<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₨ 2,500 ನಿಗದಿಪಡಿಸಿ ರುವುದು ಸರಿಯಲ್ಲ. ಇಷ್ಟು ಹಣ ನೀಡಲು ತಮ್ಮಿಂದ ಸಾಧ್ಯ ಇಲ್ಲ ಎಂದು ಹೇಳಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರು ಈ ಕುರಿತು ಚರ್ಚಿಸಲು ಸೋಮವಾರ ಸಭೆ ಸೇರಲಿದ್ದಾರೆ. ಸಭೆ ಎಲ್ಲಿ ನಡೆಯುತ್ತದೆ ಎನ್ನುವುದು ಇನ್ನೂ ಖಚಿತವಾಗಿಲ್ಲ.<br /> <br /> ಸರ್ಕಾರದ ನಿಲುವಿಗೆ ಆಕ್ಷೇಪ ಎತ್ತಿ ರುವ ಸಕ್ಕರೆ ಕಾರ್ಖಾನೆಗಳ ಮಾಲೀ ಕರು ಕಾರ್ಖಾನೆಗಳನ್ನು ಮುಚ್ಚಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಗಳ ಸಂಘಟನೆಯ ಕರ್ನಾಟಕ ಘಟಕದ ಸದಸ್ಯರು ಈ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ.</p>.<p>ಸದ್ಯದ ಪರಿಸ್ಥಿತಿ ಯಲ್ಲಿ ಉತ್ತರ ಕರ್ನಾಟಕದಲ್ಲಿನ ಖಾಸಗಿ ಕಾರ್ಖಾನೆಗಳು ₨ 2000 ಕ್ಕಿಂತ ಹೆಚ್ಚು ದರ ನೀಡಲು ಸಾಧ್ಯವಾ ಗುವುದಿಲ್ಲ ಎಂದು ಕಾರ್ಖಾನೆಗಳ ಮಾಲೀಕರು ಪ್ರತಿಪಾದಿಸುತ್ತಿದ್ದಾರೆ. ಈಗ ನಿಗದಿಪಡಿಸಿರುವ ದರವನ್ನು ಪುನರ್ಪರಿಶೀಲಿಸಬೇಕು ಎಂದು ಸರ್ಕಾರವನ್ನು ಕೋರಲು ಕಾರ್ಖಾನೆ ಮಾಲೀಕರು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₨ 2,500 ನಿಗದಿಪಡಿಸಿ ರುವುದು ಸರಿಯಲ್ಲ. ಇಷ್ಟು ಹಣ ನೀಡಲು ತಮ್ಮಿಂದ ಸಾಧ್ಯ ಇಲ್ಲ ಎಂದು ಹೇಳಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರು ಈ ಕುರಿತು ಚರ್ಚಿಸಲು ಸೋಮವಾರ ಸಭೆ ಸೇರಲಿದ್ದಾರೆ. ಸಭೆ ಎಲ್ಲಿ ನಡೆಯುತ್ತದೆ ಎನ್ನುವುದು ಇನ್ನೂ ಖಚಿತವಾಗಿಲ್ಲ.<br /> <br /> ಸರ್ಕಾರದ ನಿಲುವಿಗೆ ಆಕ್ಷೇಪ ಎತ್ತಿ ರುವ ಸಕ್ಕರೆ ಕಾರ್ಖಾನೆಗಳ ಮಾಲೀ ಕರು ಕಾರ್ಖಾನೆಗಳನ್ನು ಮುಚ್ಚಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಗಳ ಸಂಘಟನೆಯ ಕರ್ನಾಟಕ ಘಟಕದ ಸದಸ್ಯರು ಈ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ.</p>.<p>ಸದ್ಯದ ಪರಿಸ್ಥಿತಿ ಯಲ್ಲಿ ಉತ್ತರ ಕರ್ನಾಟಕದಲ್ಲಿನ ಖಾಸಗಿ ಕಾರ್ಖಾನೆಗಳು ₨ 2000 ಕ್ಕಿಂತ ಹೆಚ್ಚು ದರ ನೀಡಲು ಸಾಧ್ಯವಾ ಗುವುದಿಲ್ಲ ಎಂದು ಕಾರ್ಖಾನೆಗಳ ಮಾಲೀಕರು ಪ್ರತಿಪಾದಿಸುತ್ತಿದ್ದಾರೆ. ಈಗ ನಿಗದಿಪಡಿಸಿರುವ ದರವನ್ನು ಪುನರ್ಪರಿಶೀಲಿಸಬೇಕು ಎಂದು ಸರ್ಕಾರವನ್ನು ಕೋರಲು ಕಾರ್ಖಾನೆ ಮಾಲೀಕರು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>