<p><strong>ನ್ಯೂಯಾರ್ಕ್ (ಪಿಟಿಐ):</strong> ನಟ ಶಾರೂಕ್ ಖಾನ್ ಅವರನ್ನು ಅಮೆರಿಕದ ನ್ಯೂಯಾರ್ಕ್ ವಿಮಾನನಿಲ್ದಾಣದಲ್ಲಿ ಅಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಭಾರತ `ಯಾಂತ್ರಿಕ ಕ್ಷಮಾಯಾಚನೆ~ಯನ್ನು ಒಪ್ಪಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಅಮೆರಿಕದ ಉನ್ನತ ಮಟ್ಟಕ್ಕೆ ಒಯ್ಯುವುದಾಗಿ ತಿಳಿಸಿದೆ.<br /> <br /> ಇಲ್ಲಿನ ಯಾಲೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲೆಂದು ಶಾರೂಕ್ ಖಾನ್ ಇಲ್ಲಿಗೆ ಬಂದಿದ್ದರು. ಆದರೆ ಅವರನ್ನು ನಿಲ್ದಾಣದ ವಲಸೆ ಅಧಿಕಾರಿಗಳು ತಡೆದು ಸುಮಾರು 2 ಗಂಟೆಗಳ ಕಾಲ ವಶಕ್ಕೆ ತೆಗೆದುಕೊಂಡಿದ್ದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಮಧ್ಯಪ್ರವೇಶದ ನಂತರವಷ್ಟೇ ಶಾರೂಕ್ ಅವರನ್ನು ಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.<br /> <br /> ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಅಮೆರಿಕದಲ್ಲಿ ಭಾರತದ ರಾಯಭಾರಿ ಆಗಿರುವ ನಿರುಪಮಾ ರಾವ್ ಅವರನ್ನು ಸಂಪರ್ಕಿಸಿ ಈ ವಿಷಯವನ್ನು ಅಮೆರಿಕದ ಉನ್ನತ ಮಟ್ಟದ ಗಮನಕ್ಕೆ ತರಬೇಕೆಂದು ಹೇಳಿದ್ದಾರೆ.<br /> <br /> ಈ ಪ್ರಕರಣದಿಂದಾಗಿ ಶಾರೂಕ್ ಅವರು ತೀವ್ರವಾಗಿ ವಿಚಲಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ನಂತರ ಅವರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ~ನನಗೆ ಅಹಂಕಾರ ಜಾಸ್ತಿಯಾಯ್ತು ಅನಿಸಿದಾಗ ಅಮೆರಿಕಕ್ಕೆ ಬರುತ್ತೇನೆ. ಇಲ್ಲಿನ ವಲಸೆ ಅಧಿಕಾರಿಗಳು ನನ್ನ ಸ್ಟಾರ್ ಗಿರಿಯನ್ನು ಒದೆಯುತ್ತಾರೆ~ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್ (ಪಿಟಿಐ):</strong> ನಟ ಶಾರೂಕ್ ಖಾನ್ ಅವರನ್ನು ಅಮೆರಿಕದ ನ್ಯೂಯಾರ್ಕ್ ವಿಮಾನನಿಲ್ದಾಣದಲ್ಲಿ ಅಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಭಾರತ `ಯಾಂತ್ರಿಕ ಕ್ಷಮಾಯಾಚನೆ~ಯನ್ನು ಒಪ್ಪಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಅಮೆರಿಕದ ಉನ್ನತ ಮಟ್ಟಕ್ಕೆ ಒಯ್ಯುವುದಾಗಿ ತಿಳಿಸಿದೆ.<br /> <br /> ಇಲ್ಲಿನ ಯಾಲೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲೆಂದು ಶಾರೂಕ್ ಖಾನ್ ಇಲ್ಲಿಗೆ ಬಂದಿದ್ದರು. ಆದರೆ ಅವರನ್ನು ನಿಲ್ದಾಣದ ವಲಸೆ ಅಧಿಕಾರಿಗಳು ತಡೆದು ಸುಮಾರು 2 ಗಂಟೆಗಳ ಕಾಲ ವಶಕ್ಕೆ ತೆಗೆದುಕೊಂಡಿದ್ದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಮಧ್ಯಪ್ರವೇಶದ ನಂತರವಷ್ಟೇ ಶಾರೂಕ್ ಅವರನ್ನು ಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.<br /> <br /> ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಅಮೆರಿಕದಲ್ಲಿ ಭಾರತದ ರಾಯಭಾರಿ ಆಗಿರುವ ನಿರುಪಮಾ ರಾವ್ ಅವರನ್ನು ಸಂಪರ್ಕಿಸಿ ಈ ವಿಷಯವನ್ನು ಅಮೆರಿಕದ ಉನ್ನತ ಮಟ್ಟದ ಗಮನಕ್ಕೆ ತರಬೇಕೆಂದು ಹೇಳಿದ್ದಾರೆ.<br /> <br /> ಈ ಪ್ರಕರಣದಿಂದಾಗಿ ಶಾರೂಕ್ ಅವರು ತೀವ್ರವಾಗಿ ವಿಚಲಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ನಂತರ ಅವರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ~ನನಗೆ ಅಹಂಕಾರ ಜಾಸ್ತಿಯಾಯ್ತು ಅನಿಸಿದಾಗ ಅಮೆರಿಕಕ್ಕೆ ಬರುತ್ತೇನೆ. ಇಲ್ಲಿನ ವಲಸೆ ಅಧಿಕಾರಿಗಳು ನನ್ನ ಸ್ಟಾರ್ ಗಿರಿಯನ್ನು ಒದೆಯುತ್ತಾರೆ~ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>