<p><strong>ರಿಪ್ಪನ್ಪೇಟೆ:</strong> ಸರ್ಕಾರದಿಂದ ಮಂಜೂರಾದ ಕಾಮಗಾರಿಗೆ ಅಡ್ಡಿ ಪಡಿಸುತ್ತಿದ್ದಾರೆಂದು ಆರೋಪಿಸಿ ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಬರುವೆ ಗ್ರಾಮಸ್ಥರು ಶಾಸಕರಲ್ಲಿ ಶುಕ್ರವಾರ ದೂರು ಸಲ್ಲಿಸಿದ್ದಾರೆ.</p>.<p>ಬರುವೆ ಗ್ರಾಮದ ಶಬರೀಶ ನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅನುದಾನದಲ್ಲಿ ಮಂಜೂರಾದ ಒಳಚರಂಡಿ ಯೋಜನೆ ಕಾಮಗಾರಿ ನಡೆಸಲು ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯ ಬಿ.ಕೆ. ನಾಗರಾಜ ಅಡ್ಡಿಪಡಿಸಿದ್ದಾರೆಂದು ಗ್ರಾಮಸ್ಥರ ಆರೋಪ.</p>.<p>ಸರ್ವೇ ನಂ. 80ರಲ್ಲಿ ಇರುವ ಸರ್ಕಾರಿ ಈ ಜಾಗವನ್ನು ಅವರು ಒತ್ತುವರಿ ಮಾಡಿಕೊಂಡಿದ್ದು, ಇದೀಗ ಸದರಿ ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದು, ಅವರ ಮೇಲೆ ಕಾನೂನು ಕ್ರಮಕೈಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಈ ಜಾಗ ತೆರವುಗೊಳಿಸಿ ಕಾಮಗಾರಿಗೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿ ಮನವಿ ಸಲ್ಲಿಸಿದರು. </p>.<p>ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಮಧುಚಂದ್ರ, ಆರ್.ಎಸ್. ನಾಗರಾಜ, ಬಿ.ಎಲ್. ಸುರೇಶ, ಟೀಕಾಚಾರಿ, ಮಂಜುನಾಥ ಸರ್ದಾರ್, ಉಮಾಪತಿ, ಹಾಗೂ ಚಂದ್ರಶೇಖರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಸರ್ಕಾರದಿಂದ ಮಂಜೂರಾದ ಕಾಮಗಾರಿಗೆ ಅಡ್ಡಿ ಪಡಿಸುತ್ತಿದ್ದಾರೆಂದು ಆರೋಪಿಸಿ ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಬರುವೆ ಗ್ರಾಮಸ್ಥರು ಶಾಸಕರಲ್ಲಿ ಶುಕ್ರವಾರ ದೂರು ಸಲ್ಲಿಸಿದ್ದಾರೆ.</p>.<p>ಬರುವೆ ಗ್ರಾಮದ ಶಬರೀಶ ನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅನುದಾನದಲ್ಲಿ ಮಂಜೂರಾದ ಒಳಚರಂಡಿ ಯೋಜನೆ ಕಾಮಗಾರಿ ನಡೆಸಲು ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯ ಬಿ.ಕೆ. ನಾಗರಾಜ ಅಡ್ಡಿಪಡಿಸಿದ್ದಾರೆಂದು ಗ್ರಾಮಸ್ಥರ ಆರೋಪ.</p>.<p>ಸರ್ವೇ ನಂ. 80ರಲ್ಲಿ ಇರುವ ಸರ್ಕಾರಿ ಈ ಜಾಗವನ್ನು ಅವರು ಒತ್ತುವರಿ ಮಾಡಿಕೊಂಡಿದ್ದು, ಇದೀಗ ಸದರಿ ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದು, ಅವರ ಮೇಲೆ ಕಾನೂನು ಕ್ರಮಕೈಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಈ ಜಾಗ ತೆರವುಗೊಳಿಸಿ ಕಾಮಗಾರಿಗೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿ ಮನವಿ ಸಲ್ಲಿಸಿದರು. </p>.<p>ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಮಧುಚಂದ್ರ, ಆರ್.ಎಸ್. ನಾಗರಾಜ, ಬಿ.ಎಲ್. ಸುರೇಶ, ಟೀಕಾಚಾರಿ, ಮಂಜುನಾಥ ಸರ್ದಾರ್, ಉಮಾಪತಿ, ಹಾಗೂ ಚಂದ್ರಶೇಖರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>