<p><strong>ಬೆಂಗಳೂರು:</strong> ಉಡುಪಿ ಶ್ರೀಕೃಷ್ಣ ಮಠದಲ್ಲಿನ ಪಂಕ್ತಿಭೇದ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಡೆಸ್ನಾನ ಆಚರಣೆ ವಿರೋಧಿಸಿ ಜುಲೈ 9ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಿಪಿಎಂ ಕರೆ ನೀಡಿದೆ.<br /> <br /> ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮಾರುತಿ ಮಾನ್ಪಡೆ, ಜಿ.ಎನ್.ನಾಗರಾಜ್, `ಉಡುಪಿಯ ಕೃಷ್ಣಮಠ, ಕುಕ್ಕೆಯಲ್ಲಿನ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯದಾದ್ಯಂತ ಚಳವಳಿ ನಡೆಸಲಾಗುವುದು' ಎಂದರು.<br /> <br /> `ಉಡುಪಿಯ ಕೃಷ್ಣ ಮಠದಲ್ಲಿ ಭಕ್ತರನ್ನು ಶಾಖಾಹಾರಿಗಳು ಮತ್ತು ಮಾಂಸಾಹಾರಿಗಳು ಎಂದು ವರ್ಗೀಕರಿಸಿ ತಾರತಮ್ಯ ಮಾಡಲಾಗುತ್ತದೆ. ಒಂದು ವರ್ಗದವ ರನ್ನು ನೆಲದ ಮೇಲೆ ಕೂರಿಸಿ ಊಟ ಹಾಕಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಕೂಡ ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಕೆಟ್ಟ ಪದ್ಧತಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತೇವೆ' ಎಂದರು.<br /> <br /> `ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮಡೆ ಸ್ನಾನವನ್ನು ನಿಲ್ಲಿಸುವ ಮಾತನಾಡಿದ್ದ ಸರ್ಕಾರ, ಮತ್ತೆ ಅದನ್ನು ಮುಂದುವರಿಸಿದೆ.<br /> <br /> ಬ್ರಾಹ್ಮಣರು ಉಂಡ ಎಲೆಗಳ ಮೇಲೆ ಇತರೆ ಜಾತಿಯವರು ಉರುಳುವ ಅನಿಷ್ಠ ಪದ್ಧತಿಯನ್ನು ತೊಡೆದುಹಾಕುವ ಕೆಲಸ ಆಗಬೇಕು. ಈ ಕುರಿತು ರಾಜ್ಯ ಸರ್ಕಾರ ಕಠಿಣ ನಿಲುವು ತಾಳಬೇಕು. ದೇವಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಲು ಮುಂದಾಗಬೇಕು' ಎಂದು ಆಗ್ರಹಿಸಿದರು.<br /> <br /> ದೇವಾಲಯಗಳಲ್ಲಿ ತಾರತಮ್ಯ ನಿಷೇಧಿಸುವಂತೆ ಸರ್ಕಾರವನ್ನು ಆಗ್ರಹಿಸಲು ಜು.9ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪ್ರಗತಿಪರ ನಾಗರಿಕರು ಪ್ರತಿಭಟನೆ ನಡೆಸುತ್ತಾರೆ. ಈ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಡುಪಿ ಶ್ರೀಕೃಷ್ಣ ಮಠದಲ್ಲಿನ ಪಂಕ್ತಿಭೇದ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಡೆಸ್ನಾನ ಆಚರಣೆ ವಿರೋಧಿಸಿ ಜುಲೈ 9ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಿಪಿಎಂ ಕರೆ ನೀಡಿದೆ.<br /> <br /> ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮಾರುತಿ ಮಾನ್ಪಡೆ, ಜಿ.ಎನ್.ನಾಗರಾಜ್, `ಉಡುಪಿಯ ಕೃಷ್ಣಮಠ, ಕುಕ್ಕೆಯಲ್ಲಿನ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯದಾದ್ಯಂತ ಚಳವಳಿ ನಡೆಸಲಾಗುವುದು' ಎಂದರು.<br /> <br /> `ಉಡುಪಿಯ ಕೃಷ್ಣ ಮಠದಲ್ಲಿ ಭಕ್ತರನ್ನು ಶಾಖಾಹಾರಿಗಳು ಮತ್ತು ಮಾಂಸಾಹಾರಿಗಳು ಎಂದು ವರ್ಗೀಕರಿಸಿ ತಾರತಮ್ಯ ಮಾಡಲಾಗುತ್ತದೆ. ಒಂದು ವರ್ಗದವ ರನ್ನು ನೆಲದ ಮೇಲೆ ಕೂರಿಸಿ ಊಟ ಹಾಕಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಕೂಡ ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಕೆಟ್ಟ ಪದ್ಧತಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತೇವೆ' ಎಂದರು.<br /> <br /> `ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮಡೆ ಸ್ನಾನವನ್ನು ನಿಲ್ಲಿಸುವ ಮಾತನಾಡಿದ್ದ ಸರ್ಕಾರ, ಮತ್ತೆ ಅದನ್ನು ಮುಂದುವರಿಸಿದೆ.<br /> <br /> ಬ್ರಾಹ್ಮಣರು ಉಂಡ ಎಲೆಗಳ ಮೇಲೆ ಇತರೆ ಜಾತಿಯವರು ಉರುಳುವ ಅನಿಷ್ಠ ಪದ್ಧತಿಯನ್ನು ತೊಡೆದುಹಾಕುವ ಕೆಲಸ ಆಗಬೇಕು. ಈ ಕುರಿತು ರಾಜ್ಯ ಸರ್ಕಾರ ಕಠಿಣ ನಿಲುವು ತಾಳಬೇಕು. ದೇವಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಲು ಮುಂದಾಗಬೇಕು' ಎಂದು ಆಗ್ರಹಿಸಿದರು.<br /> <br /> ದೇವಾಲಯಗಳಲ್ಲಿ ತಾರತಮ್ಯ ನಿಷೇಧಿಸುವಂತೆ ಸರ್ಕಾರವನ್ನು ಆಗ್ರಹಿಸಲು ಜು.9ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪ್ರಗತಿಪರ ನಾಗರಿಕರು ಪ್ರತಿಭಟನೆ ನಡೆಸುತ್ತಾರೆ. ಈ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>