<p><strong>ಬೆಂಗಳೂರು: </strong>ಬೆಂಗಳೂರು ವಿಶ್ವವಿದ್ಯಾಲಯದ ಕೋಲಾರ ಸ್ನಾತಕೋತ್ತರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಗವಿಠಲಾಚಾರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಿರುವ ಸರ್ಕಾರ, ಈ ನಿರ್ಧಾರಕ್ಕೆ ಅನುಮೋದನೆ ನೀಡುವಂತೆ ವಿ.ವಿ. ಕುಲಾಧಿಪತಿಗಳೂ ಆದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಶಿಫಾರಸು ಮಾಡಿದೆ.<br /> <br /> ಸಿಂಡಿಕೇಟ್ ಸದಸ್ಯರಾದ ಡಾ.ಕೆ.ವಿ.ಆಚಾರ್ಯ, ಟಿ.ಎಚ್.ಶ್ರೀನಿವಾಸಯ್ಯ, ಡಿ.ಎಸ್.ಕೃಷ್ಣ, ಸಿ.ಕೆ.ಜಗದೀಶ್ ಪ್ರಸಾದ್, ಡಾ.ಮಾನಸ ನಾಗಭೂಷಣಂ, ಜಹೀದಾ ಮುಲ್ಲಾ ಅವರು ಜುಲೈ 21ರಂದು ನಡೆದ ಸಭೆಯಲ್ಲಿ ಕಾಮಗಾರಿ ನಿಲ್ಲಿಸಲು ಒತ್ತಾಯಿಸಿದ್ದರು. ಇವರ ಮಾತನ್ನೂ ಕಡೆಗಣಿಸಿ ವಿ.ವಿ.ಯ ಆಡಳಿತವು ಕಟ್ಟಡವನ್ನು ಪೂರ್ಣಗೊಳಿಸಲು ನಿರ್ಧರಿಸಿತ್ತು. <br /> <br /> ಈ ನಿರ್ಧಾರವನ್ನು ವಿರೋಧಿಸಿದ ಸದಸ್ಯರು ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರಿಗೆ ಪತ್ರ ಬರೆದಿದ್ದರು. <br /> <br /> ಈ ಪತ್ರದ ಹಿನ್ನೆಲೆಯಲ್ಲಿ ಡಾ.ಆಚಾರ್ಯ ಅವರು ತನಿಖಾ ಸಮಿತಿ ನೇಮಕ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ-2000, ಕಾಯ್ದೆಯ ಕಲಂ 8ರ ಅನ್ವಯ ರಾಜ್ಯಪಾಲರ ಆದೇಶದ ಮೇರೆಗೆ ವಿ.ವಿ. ಅಧಿಕಾರಿಗಳು ನಡೆಸಿದ ಅವ್ಯವಹಾರಗಳನ್ನು ತನಿಖೆ ನಡೆಸಬಹುದಾಗಿದೆ. ಅದೇ ಕಾಯ್ದೆಯ ಕಲಂ 14 (8)ರ ಅನ್ವಯ ವಿ.ವಿ.ಕುಲಪತಿಗಳ ವಿರುದ್ಧ ಆರೋಪಗಳು ಕೇಳಿ ಬಂದಲ್ಲಿ ರಾಜ್ಯ ಸರ್ಕಾರವೇ ವಿಚಾರಣೆ ನಡೆಸಬಹುದಾಗಿದೆ. <br /> <br /> ಸಚಿವ ಆಚಾರ್ಯ ಅವರು ಈ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಕುಲಸಚಿವರು ಮತ್ತು ಹಣಕಾಸು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಲತಾ ಕೃಷ್ಣರಾವ್ ಅವರಿಗೆ ಪತ್ರ ಬರೆದಿದ್ದರು.<br /> ವಿ.ವಿ.ಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಪಾಲರ ಒಪ್ಪಿಗೆ ಅನಿವಾರ್ಯ. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆಗಸ್ಟ್ 23ರಂದು ರಾಜ್ಯಪಾಲರಿಗೆ ಕಳುಹಿಸಿದ ಶಿಫಾರಸು ಪತ್ರದಲ್ಲಿ `ಹಣಕಾಸಿನ ಅವ್ಯವಹಾರದ ಆರೋಪಗಳಿರುವುದನ್ನು ನಮೂದಿಸಿ, ಸೆಕ್ಷನ್ 8ರ ಅನ್ವಯ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಶಿಫಾರಸು ಮಾಡುವುದು. <br /> <br /> ಈ ಸಮಿತಿಗೆ ರಂಗವಿಠಲಾಚಾರ್ ಅವರನ್ನು ನೇಮಕ ಮಾಡಲು ಸಹ ಶಿಫಾರಸಿನಲ್ಲಿ ಸೇರಿಸಬೇಕು~ ಎಂದು ಸೂಚಿಸಲಾಗಿದೆ. ರಾಜ್ಯಪಾಲರು ಅನುಮೋದನೆ ನೀಡಿದ ನಂತರವಷ್ಟೇ ತನಿಖಾ ಸಮಿತಿ ರಚನೆಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ವಿಶ್ವವಿದ್ಯಾಲಯದ ಕೋಲಾರ ಸ್ನಾತಕೋತ್ತರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಗವಿಠಲಾಚಾರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಿರುವ ಸರ್ಕಾರ, ಈ ನಿರ್ಧಾರಕ್ಕೆ ಅನುಮೋದನೆ ನೀಡುವಂತೆ ವಿ.