<p><strong>ಚಾಮರಾಜನಗರ: </strong>ಬೌದ್ಧ ಧರ್ಮವನ್ನು ಪ್ರಚುರಪಡಿಸುವ ಪಂಚಶೀಲ ಪಾದಯಾತ್ರೆಯನ್ನು ತಾಲ್ಲೂಕಿನ ಮರಿಯಾಲದಹುಂಡಿಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು.<br /> <br /> ಗ್ರಾಮದ ಅಂಬೇಡ್ಕರ್ ಸಮುದಾಯ ಭವನಕ್ಕೆ ಆಗಮಿಸಿ ಬುದ್ಧನ ಪಂಚಶೀಲ ಪಾದಯಾತ್ರೆಗೆ ಪೂಜೆ ಸಲ್ಲಿಸಿದರು. ನಂತರ, ಮೊಂಬತ್ತಿ ಹಿಡಿದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.<br /> <br /> ಬಂತೇಜಿ ಸಂಘಪಾಲ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಹಣದ ಆಸೆಗೆ ಮಾನಸಿಕ ನೆಮ್ಮದಿ ದೂರವಾಗಿದೆ. ನೆಮ್ಮದಿಗಾಗಿ ಬುದ್ದನ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಬುದ್ದ ಧರ್ಮವನ್ನು ಸ್ವೀಕರಿಸಿ ಶಾಂತಿ, ಸಹಬಾಳ್ವೆ ಹಾಗೂ ಅಹಿಂಸೆ ಮಾರ್ಗದಲ್ಲಿ ಸುಖದ ಜೀವನ ನಡೆಸಲು ಮುಂದಾಗಬೇಕು’ ಎಂದರು.<br /> <br /> ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಅಭಿವೃದ್ಧಿ ಪಡಿಸಲು ಮುಂದಾಗಬೇಕು. ದ್ವೇಷ, ಅಸೂಯೆ ಬಿಟ್ಟು ಶಾಂತಿಯ ಪಾಲನೆ ಮಾಡಬೇಕು. ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು. ಸುಶಿಕ್ಷತರಾಗಿ ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು’ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಎಂ.ಎಸ್. ಮಾದಯ್ಯ, ಮುಖಂಡರಾದ ದೇವಯ್ಯ, ಗುರುಪ್ರಸಾದ್, ಎಂ.ಬಿ. ಪ್ರಕಾಶ್, ಮಂಜು, ಮಹೇಶ್, ನಾಗರಾಜು, ಕುಮಾರ್, ಸಿ.ಎಂ. ಕೃಷ್ಣಮೂರ್ತಿ, ಸಂಬುದ್ದ ಟ್ರಸ್ಟ್ನ ಮಹೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಬೌದ್ಧ ಧರ್ಮವನ್ನು ಪ್ರಚುರಪಡಿಸುವ ಪಂಚಶೀಲ ಪಾದಯಾತ್ರೆಯನ್ನು ತಾಲ್ಲೂಕಿನ ಮರಿಯಾಲದಹುಂಡಿಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು.<br /> <br /> ಗ್ರಾಮದ ಅಂಬೇಡ್ಕರ್ ಸಮುದಾಯ ಭವನಕ್ಕೆ ಆಗಮಿಸಿ ಬುದ್ಧನ ಪಂಚಶೀಲ ಪಾದಯಾತ್ರೆಗೆ ಪೂಜೆ ಸಲ್ಲಿಸಿದರು. ನಂತರ, ಮೊಂಬತ್ತಿ ಹಿಡಿದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.<br /> <br /> ಬಂತೇಜಿ ಸಂಘಪಾಲ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಹಣದ ಆಸೆಗೆ ಮಾನಸಿಕ ನೆಮ್ಮದಿ ದೂರವಾಗಿದೆ. ನೆಮ್ಮದಿಗಾಗಿ ಬುದ್ದನ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಬುದ್ದ ಧರ್ಮವನ್ನು ಸ್ವೀಕರಿಸಿ ಶಾಂತಿ, ಸಹಬಾಳ್ವೆ ಹಾಗೂ ಅಹಿಂಸೆ ಮಾರ್ಗದಲ್ಲಿ ಸುಖದ ಜೀವನ ನಡೆಸಲು ಮುಂದಾಗಬೇಕು’ ಎಂದರು.<br /> <br /> ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಅಭಿವೃದ್ಧಿ ಪಡಿಸಲು ಮುಂದಾಗಬೇಕು. ದ್ವೇಷ, ಅಸೂಯೆ ಬಿಟ್ಟು ಶಾಂತಿಯ ಪಾಲನೆ ಮಾಡಬೇಕು. ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು. ಸುಶಿಕ್ಷತರಾಗಿ ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು’ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಎಂ.ಎಸ್. ಮಾದಯ್ಯ, ಮುಖಂಡರಾದ ದೇವಯ್ಯ, ಗುರುಪ್ರಸಾದ್, ಎಂ.ಬಿ. ಪ್ರಕಾಶ್, ಮಂಜು, ಮಹೇಶ್, ನಾಗರಾಜು, ಕುಮಾರ್, ಸಿ.ಎಂ. ಕೃಷ್ಣಮೂರ್ತಿ, ಸಂಬುದ್ದ ಟ್ರಸ್ಟ್ನ ಮಹೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>