<p>ಬೆಂಗಳೂರು: ಗ್ರಾಮ ಪಂಚಾಯತ್ಗಳಿಗೆ ನೀಡಲಾದ ಸಂವಿಧಾನಬದ್ಧ ಅಧಿಕಾರದ ಮೇಲೆ ಮತ್ತೊಂದು ಗದಾಪ್ರಹಾರ ನಡೆದಿದ್ದು, ಈಚೆಗೆ ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆ ಅಂಗೀಕರಿಸುವುದರ ಮೂಲಕ ಅನ್ಯಾಯ ಎಸಗಿದೆ ಎಂದು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಪ್ರಧಾನ ಕಾರ್ಯದರ್ಶಿ ದಾಮೋದರ ಆಚಾರ್ಯ ತಿಳಿಸಿದ್ದಾರೆ.<br /> <br /> ಸಭಾಧ್ಯಕ್ಷರು ಮತ್ತು ವಿರೋಧ ಪಕ್ಷಗಳ ತೀವ್ರ ಅಸಮಾಧಾನದ ನಡುವೆಯೂ ಈ ಮಸೂದೆಯನ್ನ ತರಾತುರಿಯಲ್ಲಿ ಅಂಗೀಕಾರ ಮಾಡಲಾಗಿದೆ. ಇದರಿಂದ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿಂತಿರುವ ಪಂಚಾಯತ್ ವ್ಯವಸ್ಥೆಯ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ನಿರ್ಲಕ್ಷ್ಯಿಸಿದೆ ಎಂದು ದೂರಿದ್ದಾರೆ.<br /> <br /> `ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಸಭೆಗಳ ಸಾರ್ವಭೌಮತೆಯನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ಈ ಮಸೂದೆಯಿಂದ ಸತತವಾಗಿ ಗ್ರಾಮ ಸಭೆ ನಡೆಸದ ಪಂಚಾಯತ್ ಸದಸ್ಯರ ಹಾಗೂ ಅಧ್ಯಕ್ಷರನ್ನು ಅನರ್ಹಗೊಳಿಸುವ ಅಧಿಕಾರವನ್ನು ಪ್ರಾದೇಶಿಕ ಆಯುಕ್ತರಿಗೆ ನೀಡಿರುವುದು ಸರಿಯಲ್ಲ. ಈ ಮಸೂದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ' ಎಂದಿರುವ ಅವರು, `ಜನಪ್ರತಿನಿಧಿಗಳಿಗೆ ಸಂವಿಧಾನಾತ್ಮಕವಾಗಿಯೇ ನೀಡಲಾದ ಹಕ್ಕುಗಳನ್ನು ಚಲಾಯಿಸಲು ಈ ಮಸೂದೆ ಅಡ್ಡಿಯಾಗುತ್ತದೆ.<br /> ಗ್ರಾಮಸಭೆಗಳನ್ನು ನಡೆಸದೇ ಇರಲು ಹಲವು ಕಾರಣಗಳಿರುತ್ತದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು' ಎಂದು ಹೇಳಿದ್ದಾರೆ.<br /> <br /> `ಚುನಾಯಿತ ಪ್ರತಿನಿಧಿಗಳು ಅಧಿಕಾರವನ್ನು ಸಮರ್ಥವಾಗಿ ಬಳಸುವ ಬಗ್ಗೆ, ಯೋಜನೆಗಳ ಮೂಲಕ ಗ್ರಾಮವನ್ನು ಸಶಕ್ತವಾಗಿಸುವ ಬದಲು ಅಧಿಕಾರಶಾಹಿಗಳಿಗೆ ಸರ್ಕಾರ ಮನ್ನಣೆ ನೀಡುತ್ತಿರುವುದು ಬೇಸರದ ವಿಚಾರ. ಇದರಿಂದ ಪಟ್ಟಭದ್ರ ಹಿತಾಸಕ್ತಿಯನ್ನು ಪೋಷಿಸಿದಂತಾಗುತ್ತದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು' ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗ್ರಾಮ ಪಂಚಾಯತ್ಗಳಿಗೆ ನೀಡಲಾದ ಸಂವಿಧಾನಬದ್ಧ ಅಧಿಕಾರದ ಮೇಲೆ ಮತ್ತೊಂದು ಗದಾಪ್ರಹಾರ ನಡೆದಿದ್ದು, ಈಚೆಗೆ ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆ ಅಂಗೀಕರಿಸುವುದರ ಮೂಲಕ ಅನ್ಯಾಯ ಎಸಗಿದೆ ಎಂದು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಪ್ರಧಾನ ಕಾರ್ಯದರ್ಶಿ ದಾಮೋದರ ಆಚಾರ್ಯ ತಿಳಿಸಿದ್ದಾರೆ.<br /> <br /> ಸಭಾಧ್ಯಕ್ಷರು ಮತ್ತು ವಿರೋಧ ಪಕ್ಷಗಳ ತೀವ್ರ ಅಸಮಾಧಾನದ ನಡುವೆಯೂ ಈ ಮಸೂದೆಯನ್ನ ತರಾತುರಿಯಲ್ಲಿ ಅಂಗೀಕಾರ ಮಾಡಲಾಗಿದೆ. ಇದರಿಂದ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿಂತಿರುವ ಪಂಚಾಯತ್ ವ್ಯವಸ್ಥೆಯ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ನಿರ್ಲಕ್ಷ್ಯಿಸಿದೆ ಎಂದು ದೂರಿದ್ದಾರೆ.<br /> <br /> `ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಸಭೆಗಳ ಸಾರ್ವಭೌಮತೆಯನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ಈ ಮಸೂದೆಯಿಂದ ಸತತವಾಗಿ ಗ್ರಾಮ ಸಭೆ ನಡೆಸದ ಪಂಚಾಯತ್ ಸದಸ್ಯರ ಹಾಗೂ ಅಧ್ಯಕ್ಷರನ್ನು ಅನರ್ಹಗೊಳಿಸುವ ಅಧಿಕಾರವನ್ನು ಪ್ರಾದೇಶಿಕ ಆಯುಕ್ತರಿಗೆ ನೀಡಿರುವುದು ಸರಿಯಲ್ಲ. ಈ ಮಸೂದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ' ಎಂದಿರುವ ಅವರು, `ಜನಪ್ರತಿನಿಧಿಗಳಿಗೆ ಸಂವಿಧಾನಾತ್ಮಕವಾಗಿಯೇ ನೀಡಲಾದ ಹಕ್ಕುಗಳನ್ನು ಚಲಾಯಿಸಲು ಈ ಮಸೂದೆ ಅಡ್ಡಿಯಾಗುತ್ತದೆ.<br /> ಗ್ರಾಮಸಭೆಗಳನ್ನು ನಡೆಸದೇ ಇರಲು ಹಲವು ಕಾರಣಗಳಿರುತ್ತದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು' ಎಂದು ಹೇಳಿದ್ದಾರೆ.<br /> <br /> `ಚುನಾಯಿತ ಪ್ರತಿನಿಧಿಗಳು ಅಧಿಕಾರವನ್ನು ಸಮರ್ಥವಾಗಿ ಬಳಸುವ ಬಗ್ಗೆ, ಯೋಜನೆಗಳ ಮೂಲಕ ಗ್ರಾಮವನ್ನು ಸಶಕ್ತವಾಗಿಸುವ ಬದಲು ಅಧಿಕಾರಶಾಹಿಗಳಿಗೆ ಸರ್ಕಾರ ಮನ್ನಣೆ ನೀಡುತ್ತಿರುವುದು ಬೇಸರದ ವಿಚಾರ. ಇದರಿಂದ ಪಟ್ಟಭದ್ರ ಹಿತಾಸಕ್ತಿಯನ್ನು ಪೋಷಿಸಿದಂತಾಗುತ್ತದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು' ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>