು ವಿವರ ನೀಡಿದರು. ನಂತರ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಲಾಯಿತು. 25 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅರಣ್ಯಾಧಿಕಾರಿ ಶುಕ್ಲಾ ಒಳಗೊಂಡಂತೆ 10 ಅಧಿಕಾರಿಗಳು ಈ ಹಿಂದೆಯೇ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.<br /> <br /> ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಗಣಿ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಇತ್ತೀಚೆಗೆ ಮುತ್ತಯ್ಯ ಅವರನ್ನು ಬಂಧಿಸಿದೆ. <br /> <br /> ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಅವರನ್ನು 18ರ ವರೆಗೆ ಬಳ್ಳಾರಿಯ ಕಾರಾಗೃಹದಲ್ಲೇ ಇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಸಿಬಿಐ ಬಂಧನದಲ್ಲಿರುವ ಅರಣ್ಯಾಧಿಕಾರಿ ಎಸ್.ಮುತ್ತಯ್ಯ ಅವರನ್ನು ನಾಲ್ಕು ವರ್ಷಗಳ ಹಿಂದೆ ಬಳ್ಳಾರಿಯಲ್ಲಿ ಸಂಭವಿಸಿದ ಪ್ರಕರಣದ ವಿಚಾರಣೆಗಾಗಿ ಗುರುವಾರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.<br /> <br /> ಬುಧವಾರ ರಾತ್ರಿಯೇ ಮುತ್ತಯ್ಯ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದ ಪೊಲೀಸರು, ಗುರುವಾರ ಮುಂಜಾನೆ 11ಕ್ಕೆ ಜಿಲ್ಲಾ ನ್ಯಾಯಾಧೀಶೆ ಎಂ.ಜಿ. ಉಮಾ ಅವರ ಮುಂದೆ ಹಾಜರುಪಡಿಸಿದರು. ಮುತ್ತಯ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಬಾಡಿ ವಾರೆಂಟ್ ಜಾರಿಯಾಗಿತ್ತು.<br /> <br /> ಮಾಜಿ ಸಚಿವ ಎಂ.ದಿವಾಕರ ಬಾಬು, ತುಮುಟಿ ಮೈನ್ಸ್ನ ಟಪಾಲ್ ಗಣೇಶ್ ಸೇರಿದಂತೆ ಒಟ್ಟು 29 ಜನರ ವಿರುದ್ಧ, ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಅತಿಕ್ರಮ ಪ್ರವೇಶ, ಪೀಠೋಪಕರಣ ಧ್ವಂಸ, ಹಲ್ಲೆ ಯತ್ನ ಹಾಗೂ ಪ್ರಾಣ ಬೆದರಿಕೆ ಆರೋಪ ಕುರಿತು ಮುತ್ತಯ್ಯ ದೂರು ನೀಡಿದ್ದರು.<br /> <br /> ಜಿಲ್ಲೆಯ ಸಂಡೂರು ತಾಲ್ಲೂಕಿನ ತುಮಟಿ, ವಿಠಲಾಪುರ ಬಳಿಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ 2008ರ ಅಕ್ಟೋಬರ್ 15ರಂದು ಮಧ್ಯಾಹ್ನ ಅರಣ್ಯ ಇಲಾಖೆ ಕಚೇರಿ ಮುಂದೆ ಮೇಲ್ಕಂಡ ಆರೋಪಿಗಳು ಪ್ರತಿಭಟನೆ ನಡೆಸಿದ್ದರು.<br /> <br /> `ಪ್ರತಿಭಟನೆ ವೇಳೆ ಈ ಎಲ್ಲ 29 ಆರೋಪಿಗಳು ಕಚೇರಿ ಅತಿಕ್ರಮ ಪ್ರವೇಶ ಮಾಡಿ, ಒಳಗೆ ನಡೆಯುತ್ತಿದ್ದ ಸಭೆಗೆ ಅಡ್ಡಿಪಡಿಸಿದ್ದಲ್ಲದೆ, ಸಭೆಯಲ್ಲಿದ್ದ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಪ್ರಾಣ ಬೆದರಿಕೆಯನ್ನೂ ಹಾಕಿದ್ದರು~ ಎಂದು ಆರೋಪಿಸಿ ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಮುತ್ತಯ್ಯ ಅವರು ಬ್ರೂಸ್ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಾಕರ ಬಾಬು ಮತ್ತಿತರರನ್ನು ಬಂಧಿಸಲಾಗಿತ್ತು.<br /> <br /> ಆರೋಪಿಗಳೆಲ್ಲ ನ್ಯಾಯಾಲಯಕ್ಕೆ ಹಾಜರಾಗಿದ್ದು, ದೂರು ನೀಡಿರುವ ಮುತ್ತಯ್ಯ ಅವರನ್ನು ಸಾಕ್ಷ್ಯ ನುಡಿಯುವಂತೆ ಸಮನ್ಸ್ ಜಾರಿಗೊಳಿಸಿದ್ದರಿಂದ ಅವರನ್ನು ಬಳ್ಳಾರಿಗೆ ಕರೆತರಲಾಗಿದೆ.<br /> <br /> ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶರ ಮುಂದೆ ಮುತ್ತಯ್ಯ ಘಟನೆ ಕುರಿತು ವಿವರ ನೀಡಿದರು. ನಂತರ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಲಾಯಿತು. 25 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅರಣ್ಯಾಧಿಕಾರಿ ಶುಕ್ಲಾ ಒಳಗೊಂಡಂತೆ 10 ಅಧಿಕಾರಿಗಳು ಈ ಹಿಂದೆಯೇ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.<br /> <br /> ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಗಣಿ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಇತ್ತೀಚೆಗೆ ಮುತ್ತಯ್ಯ ಅವರನ್ನು ಬಂಧಿಸಿದೆ. <br /> <br /> ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಅವರನ್ನು 18ರ ವರೆಗೆ ಬಳ್ಳಾರಿಯ ಕಾರಾಗೃಹದಲ್ಲೇ ಇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>