ವಿ. ಕುಲಾಧಿಪತಿಗಳೂ ಆದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಶಿಫಾರಸು ಮಾಡಿದೆ.<br /> <br /> ಸಿಂಡಿಕೇಟ್ ಸದಸ್ಯರಾದ ಡಾ.ಕೆ.ವಿ.ಆಚಾರ್ಯ, ಟಿ.ಎಚ್.ಶ್ರೀನಿವಾಸಯ್ಯ, ಡಿ.ಎಸ್.ಕೃಷ್ಣ, ಸಿ.ಕೆ.ಜಗದೀಶ್ ಪ್ರಸಾದ್, ಡಾ.ಮಾನಸ ನಾಗಭೂಷಣಂ, ಜಹೀದಾ ಮುಲ್ಲಾ ಅವರು ಜುಲೈ 21ರಂದು ನಡೆದ ಸಭೆಯಲ್ಲಿ ಕಾಮಗಾರಿ ನಿಲ್ಲಿಸಲು ಒತ್ತಾಯಿಸಿದ್ದರು. ಇವರ ಮಾತನ್ನೂ ಕಡೆಗಣಿಸಿ ವಿ.ವಿ.ಯ ಆಡಳಿತವು ಕಟ್ಟಡವನ್ನು ಪೂರ್ಣಗೊಳಿಸಲು ನಿರ್ಧರಿಸಿತ್ತು. <br /> <br /> ಈ ನಿರ್ಧಾರವನ್ನು ವಿರೋಧಿಸಿದ ಸದಸ್ಯರು ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರಿಗೆ ಪತ್ರ ಬರೆದಿದ್ದರು. <br /> <br /> ಈ ಪತ್ರದ ಹಿನ್ನೆಲೆಯಲ್ಲಿ ಡಾ.ಆಚಾರ್ಯ ಅವರು ತನಿಖಾ ಸಮಿತಿ ನೇಮಕ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ-2000, ಕಾಯ್ದೆಯ ಕಲಂ 8ರ ಅನ್ವಯ ರಾಜ್ಯಪಾಲರ ಆದೇಶದ ಮೇರೆಗೆ ವಿ.ವಿ. ಅಧಿಕಾರಿಗಳು ನಡೆಸಿದ ಅವ್ಯವಹಾರಗಳನ್ನು ತನಿಖೆ ನಡೆಸಬಹುದಾಗಿದೆ. ಅದೇ ಕಾಯ್ದೆಯ ಕಲಂ 14 (8)ರ ಅನ್ವಯ ವಿ.ವಿ.ಕುಲಪತಿಗಳ ವಿರುದ್ಧ ಆರೋಪಗಳು ಕೇಳಿ ಬಂದಲ್ಲಿ ರಾಜ್ಯ ಸರ್ಕಾರವೇ ವಿಚಾರಣೆ ನಡೆಸಬಹುದಾಗಿದೆ. <br /> <br /> ಸಚಿವ ಆಚಾರ್ಯ ಅವರು ಈ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಕುಲಸಚಿವರು ಮತ್ತು ಹಣಕಾಸು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಲತಾ ಕೃಷ್ಣರಾವ್ ಅವರಿಗೆ ಪತ್ರ ಬರೆದಿದ್ದರು.<br /> ವಿ.ವಿ.ಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಪಾಲರ ಒಪ್ಪಿಗೆ ಅನಿವಾರ್ಯ. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆಗಸ್ಟ್ 23ರಂದು ರಾಜ್ಯಪಾಲರಿಗೆ ಕಳುಹಿಸಿದ ಶಿಫಾರಸು ಪತ್ರದಲ್ಲಿ `ಹಣಕಾಸಿನ ಅವ್ಯವಹಾರದ ಆರೋಪಗಳಿರುವುದನ್ನು ನಮೂದಿಸಿ, ಸೆಕ್ಷನ್ 8ರ ಅನ್ವಯ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಶಿಫಾರಸು ಮಾಡುವುದು. <br /> <br /> ಈ ಸಮಿತಿಗೆ ರಂಗವಿಠಲಾಚಾರ್ ಅವರನ್ನು ನೇಮಕ ಮಾಡಲು ಸಹ ಶಿಫಾರಸಿನಲ್ಲಿ ಸೇರಿಸಬೇಕು~ ಎಂದು ಸೂಚಿಸಲಾಗಿದೆ. ರಾಜ್ಯಪಾಲರು ಅನುಮೋದನೆ ನೀಡಿದ ನಂತರವಷ್ಟೇ ತನಿಖಾ ಸಮಿತಿ ರಚನೆಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>