<p><strong>ಬೆಂಗಳೂರು: </strong>ರಾಜ್ಯ ಮಾನವ ಹಕ್ಕುಗಳ ಆಯೋಗದ(ಎಸ್ಎಚ್ಆರ್ಸಿ) ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ದರ್ಮರ್ ಮುರುಗೇಶನ್ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶಿಸಿದೆ.<br /> <br /> ನ್ಯಾ. ಎಸ್.ಆರ್. ನಾಯಕ್ ಅವರು ನಿವೃತ್ತರಾದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. ಈ ಸಂಬಂಧ ರಾಜ್ಯ ಹೈಕೋರ್ಟ್ನಲ್ಲಿ ಇತ್ತೀಚೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ದಾಖಲಾಗಿತ್ತು. ‘ಅಧ್ಯಕ್ಷರ ಸ್ಥಾನಕ್ಕೆ ಅರ್ಹರನ್ನು ನೇಮಕ ಮಾಡುವ ವಿಚಾರದಲ್ಲಿ ಸರ್ಕಾರ ತ್ವರಿತ ಕ್ರಮಕೈಗೊಳ್ಳಬೇಕು’ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿತ್ತು.<br /> <br /> ನ್ಯಾ.ಮುರುಗೇಶನ್ ಅವರು ಈ ಹಿಂದೆ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು 1994ರಿಂದ 96ರವರೆಗೆ ಚೆನ್ನೈ ಹೈಕೋರ್ಟ್ನಲ್ಲಿ ಸರ್ಕಾರದ ವಿಶೇಷ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.<br /> <br /> 2000ರಲ್ಲಿ ಅವರನ್ನು ಚೆನ್ನೈ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಮುರುಗೇಶನ್ ಅವರು ಕನ್ನಡ ಬಲ್ಲವರು ಎಂದು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಮಾನವ ಹಕ್ಕುಗಳ ಆಯೋಗದ(ಎಸ್ಎಚ್ಆರ್ಸಿ) ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ದರ್ಮರ್ ಮುರುಗೇಶನ್ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶಿಸಿದೆ.<br /> <br /> ನ್ಯಾ. ಎಸ್.ಆರ್. ನಾಯಕ್ ಅವರು ನಿವೃತ್ತರಾದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. ಈ ಸಂಬಂಧ ರಾಜ್ಯ ಹೈಕೋರ್ಟ್ನಲ್ಲಿ ಇತ್ತೀಚೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ದಾಖಲಾಗಿತ್ತು. ‘ಅಧ್ಯಕ್ಷರ ಸ್ಥಾನಕ್ಕೆ ಅರ್ಹರನ್ನು ನೇಮಕ ಮಾಡುವ ವಿಚಾರದಲ್ಲಿ ಸರ್ಕಾರ ತ್ವರಿತ ಕ್ರಮಕೈಗೊಳ್ಳಬೇಕು’ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿತ್ತು.<br /> <br /> ನ್ಯಾ.ಮುರುಗೇಶನ್ ಅವರು ಈ ಹಿಂದೆ ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರು 1994ರಿಂದ 96ರವರೆಗೆ ಚೆನ್ನೈ ಹೈಕೋರ್ಟ್ನಲ್ಲಿ ಸರ್ಕಾರದ ವಿಶೇಷ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.<br /> <br /> 2000ರಲ್ಲಿ ಅವರನ್ನು ಚೆನ್ನೈ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಮುರುಗೇಶನ್ ಅವರು ಕನ್ನಡ ಬಲ್ಲವರು ಎಂದು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>